Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ

Health

ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ

Public TV
Last updated: June 25, 2022 11:41 am
Public TV
Share
2 Min Read
curry leaves3
SHARE

ಕರಿಬೇವು ಎಂದಾಕ್ಷಣ ಒಗ್ಗರಣೆಯ ನೆನಪಾಗುತ್ತದೆ. ಇದನ್ನು ಒಗ್ಗರಣೆ ಸೊಪ್ಪು ಎಂದು ಕೂಡ ಕರೆಯುತ್ತಾರೆ. ಕರಿಬೇವನ್ನು ಆಹಾರ ಪದಾರ್ಥಗಳಲ್ಲಿ ಹೆಚ್ಚಾಗಿ ಉಪಯೋಗಿಸದಿದ್ದರೆ ರುಚಿಯೇ ಬರುವುದಿಲ್ಲ. ಸಾಂಬಾರಿಗೆ ಒಗ್ಗರಣೆ ಹಾಕಲು, ಬಜೆ ಮಾಡಲು, ಚಟ್ನಿ ಮಾಡಲು, ಪಲ್ಯ ಮಾಡುವಾಗ ಇದರ ಬಳಕೆ ಹೆಚ್ಚು. ಕರಿಬೇವು ಇಲ್ಲದ ಅಡುಗೆ ರುಚಿಹೀನ ಎನ್ನಬಹುದು. ಈ ಕರಿಬೇವು ಅಡುಗೆಗೆ ಮಾತ್ರ ಸೀಮಿತವಾಗಿಲ್ಲ. ಇದನ್ನು ಸೌಂದರ್ಯ ವರ್ಧಕವಾಗಿಯೂ ಉಪಯೋಗಿಸುತ್ತಾರೆ. ಅಷ್ಟೆ ಅಲ್ಲದೆ ಕರಿಬೇವಿನಲ್ಲಿ ಕಾರ್ಬೋಹೈಡ್ರೇಟ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ವಿಟಮಿನ್ ಸಿ, ಬಿ, ಎ ಪೋಷಕಾಂಶಗಳು ಇದ್ದು ಔಷಧೀಯ ಗುಣವನ್ನು ಹೊಂದಿದೆ.

Curry tree

ಬಿಳಿ ಕೂದಲು ಕಡಿಮೆ: ಬಿಳಿ ಕೂದಲ ಸಮಸ್ಯೆಯನ್ನು ಕರಿಬೇವು ದೂರ ಮಾಡುತ್ತದೆ. ದೇಹದಲ್ಲಿ ಪೋಷಕಾಂಶದ ಕೊರತೆಯಾದಾಗ ಮಕ್ಕಳಿಗೆ ಕೂದಲು ಬೇಗ ಬಿಳಿಯಾಗುತ್ತದೆ. ಇಂತಹ ಸಮಸ್ಯೆಗೆ ಕರಿಬೇವು ತುಂಬಾ ಸಹಕಾರಿಯಾಗಿದೆ. ಹಾಗೂ ಕೂದಲ ಬೆಳವಣಿಗೆಗೂ ಉಪಯುಕ್ತವಾಗಿದೆ. ಕರಿಬೇವಿನ ಎಲೆಗಳನ್ನು ಒಣಗಿಸಿ, ಅದನ್ನು ಕೊಬ್ಬರಿ ಎಣ್ಣೆಯಲ್ಲಿ, ಎಣ್ಣೆ ಹಸಿರು ಬಣ್ಣಕ್ಕೆ ಬರುವವರೆಗೂ ಕುದಿಸಬೇಕು. ನಂತರ ತಣಿಸಿ ಕೂದಲಿಗೆ ಪ್ರತಿ ವಾರಕೊಮ್ಮೆ ಹಚ್ಚುವುದರಿಂದ ಕೂದಲು ಬಿಳಿಯಾಗುವುದನ್ನು ತಡೆಯಬಹುದು.

white hair

ಎಸಿಡಿಟಿ ಕಡಿಮೆ: ಕರಿಬೇವಿನ ಮರದ ತೊಗಟೆಯನ್ನು ಒಣಗಿಸಿ, ಪುಡಿ ಮಾಡಿಕೊಂಡು, ಒಂದು ಚಮಚ ಆ ಪುಡಿಯನ್ನು ನೀರಲ್ಲಿ ಬೆರಸಿ ಸೇವಿಸದರೆ ಎಸಿಡಿಟಿ ಕಡಿಮೆಯಾಗುತ್ತದೆ. ಕರಿಬೇವಿಗೆ ಸಕ್ಕರೆ ಮತ್ತು ನಿಂಬೆ ರಸವನ್ನು ಸೇರಿಸಿ ಕಡಿಯುವುದರಿಂದ ಎಸಿಡಿಟಿ ಕಡಿಮೆ ಆಗುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಾಮಕಸ್ತೂರಿ ಬೀಜ ಬಲು ಆರೋಗ್ಯಕಾರಿ

ಬೇಧಿ, ಆಮಶಂಕೆ ನಿವಾರಣೆ: ಎಳೆಯದಾದ ಕರಿಬೇವಿನ ಎಲೆಯನ್ನು ಜೇನು ತುಪ್ಪದೊಂದಿಗೆ ತಿನ್ನುವುದು, ಅಥವಾ ಕರಿಬೇವಿನ ಎಲೆಯನ್ನು ಚೆನ್ನಾಗಿ ಅರೆದು ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಸೇರಿಸಿ ಕುಡಿಯುವುದರಿಂದ ಬೇಧಿ, ಆಮಶಂಕೆಯನ್ನು ನಿವಾರಿಸಬಹುದು.

curry leaves4

ಬೊಜ್ಜು ಕರಗಿಸಲು ಕರಿಬೇವು: ಕೆಲವರಿಗೆ ದೇಹದ ತೂಕ ಕಡಿಮೆ ಮಾಡುವುದು ಹೇಗೆ ಎಂಬುದೇ ದೊಡ್ಡ ಚಿಂತೆಯಾಗಿರುತ್ತದೆ. ಕರಿಬೇವು ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಮೂಲಕ ದೇಹದ ತೂಕವನ್ನು ಕಡಿಮೆಗೊಳಿಸುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ 8 ರಿಂದ 10 ತಾಜಾ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ದೇಹದ ತೂಕ ಕಡಿಮೆ ಮಾಡಬಹುದು. ಇದನ್ನೂ ಓದಿ: ನೋಡಲು ಪುಟ್ಟದಾಗಿರುವ ನೆಲನೆಲ್ಲಿಯಿಂದ ಬೆಟ್ಟದಷ್ಟು ಪ್ರಯೋಜನ

Curry tree 2

ಕಾಮಾಲೆ ರೋಗಕ್ಕೆ ಕರಿಬೇವು ಮದ್ದು:  ಕರಿಬೇವು ಕಾಮಾಲೆ ರೋಗಕ್ಕೆ ರಾಮಮದ್ದು ಆಗಿದೆ. 10 ರಿಂದ 12 ಕರಿಬೇವಿನ ಎಲೆಗಳನ್ನ ನೀರಿನಲ್ಲಿ ಚೆನ್ನಾಗಿ ತೊಳೆಯಬೇಕು. ಏಕೆಂದರೆ ಎಲೆಗಳ ಮೇಲೆ ಸಣ್ಣ ಪುಟ್ಟ ಕಶ್ಮಲಗಳು ಅಥವಾ ಹುಳು ಹಪ್ಪಟೆಗಳು ಹರಿದಿರುವ ಸಾಧ್ಯತೆ ಇರುತ್ತದೆ. ನಂತರ ಎಲೆಗಳನ್ನು ಅರೆದು ಆ ಮಿಶ್ರಣವನ್ನು ಸುಮಾರು 60 ರಿಂದ 100 ಮಿ.ಲೀ ಎಳೆನೀರಿನೊಂದಿಗೆ ಕುಡಿಯುವುದರಿಂದ ಕಾಮಾಲೆ ರೋಗವನ್ನು ಹೋಗಲಾಡಿಸಬಹುದು.

Curry tree 1

ರಕ್ತಹೀನತೆ ನಿವಾರಣೆ: 1/2 ಚಮಚ ಕರಿಬೇವು ಸೊಪ್ಪಿನ ಪುಡಿಯನ್ನು, ಜೇನು ತುಪ್ಪದ ಜೊತೆ ಸಮ ಪ್ರಮಾಣದಲ್ಲಿ ಬೆರಸಿ ಸೇವಿಸುವುದರಿಂದ ಅದರಲ್ಲಿರುವ ಕಬ್ಬಿಣದ ಅಂಶ ರಕ್ತಹೀನತೆಯನ್ನು ನಿವಾರಿಸುತ್ತದೆ. ಕರಿಬೇವು ಅನೇಕ ರೋಗಗಳಿಗೆ ಸಹಕಾರಿಯಾಗಿದೆ. ಕರಿಬೇವಿನ ಕಷಾಯ ಕುಡಿಯುವುದರಿಂದ ದೇಹದಲ್ಲಿ ಉಷ್ಣತೆ ಕಡಿಮೆ ಮಾಡುವುದರ ಮೂಲಕ ಜ್ವರವನ್ನು ಕಡಿಮೆಮಾಡಬಹುದು. ಮತ್ತು ಕರಿಬೇವು ಮೂಗು ಕಟ್ಟುವುದು, ಶ್ವಾಸಕೋಶದ ಸಮಸ್ಯೆ, ಮತ್ತು ಹೃದಯ ರೋಗದ ಸಮಸ್ಯೆಗಳನ್ನೂ ಹೋಗಲಾಡಿಸುತ್ತದೆ. ಆಲ್ಕೋಹಾಲ್ ಸೇವಿಸುವವರು ಆಹಾರದಲ್ಲಿ ಕರಿಬೇವನ್ನು ಸೇವಿಸುವುದರಿಂದ ಲಿವರ್ ಸಂಬಂಧಿತ ಕಾಯಿಲೆಗಳಿಂದ ದೂರವಿರಬಹುದು. ಇದನ್ನೂ ಓದಿ: ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದೀರಾ..?- ಹಾಗಾದರೆ ಇಲ್ಲಿದೆ ಮನೆ ಮದ್ದು

Live Tv

TAGGED:Curry leaveshealthಆರೋಗ್ಯಕರಿಬೇವು
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

crime news bhadravati police shoot rowdy sheeter leg
Crime

ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು

Public TV
By Public TV
11 minutes ago
Gruhalakshmi Scheme 1
Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
By Public TV
54 minutes ago
IG Vartika katiyar
Bellary

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

Public TV
By Public TV
1 hour ago
Harley Davidson bike trump
Automobile

India-US Trade Deal | ಭಾರತದಲ್ಲಿ ಹಾರ್ಲೆ- ಡೇವಿಡ್ಸನ್‌ ಬೈಕ್ ಬೆಲೆ ಭಾರೀ ಇಳಿಕೆ!

Public TV
By Public TV
3 hours ago
Kanakapura 40 Wild Elephant Spotted
Districts

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
3 hours ago
Daughter in law commits suicide by hanging herself at home Basava kalyana Bidar
Bidar

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ – ಮನೆಯಲ್ಲೇ ನೇಣು ಬಿಗಿದು ಸೊಸೆ ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?