Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ – ನೀರಲ್ಲಿ ಕೊಚ್ಚಿ ಹೋದ 1ನೇ ತರಗತಿ ಬಾಲಕಿ

Public TV
Last updated: July 5, 2022 8:45 am
Public TV
Share
3 Min Read
chikkamagaluru girl
SHARE

ಚಿಕ್ಕಮಗಳೂರು: ಕಾಲು ಕೆಸರಾಗಿದೆ ಎಂದು ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದ 1ನೇ ತರಗತಿಯ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ಸುಪ್ರಿತಾ(6) ಎಂದು ಗುರುತಿಸಲಾಗಿದೆ.

ಸುಪ್ರಿತಾ ತನ್ನ ಅಣ್ಣನ ಜೊತೆ ಶಾಲೆ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ಕಾಲು ಕೆಸರಾಯಿತು ಎಂದು ಅಣ್ಣ-ತಂಗಿ ಇಬ್ಬರೂ ಹಳ್ಳದಲ್ಲಿ ಕಾಲು ತೊಳೆದುಕೊಳ್ಳಲು ಹೋಗಿದ್ದರು. ಆ ವೇಳೆ ಸುಪ್ರಿತಾ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ.

chikkamagaluru rain

ಕಳೆದೊಂದು ವಾರದಿಂದ ಆರೋಗ್ಯ ಸರಿ ಇಲ್ಲ ಎಂದು ಶಾಲೆಗೆ ಹೋಗಿರದ ಬಾಲಕಿ ಸೋಮವಾರ ಶಾಲೆಗೆ ಹೋಗಿದ್ದಳು. ಆದರೆ, ಸಂಜೆ ಮನೆಗೆ ಬರುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ವಿಷಯ ತಿಳಿದ ಕೂಡಲೇ ಸ್ಥಳೀಯರು ಬಾಲಕಿಯನ್ನು ಹುಡುಕುವ ಪ್ರಯತ್ನ ಮಾಡಿದ್ದಾರೆ. ಆದರೆ, ಬಾಲಕಿ ಪತ್ತೆಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದರು. ಸ್ಥಳೀಯರು ಜೊತೆ ಅಧಿಕಾರಿಗಳು ಕೂಡ ನೀರಿನಲ್ಲಿ ಧುಮುಕಿ ಹರಿಯುವ ಹಳ್ಳದಲ್ಲಿ ಬಾಲಕಿಯನ್ನು ಹುಡುಕುವ ಪ್ರಯತ್ನ ಮಾಡಿದ್ದರು. ಆದರೂ ಬಾಲಕಿ ಪತ್ತೆಯಾಗಲಿಲ್ಲ.

ಅಗ್ನಿ ಶಾಮಕ ಸಿಬ್ಬಂದಿ ಬಳಿಕ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ವೇಗವಾಗಿ ಹರಿಯುವ ಹಳ್ಳದಲ್ಲಿ ಇಳಿದು ಬಾಲಕಿಗಾಗಿ ಹುಡುಕಾಡಿದರೂ ಆಕೆ ಪತ್ತೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬೋಟ್ ಕೂಡ ಕೊಂಡೊಯ್ದಿದ್ದರು. ಆದರೆ, ಗುಡ್ಡಗಾಡು ಪ್ರದೇಶದಲ್ಲಿ ಹರಿಯುವ ನೀರಾಗಿರುವುದರಿಂದ ತಗ್ಗು-ದಿಬ್ಬ ಇರುವುದರಿಂದ ಬೋಟ್ ಹಾಕಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾಲಕಿಯನ್ನು ಹುಡುಕಾಡಿದರು. ಆದರೆ, ಮಳೆ ಹಾಗೂ ಕತ್ತಲು ಹೆಚ್ಚಾದ ಕಾರಣ ಅಧಿಕಾರಿಗಳು ಹಾಗೂ ಸ್ಥಳೀಯರು ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನು ಕೈಬಿಟ್ಟಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ತಗ್ಗಿದ ಮಳೆಯ ಆರ್ಭಟ

chikkamagluru rain

ಸಿಬ್ಬಂದಿ ಮಂಗಳವಾರ ಬೆಳಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರೆಸಲಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ಡಿಎಫ್‌ಒ ಶಶಿಧರ್, ಚಿಕ್ಕಮಗಳೂರು ತಹಶೀಲ್ದಾರ್ ಕೂಡ ಮೊಕ್ಕಾಂ ಹೂಡಿದ್ದಾರೆ. ಬಾಲಕಿ ನಾಪತ್ತೆಯಾಗಿದ್ದರಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಾಲೆ ಹಾಗೂ ಗ್ರಾಮದಲ್ಲೂ ನೀರವ ಮೌನ ಆವರಿಸಿದೆ. ವಿಷಯ ತಿಳಿದು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಸ್ಥಳಕ್ಕೆ ಬಂದು ಬಾಲಕಿಯನ್ನು ಹುಡುಕಾಡುವ ಪ್ರಯತ್ನ ಮಾಡಿದ್ದಾರೆ.

ಶಾಲಾ-ಕಾಲೇಜುಗಳಿಗೆ ರಜೆ:
ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ-ಹಳ್ಳ-ಕೊಳ್ಳ-ತೊರೆಗಳು ಮೈದುಂಬಿ ಹರಿಯುತ್ತಿವೆ. ಈ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಮಲೆನಾಡು ಭಾಗದ 3 ತಾಲೂಕಿಗೆ ರಜೆ ಘೋಷಿಸಿದೆ. ಜಿಲ್ಲೆಯ ಕಳಸ ಹಾಗೂ ಶೃಂಗೇರಿ ತಾಲೂಕಿನ ಎಲ್ಲಾ ಶಾಲೆಗಳು ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ನೀಡಲು ಆದೇಶಿಸಿದೆ.

chikkamagaluru rain 1

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ಕಳಸ ತಾಲೂಕಿನ ಕುದುರೆಮುಖದ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಭದ್ರೆಯ ಅಬ್ಬರ ಜೋರಿರುವ ಕಾರಣ ಕಳಸ-ಹೊರನಾಡು ಸಂಪರ್ಕ ಸೇತುವೆ ಹೆಬ್ಬಾಳೆ ಸಂಪೂರ್ಣ ಜಲಾವೃತಗೊಂಡಿದೆ. ಸುಮಾರು 1 ಗಂಟೆಗೂ ಅಧಿಕ ಕಾಲ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ವಾಹನಗಳು ನಿಂತಲ್ಲೇ ನಿಂತು ಪರದಾಡಬೇಕಾಯ್ತು.

ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ತುಂಗಾ ನದಿ ಕೂಡ ಮೈದುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ ನದಿಯ ಅಬ್ಬರ ಜೋರಾಗಿದ್ದು ತುಂಗೆಯ ನೀರು ಶೃಂಗೇರಿ ದೇವಸ್ಥಾನದ ವಾಹನಗಳ ಪಾರ್ಕಿಂಗ್ ಜಾಗ ಪ್ರವೇಶಿಸಿತ್ತು. ಪಾರ್ಕಿಂಗ್ ಜಾಗಕ್ಕೆ ಹೋಗುವ ಮಾರ್ಗ ಕೂಡ ಮಳೆ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿತ್ತು. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

chikkamagaluru rain 3

ಮೂಡಿಗೆರೆ, ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕಿನಲ್ಲೂ ಮಳೆ ಅಬ್ಬರ ಮುಂದುವರೆದಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹೀಗಾಗಿ, ಜಿಲ್ಲೆಯ ಮಲೆನಾಡಿನಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಕಾರಣ ಅಲ್ಲಿನ ಗ್ರಾಮೀಣ ಭಾಗದ ಮಕ್ಕಳು ಶಾಲೆಗೆ ಬರುವುದು ಕಷ್ಟವೆಂದು ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ 3 ತಾಲೂಕಿನ ಶಾಲೆಗಳಿಗೆ ರಜೆ ನೀಡಿ ಆದೇಶಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:Chikkamagalurugirlrainಚಿಕ್ಕಮಗಳೂರುಬಾಲಕಿಮಳೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Anil Shetty
ಸ್ಟಾರ್ಟಪ್ ಉದ್ಯಮಿ ಅನಿಲ್ ಶೆಟ್ಟಿ ಸಿನಿಮಾದ ಟೈಟಲ್ ಟೀಸರ್ ರಿಲೀಸ್
Cinema Latest Sandalwood Top Stories
Aishwarya Vinay 1
ಪುಟ್ಟ ಗಣೇಶನ ಹಿಡಿದು ಸಿಹಿ ಸುದ್ದಿ ಹಂಚಿಕೊಂಡ ಐಶ್ವರ್ಯ-ವಿನಯ್ ದಂಪತಿ
Cinema Latest Sandalwood Top Stories
Actor Govind
ಖುಷಿಯಾಗಿ ಗಣೇಶ ಹಬ್ಬ ಆಚರಣೆ – ಡಿವೋರ್ಸ್ ವದಂತಿ ತಳ್ಳಿಹಾಕಿದ ನಟ ಗೋವಿಂದ ದಂಪತಿ
Cinema Latest South cinema Top Stories
Teja Sajja starrer ‘Mirai gets new release date
ತೇಜ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್
Cinema Latest South cinema
Jaym Ravi Kenisha
ಪ್ರೇಯಸಿ ಜೊತೆ ಜಯಂ ರವಿ ಮ್ಯಾಚಿಂಗ್ ಮ್ಯಾಚಿಂಗ್!
Cinema Latest South cinema Top Stories

You Might Also Like

Chinnayya
Dakshina Kannada

ʻಬುರುಡೆʼ ಪ್ರಕರಣದಲ್ಲಿ ಚಿನ್ನಯ್ಯನೇ ಎ1 – ಹಳೆ ಸೆಕ್ಷನ್ ತೆಗೆದು ಹೊಸ ಸೆಕ್ಷನ್ ಹಾಕಿದ SIT

Public TV
By Public TV
55 minutes ago
NARENDRA MODI RAHUL GANDHI
Latest

ಟ್ರಂಪ್‌ ಸೂಚಿಸಿದ 5 ಗಂಟೆಗಳೊಳಗೆ ಪಾಕ್‌ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಹುಲ್‌ ಗಾಂಧಿ ಕಿಡಿ

Public TV
By Public TV
1 hour ago
Mahesh Shetty Thimarodi 2 2
Crime

SIT ದಾಳಿ ತಿಳಿದು ತಿಮರೋಡಿ ಎಸ್ಕೇಪ್ – ಅತ್ತ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮತ್ತೊಂದು ದೂರು

Public TV
By Public TV
1 hour ago
Shobha Karandlaje 1
Karnataka

ಸಿಎಂ ಆಗುವ ವೇಗದಲ್ಲಿ ಹಿಂದೂಗಳಿಗೆ ಅಪಮಾನ ಮಾಡ್ತಿದ್ದೀರಿ: ಡಿಕೆಶಿಗೆ ಶೋಭಾ ಕರಂದ್ಲಾಜೆ ಸ್ಟ್ರೈಟ್ ಹಿಟ್

Public TV
By Public TV
1 hour ago
mallikarjun kharge d.k.shivakumar
Bengaluru City

ಡಿಕೆಶಿ RSS ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ರಿಂದ ಎಲ್ಲವೂ ಮುಗಿದಿದೆ: ಡಿಸಿಎಂ ಪರ ಖರ್ಗೆ ಬ್ಯಾಟಿಂಗ್‌

Public TV
By Public TV
2 hours ago
lord ganesha udupi
Latest

ಕೃಷ್ಣನ ಊರಿನಲ್ಲಿ ಗಣಪತಿಯ ಹಬ್ಬ – ಎಐ ಪರಿಕಲ್ಪನೆಯಲ್ಲಿ ಮೂಡಿದ ಬಾಲ ಗಣಪ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?