Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟ – 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟ – 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ

Karnataka

ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟ – 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ

Public TV
Last updated: June 27, 2022 9:34 pm
Public TV
Share
3 Min Read
narendra modi kashi
SHARE

– ಏಪ್ರಿಲ್‌ 1 ರಿಂದ ಪೂರ್ವಾನ್ವಯವಾಗುವಂತೆ ಘೋಷಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ ಭವ್ಯತೆಯನ್ನ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ದಿಗೊಳಿಸಲಾಗಿದೆ. ಈ ಭವ್ಯ ಕಾಶಿಯ ಯಾತ್ರೆ ಬಹಳಷ್ಟು ಜನರ ಜೀವನದ ಅಭಿಲಾಷೆಯಾಗಿರುತ್ತದೆ. ಈ ಯಾತ್ರೆಯ ಅಭಿಲಾಷೆಯನ್ನು ಪೂರೈಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಯೋಜನೆಯನ್ನು ಪ್ರಾರಂಭಿಸಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಆಯವ್ಯಯದಲ್ಲಿ ಘೋಷಣೆ ಮಾಡಿದ್ದರು.

KASHI..

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಇಂದು ಅಂತಿಮಗೊಳಿಸಿದ್ದು, ಸರಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್‌ 1, 2022 ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಚಿವರು ಹೇಳಿದ್ದಾರೆ.

ಮಾರ್ಗಸೂಚಿಯ ಅಂಶಗಳು:
1. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ ರೂ 5,೦೦೦/-ಗಳನ್ನು ಸಹಾಯ ಧನವಾಗಿ ನೀಡಲಾಗುವುದು.
2. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಕೆಳಕಂಡ ಯಾವುದಾದರೂ ಒಂದು ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು.

• ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೀಡಿರುವ “ಗುರುತಿನ ಚೀಟಿ’ ಅಥವಾ
• ಆಧಾರ್‌ ಗುರುತಿನ ಚೀಟಿ ಅಥವಾ
• ರೇಷನ್ ಕಾರ್ಡ್

KASHI

3. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್‌ 1 ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು, 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸುವುದು. ಇದನ್ನೂ ಓದಿ: ಜಿ7 ಶೃಂಗಸಭೆ – ಮೋದಿ ಬಳಿ ತೆರಳಿ ಬೈಡನ್ ಶೇಕ್ ಹ್ಯಾಂಡ್

4. ಏಪ್ರಿಲ್‌ 1 ರಿಂದ ಜೂನ್‌ 30ರವರೆಗೆ ಕಾಶಿ ಶ್ರೀ ವಿಶ್ವನಾಥ ಸ್ವಾಮಿಯ ದರ್ಶನಕ್ಕೆ ತೆರಳಿದ ಯಾತ್ರಾರ್ಥಿಗಳು ಸಂಬಂಧಿಸಿದ ದಾಖಲಾತಿ (ಕಾಶಿ ಶ್ರೀ ವಿಶ್ವನಾಥ ಸ್ವಾಮಿ ದೇವಾಲಯಕ್ಕೆ ತೆರಳಲು ಮುಂಗಡವಾಗಿ ಕಾಯ್ದಿರಿಸಿದ ಮತ್ತು ಹಿಂದಿರುಗಿದ ಬಗ್ಗೆ ಕಾಯ್ದಿರಿಸಿದ ಟಿಕೆಟ್‌, ಛಾಯಾಚಿತ್ರ ಪೂಜಾ ರಶೀದಿ, ಅಥವಾ ದೇವಾಲಯಕ್ಕೆ ತೆರಳಿ ಮರಳಿದ ಬಗ್ಗೆ ಯಾವುದಾದರೂ ಇತರೆ ದಾಖಲೆ)ಗಳನ್ನು ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಇವರ ಕಛೇರಿಗೆ ಸಲ್ಲಿಸತಕ್ಕದ್ದು.

kashi vishwanath Narendra Modi

5. ಜೂನ್‌ 7 ರಿಂದ ಅನ್ವಯವಾಗುವಂತೆ ಯಾತ್ರಾರ್ಥಿಗಳು ಕಾಶಿ ಯಾತ್ರೆ ಕೈಗೊಂಡಿರುವ ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ಕಛೇರಿಯಿಂದ ಬಯೋಮೆಟ್ರಿಕ್‌ ದೃಢೀಕರಣದೊಂದಿಗೆ, ಆನ್‌ಲೈನ್‌ ಅಥವಾ ಮುದ್ಧಾಂ/ನೊಂದಾಯಿತ ಅಂಚೆ ಮೂಲಕ, ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಛೇರಿಗೆ ಸಲ್ಲಿಸತಕ್ಕದ್ದು ಒಂದು ವೇಳೆ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ದೃಢೀಕರಣ ಇಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

6. ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗುವುದಿಲ್ಲ.

7. ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳ ಬ್ಯಾಂಕ್‌ ಖಾತೆಯು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಾಗಿರಬೇಕು ಮತ್ತು ಕಡ್ಡಾಯವಾಗಿ ಆಧಾರ್ ಲಿಂಕ್‌ ಆಗಿರತಕ್ಕದ್ದು,

narendra modi kashi vishwanath temple 2

8. ಈ ಸಹಾಯಧನವನ್ನು ಯಾತ್ರೆಯನ್ನು ಪೂರ್ಣಗೊಳಿಸಿ ಸಂಬಂಧಿಸಿದ ದಾಖಲೆಗಳನ್ನು ನಿಗಧಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ ಒದಗಿಸಿದ ನಂತರ ಸದರಿ ಅರ್ಜಿಗಳನ್ನು ಧಾರ್ಮಿಕ ದತ್ತಿ ಆಯುಕ್ತರು ಸ್ವೀಕರಿಸಿ, ಪರಿಶಿಲಿಸಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದು.

ಯೋಜನೆಯ ಜೊತೆಯಲ್ಲಿ “ಭಾರತ್‌ ಗೌರವ್‌” ಯೋಜನೆ ಅಡಿಯಲ್ಲಿ ಕಾಶಿ ಯಾತ್ರೆಗೆ ವಿಶೇಷ ರೈಲು 30 ಸಾವಿರ ಜನರಿಗೆ ತಲಾ 5 ಸಾವಿರದಂತೆ ಸಹಾಯಧನ ನೀಡುವ ಯೋಜನೆ ಅಲ್ಲದೆ, ಮತ್ತೊಂದು ವಿಶೇಷ ಯೋಜನೆಯನ್ನು ಮುಜರಾಯಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ.

ಕೇಂದ್ರ ಸರಕಾರದ “ಭಾರತ ಗೌರವ” ಯೋಜನೆಯ ಅಡಿಯಲ್ಲಿ ಮುಜರಾಯಿ ಇಲಾಖೆಯ ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಸದ್ಯದಲ್ಲೇ ಪ್ರಾರಂಭಿಸಲು ಸಿದ್ದತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೇ ಇಲಾಖೆಯಲ್ಲಿ ನೋಂದಣಿ ಮಾಡಿಸಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Live Tv

TAGGED:kannada newskarnatakaKashi Yatretempleಕರ್ನಾಟಕಕಾಶಿಕಾಶಿ ಯಾತ್ರೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
55 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?