Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಳೆಯಿಂದಾಗಿ ರಾಜ್ಯದೆಲ್ಲೆಡೆ ತತ್ತರ – ಕರಾವಳಿ, ಮಲೆನಾಡಿನಲ್ಲಿ ಏನಾಗಿದೆ?

Public TV
Last updated: July 11, 2022 9:09 pm
Public TV
Share
3 Min Read
rain effect
SHARE

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಕಳೆದ 10 ದಿನಗಳಿಂದ ಕರಾವಳಿ ಭಾಗದಲ್ಲಿ ವರುಣ ಆರ್ಭಟಿಸುತ್ತಿರುವ ಕಾರಣ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಉಡುಪಿಯಲ್ಲಿ ಪಾಪನಾಶಿನಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಠದ ಕುದ್ರು, ವಿಭುದೇಶ ತೀರ್ಥ ನಗರಕ್ಕೆ ನೀರುನುಗ್ಗಿದೆ. ಮಳೆ ನೀರಲ್ಲಿ ನಾಯಿಗಳು ಪರದಾಡಿವೆ. ಜನ ದೋಣಿ ಅವಲಂಬಿಸಿದ್ದಾರೆ. ಬೆಳ್ಳಾಲ, ನಂದ್ರೊಳ್ಳಿ ಕ್ಷೇತ್ರಪಾಲದಲ್ಲಿ ಮನೆ, ಉಪ್ಪುಂದದಲ್ಲಿ ಶಾಲಾ ಮೇಲ್ಛಾವಣಿ ಕುಸಿದಿವೆ.

MNG RAIN 5

ದಕ್ಷಿಣ ಕನ್ನಡದ ಮೊಗೆರ್ ಕುದ್ರುನಲ್ಲಿ ನೆರೆ ಇಳಿದಿಲ್ಲ. ಬಟ್ಟಪಾಡಿ ಕಡಲ ತೀರದಲ್ಲಿ ಭಾರೀ ಗಾತ್ರದ ಅಲೆಗಳ ಹೊಡೆತಕ್ಕೆ ರಸ್ತೆ ಕೊಚ್ಚಿಹೋಗಿದೆ. ರಸ್ತೆ ಸಂಪರ್ಕವಿಲ್ಲದೇ 30 ಮನೆಗಳ ಮಂದಿ ಪರದಾಡುವಂತಾಗಿದೆ. ಕಡಲ್ಕೊರೆತದಿಂದ ತತ್ತರಿಸಿರುವ ಕಾಪು ತಾಲೂಕಿನ ಮುಳೂರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದರು. ಸಚಿವರು ಬಂದಿರುವ ವಿಚಾರ ತಿಳಿದ ಜನ, ಪ್ರವಾಹದ ನೀರಿನಲ್ಲಿ ನಡೆದು ಬಂದಿದ್ದರು. ಇದಕ್ಕೆ ಸಚಿವೆಯೂ ಸ್ಪಂದಿಸಿದ್ದರು. ಬೈತಡ್ಕದ ಹೊಳೆಯಲ್ಲಿ ಮುಳುಗಿದ್ದ ಕಾರಿನಲ್ಲಿದ್ದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಹಿಂದೂ ಬಾಲಕಿಯ ಹೃದಯ ಮುಸ್ಲಿಂ ಯುವಕನಿಗೆ ಕಸಿ

UDP RAIN

ಉತ್ತರ ಕನ್ನಡದ ಹಲವೆಡೆಯೂ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಜೋಯಿಡಾದ ಕಾತೇಲಿಯಲ್ಲಿ ಕೊಟ್ಟಿಗೆ ಕುಸಿದಿದೆ. ಜೋಯಿಡಾದ ಅಣಶಿಘಟ್ಟದಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದಿದೆ. ಕಾರವಾರ-ಜೋಯಿಡಾ-ಬೆಳಗಾವಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಭಾರೀ ಮಳೆಯ ಕಾರಣ ಪಶ್ಚಿಮ ಘಟ್ಟಗಳ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಘಾಟ್ ರೋಡ್‌ಗಳಲ್ಲಿ ಗುಡ್ಡ ಕುಸಿತ ಮುಂದುವರೆದಿದ್ದು, ಆತಂಕ ಎದುರಾಗಿದೆ. ಆಗುಂಬೆ ಘಾಟ್ ರೋಡಲ್ಲಿ ಕುಸಿದ ಮಣ್ಣಿನ ತೆರವು ಕಾರ್ಯ ಮುಂದುವರೆದಿದೆ. ಕುಸಿದಿರುವ ಜಾಗವನ್ನು ಭದ್ರ ಮಾಡಲಾಗುತ್ತಿದೆ. ಮಂಗಳವಾರದಿಂದ ಲಘು ವಾಹನ ಸಂಚಾರಕ್ಕೆ ಅನುವು ಮಾಡಲಾಗುತ್ತಿದೆ.

MNG RAIN 1 1

ಅಳಗಳಲೆಯಲ್ಲಿ ಗುಡ್ಡ ಕುಸಿದು, ನಾಲ್ಕೈದು ಎಕರೆ ತೊಟ ನಾಶವಾಗಿದೆ. ಶಿರಾಡಿ ಘಾಟ್‌ನ ದೋಣಿಗಲ್ ಬಳಿ ಹಾನಿಯಾಗಿರುವ ರಸ್ತೆಯ ದುರಸ್ತಿ ಕಾರ್ಯ ಭರದಿಂದ ನಡೆದಿದೆ. ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯಾವುದೇ ಕಾರಣಕ್ಕೂ ಘಾಟ್ ಬಂದ್ ಮಾಡಲ್ಲ ಎಂದಿದ್ದಾರೆ.

ಕಾವೇರಿ ಉಕ್ಕಿ ಹರಿಯುತ್ತಿರುವುದರಿಂದ ಹಾಸನ-ಕೋಣನೂರು ರಸ್ತೆ ಸಂಚಾರ ಬಂದ್ ಆಗಿದೆ. ಚಿಕ್ಕಮಗಳೂರಿನ ಮಣಬೂರಿನಲ್ಲಿ ಹಗ್ಗದ ನೆರವಿನಿಂದ ಗ್ರಾಮಸ್ಥರು ಓಡಾಡುವ ಸ್ಥಿತಿ ಏರ್ಪಟ್ಟಿದೆ. ಕಸ್ಕೆ ಗ್ರಾಮದ ಬಳಿ ಜಲಸ್ಫೋಟಕ್ಕೆ ಎರಡು ಎಕರೆಯಷ್ಟು ಕಾಫಿ ತೋಟ ಸಂಪೂರ್ಣ ನಾಶವಾಗಿದೆ. ಅರೆನೂರು ಬಳಿಯೂ ಒಂದು ಎಕರೆ ಕಾಫಿ ಮತ್ತು ಅಡಿಕೆ ತೋಟ ನಾಶವಾಗಿದೆ. ಮನೆ ಬಳಿಯೇ ಬೃಹತ್ ಬಂಡೆ, ಮರ ಬಂದು ಬಿದ್ದಿವೆ.

MDK RAIN 2

ಕಳಸ ಬಳಿ ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ್ದ ಬೃಹತ್ ತಡೆಗೋಡೆ ಕುಸಿದಿದ್ದು, ಹೊರನಾಡು ಸಂಪರ್ಕ ಸಂಪೂರ್ಣವಾಗಿ ಬಂದ್ ಆಗುವ ಭೀತಿ ಎದುರಾಗಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಹೆಚ್ಚಿದೆ. ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಕಲ್ಲುಮೊಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತವಾಗಿದ್ದು, ಅದರಲ್ಲಿ ಜನ ಓಡಾಡುತ್ತಿದ್ದಾರೆ.

ಕರಿಕೆ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯುತ್ತಿದೆ. ಕುಶಾಲನಗರದ ಸಾಯಿ ಬಡಾವಣೆ ಯಾವುದೇ ಕ್ಷಣದಲ್ಲಿ ಮುಳುಗಡೆ ಆಗಲಿದೆ. ಜನ ಮನೆ ತೊರೆದು ಕಾಳಜಿ ಕೇಂದ್ರ ಸೇರಿದ್ದಾರೆ. ಈಗಾಗಲೇ ಹೊಲ ಗದ್ದೆಗಳಿಗೆ ನೀರು ನುಗ್ಗಿದೆ. ಕಳಸದ ತನುಡಿ, ಬೇಲೂರಿನ ಮಾಳೆಗೆರೆ ಹೊಸಕೊಪ್ಪಲು ಸೇರಿ ಹಲವೆಡೆ ಮನೆ ಕುಸಿದಿವೆ. ಬೇಲೂರಿನ ಕೋಗಿಲು ಮನೆ ಬಳಿ ಗುಂಡಿ ಬಿದ್ದ ರಸ್ತೆ ಸರಿಪಡಿಸಿ ಎಂದು ಮಳೆಯಲ್ಲೇ ಜನ ಪ್ರತಿಭಟನೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಶಿವಮೊಗ್ಗದ ಚೋರಡಿ ಬಳಿ ಕುಮುದ್ವತಿ ಪಾಲಾಗಿದ್ದ ವೃದ್ಧೆ ನಾಗರತ್ನ ಶವ ಇಂದು ಪತ್ತೆಯಾಗಿದೆ. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ – ಚಿನ್ನ ಗೆದ್ದು ಭಾರತಕ್ಕೆ ಹೆಮ್ಮೆ ತಂದ 94ರ ಅಜ್ಜಿ

rain 2

ಭಾನುವಾರ ರಾಜ್ಯದ 10 ಕಡೆ ಭಾರೀ ಮಳೆ ಸುರಿದಿದೆ. ಸುಬ್ರಹ್ಮಣ್ಯದಲ್ಲಿ 21 ಸೆಂ.ಮೀ, ಮುಲ್ಕಿಯಲ್ಲಿ 20 ಸೆಂ.ಮೀ, ಕ್ಯಾಸಲ್ ರಾಕ್‌ನಲ್ಲಿ 19 ಸೆಂ.ಮೀ, ಮೂಡಬಿದ್ರೆ ಮತ್ತು ಬೆಳ್ತಂಗಡಿಯಲ್ಲಿ 18 ಸೆ.ಮೀ, ಧರ್ಮಸ್ಥಳದಲ್ಲಿ 15 ಸೆಂ.ಮೀ ಮಳೆ ಸುರಿದಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಕಾರಣ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ 3 ದಿನ ಆರೆಂಜ್ ಅಲರ್ಟ್, ಉತ್ತರ ಒಳನಾಡಿನಲ್ಲಿ 4 ದಿನ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಕನ್ನಡದಲ್ಲಿ ನಾಳೆಯಿಂದ ಶಾಲೆಗಳು ತೆರೆಯಲಿವೆ.

Live Tv
[brid partner=56869869 player=32851 video=960834 autoplay=true]

TAGGED:Disasterkarnatakalandsliderainಅವಾಂತರಕರ್ನಾಟಕಭೂಕುಸಿತಮಳೆಸಂಚಾರ
Share This Article
Facebook Whatsapp Whatsapp Telegram

Cinema Updates

Priyanka Chopra
ಬೀಚ್‌ನಲ್ಲಿ ಡೀಪ್‌ ಕಿಸ್‌ – ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ
Bollywood Cinema Latest
Vajreshwari Combines
ಪಾರ್ವತಮ್ಮ ರಾಜ್‌ಕುಮಾರ್ ಕನಸಿನ ಕೂಸಿಗೆ 50 ವರ್ಷ
Cinema Latest Sandalwood Top Stories
Darshan in Thailand 1
ದರ್ಶನ್‌ಗೆ ನೋ ಟೆನ್ಷನ್ – ಜಾಲಿ ಮೂಡಲ್ಲಿ ಥಾಯ್ಲೆಂಡ್‌ನಲ್ಲಿ ಬಿಂದಾಸ್‌ ಪಾರ್ಟಿ
Cinema Latest Sandalwood Top Stories
ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories

You Might Also Like

siddaramaiah 11
Bengaluru City

ಶಾಸಕರ ಅಸಮಾಧಾನಕ್ಕೆ ಬಗ್ಗಿದ ಸಿಎಂ – `ಕೈ’ ಶಾಸಕರಿಗೆ 50 ಕೋಟಿ ಅನುದಾನಕ್ಕೆ ಅಸ್ತು

Public TV
By Public TV
12 minutes ago
Thailand Beauty
Latest

80,000 ನಗ್ನ ಫೋಟೋಸ್‌, ಸೆಕ್ಸ್‌ ಮಾಡಿ ಬೌದ್ಧ ಬಿಕ್ಕುಗಳ ಟ್ರ್ಯಾಪ್‌ – 100 ಕೋಟಿ ಸುಲಿಗೆ ಮಾಡಿದ್ದ ಹನಿ ಲೇಡಿ ಅರೆಸ್ಟ್‌

Public TV
By Public TV
16 minutes ago
Maharashtra Islampur as Ishwarpur
Latest

ಸಾಂಗ್ಲಿಯ `ಇಸ್ಲಾಮ್‌ಪುರ’ ಈಗ `ಈಶ್ವರಪುರ’ – ಮರುನಾಮಕರಣಕ್ಕೆ `ಮಹಾ’ ಸರ್ಕಾರ ನಿರ್ಧಾರ

Public TV
By Public TV
24 minutes ago
Mangaluru Loan Fraud Arrest
Crime

ಐಷಾರಾಮಿ ಮನೆಯಲ್ಲೇ ಬಾರ್, ಮಲೇಷ್ಯಾ ಹುಡುಗಿಯರು – ಉದ್ಯಮಿಗಳಿಗೆ 200 ಕೋಟಿ ವಂಚಿಸಿದ್ದ ಕಿಂಗ್‌ಪಿನ್ ಅರೆಸ್ಟ್

Public TV
By Public TV
54 minutes ago
HM Revanna
Bengaluru City

ಮೋದಿ ವರ್ಚಸ್ಸು ಕಡಿಮೆಯಾಗಿರೋದಕ್ಕೆ ಬಿಜೆಪಿ ಫ್ರೀ ಗ್ಯಾರಂಟಿಗಳನ್ನ ಘೋಷಿಸ್ತಿದೆ – ಹೆಚ್.ಎಂ.ರೇವಣ್ಣ

Public TV
By Public TV
1 hour ago
Uttar Pradesh women suicide
Crime

ವರದಕ್ಷಿಣೆ ಕಿರುಕುಳ ಆರೋಪ – ದೇಹದ ಮೇಲೆ ಡೆತ್‌ನೋಟ್ ಬರೆದು ಮಹಿಳೆ ಆತ್ಮಹತ್ಯೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?