ಬೊಗಳಿದ್ದಕ್ಕೆ ನಾಯಿಗೆ ಕಬ್ಬಿಣದ ರಾಡ್‍ನಿಂದ ಹೊಡೆದ – ಬಿಡಿಸಿಕೊಳ್ಳೋಕೆ ಬಂದವರ ಮೇಲೂ ಹಲ್ಲೆ

Public TV
2 Min Read
delhi man

ನವದೆಹಲಿ: ನೆರೆಹೊರೆಯವರ ನಾಯಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ನಾಯಿ ಹಾಗೂ ಮೂವರಿಗೆ ಕಬ್ಬಿಣದ ರಾಡ್‍ನಿಂದ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿ ನಡೆದಿದೆ.

delhi man 1

ಘಟನೆಯಲ್ಲಿ ನಾಯಿ ಹಾಗೂ ಮೂವರು ವ್ಯಕ್ತಿ ಗಾಯಗೊಂಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಸೋಮವಾರ ಮುಂಜಾನೆ ಧರ್ಮವೀರ್ ದಹಿಯಾ ಓಡಾಡುತ್ತಿರುವ ವೇಳೆ ನೆರೆಮನೆಯ ರಕ್ಷಿತ್ ಅವರು ಸಾಕಿದ್ದ ನಾಯಿ ಬೊಗಳಲು ಆರಂಭಿಸಿದೆ. ನಾಯಿ ಬೊಗಳುತ್ತಿರುವುದರಿಂದ ಕೋಪಗೊಂಡ ಧರ್ಮವೀರ್ ದಹಿಯಾ ನಾಯಿಯ ಮೇಲೆ ರಾಡ್‍ನಿಂದ ಹೊಡೆದಿದ್ದಾನೆ.

ಈ ವೇಳೆ ನಾಯಿಯನ್ನು ರಕ್ಷಿಸಲು ಬಂದ ನಾಯಿಯ ಮಾಲೀಕನ ಮೇಲೂ ರಾಡ್‍ನಿಂದ ಹಲ್ಲೆ ನಡೆಸಿದ್ದಾನೆ. ನಂತರ ಆತನನ್ನು ತಡೆಯಲು ಬಂದ ಮತ್ತೋರ್ವ ವ್ಯಕ್ತಿ ಕೈಯನ್ನು ಕಚ್ಚಿ, ತಲೆಗೆ ಹೊಡೆದಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ವಿಶ್ವದ ದುಬಾರಿ ಬೆಲೆಯ ಮಾವಿನ ಹಣ್ಣಿನ ಫೋಟೋ ವೈರಲ್ – ಇದರ ವಿಶೇಷತೆ ಏನು ಗೊತ್ತಾ?

ಸದ್ಯ ಘಟನೆಯಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ನಾಯಿಯ ಮಾಲೀಕ ರಕ್ಷಿತ್ ಹೇಳಿಕೆಯ ಮೇರೆಗೆ ಪಶ್ಚಿಮ ವಿಹಾರ್ ಪೂರ್ವ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಣಿವೆಗೆ ಬಿದ್ದ ಶಾಲಾ ಬಸ್ – ಮಕ್ಕಳು ಸೇರಿ 16 ಮಂದಿ ದುರ್ಮರಣ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *