Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ- ತಪ್ಪಿಸಿಕೊಳ್ಳಲು ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿತ್ತು ಜೋಡಿ

Public TV
Last updated: July 15, 2022 7:25 am
Public TV
Share
2 Min Read
UDP CRIME 1
SHARE

ಉಡುಪಿ: ತಡರಾತ್ರಿ ಕಾರು ಧಗಧಗನೆ ಸುಟ್ಟು ಕರಕಲಾಗಿತ್ತು. ಕಾರಿನೊಳಗೆ ಪೂರ್ಣ ಸುಟ್ಟ ಅಸ್ಥಿಪಂಜರವೊಂದು ಬೆಳಗ್ಗಿನ ಜಾವ ಕಾಣಿಸಿಕೊಂಡಿತ್ತು. ಏನೇನೂ ಕ್ಲೂಗಳೆ ಇಲ್ಲದ ಕೇಸನ್ನು ಉಡುಪಿಯ ಪೊಲೀಸರು 24 ಗಂಟೆಯೊಳಗೆ ತನಿಖೆ ಮಾಡಿದ್ದಾರೆ. ತನಿಖೆಯಾಗುತ್ತಾ ಹೊರಬಂದ ಸತ್ಯಕ್ಕೆ ಇಡೀ ಉಡುಪಿ ಶಾಕ್ ಗೆ ಒಳಗಾಗಿದೆ.

UDP CRIME

ಸುಟ್ಟು ಕರಕಲಾದ ಕಾರು. ಕಾರಿನೊಳಗೆ ತಲೆಬುರುಡೆ ಎಲುಬು. ಪುಟ್ಟದಾದರೂ ಕ್ಲೂ ಸಿಗುತ್ತಾ ಅಂತ ಹುಡುಕಾಡುತ್ತರೋ ಪೊಲೀಸರು. ಇದು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಹೇನಬೇರು ಎಂಬ ಕಂಡುಬಂದ ದೃಶ್ಯ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು ನಿನ್ನೆ ಬೆಳಕಿಗೆ ಬಂದಿದೆ. ಕಾರಿನಲ್ಲಿದ್ದ ಶವ ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಅದು ಪುರುಷನದ್ದೇ ಅಥವಾ ಮಹಿಳೆಯ ಮೃತದೇಹವೇ ಎಂಬುದು ಗುರುತು ಸಿಕ್ಕಿರಲಿಲ್ಲ. ಕಾರಿನ ಚಾಸಿ ನಂಬರ್ ತೆಗೆದು ನೋಡಿದಾಗ ಇದು ಕಾರ್ಕಳದ ಮಾಳ ನಿವಾಸಿ ಸದಾನಂದ ಶೇರಿಗಾರ್ ಎಂಬವರ ಕಾರು ಎಂದು ಗೊತ್ತಾಗಿದೆ.

UDP CRIME 4

ತನಿಖೆಗಾಗಿ ಉಡುಪಿ ಎಸ್ಪಿ ವಿಷ್ಣುವರ್ಧನ್ ಪೊಲೀಸರ 2 ತಂಡಗಳನ್ನು ರಚಿಸಿದ್ರು. ಬೈಂದೂರು, ಕಾರ್ಕಳ ಪೊಲೀಸರು ಅಲರ್ಟ್ ಆಗಿ ತನಿಖೆ ಮಾಡಿದಾಗ ಸಾಸ್ತಾನ ಟೋಲ್‍ನಲ್ಲಿ ಸುಟ್ಟ ಕಾರು ಮಂಗಳವಾರ ರಾತ್ರಿ ಪಾಸ್ ಆಗಿದ್ದು, ಕಾರಿನಿಂದ ಮಹಿಳೆಯೊಬ್ಬಳು ಇಳಿದು ಟೋಲ್ ಹಣ ಕಟ್ಟಿದ್ದು ಗೊತ್ತಾಗಿದೆ. ಆಗ ಆ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ಸ್ಟೋರಿ ಟರ್ನ್ ಪಡೆದುಕೊಳ್ಳುತ್ತದೆ. ಆದರೆ ಪೊಲೀಸರ ತನಿಖೆಯಲ್ಲಿ ಸದಾನಂದ ಮತ್ತು ಶಿಲ್ಪಾ ಸತ್ತಿಲ್ಲ ಬದುಕಿದ್ದಾರೆ ಎಂದು ಗೊತ್ತಾಗುತ್ತದೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರಿಗೆ ಶಾಕ್ ಕಾದಿತ್ತು. ಇದನ್ನೂ ಓದಿ: 15 ದಿನದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದ ಈಶ್ವರಪ್ಪ – ಪಾರದರ್ಶಕ ತನಿಖೆಗೆ ರಾಜ್ಯಪಾಲರ ಮೊರೆಹೋದ ಸಂತೋಷ್ ಪಾಟೀಲ್ ಕುಟುಂಬ

UDP CRIME 2

ಸದಾನಂದ ಪರವಾನಗಿ ಪಡೆದ ಸರ್ವೇಯರ್. ಕೆಲವು ದಿನಗಳ ಹಿಂದೆ ಭೂ ದಾಖಲೆಗಳನ್ನು ಫೋರ್ಜರಿ ಮಾಡಿದ್ದ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೋರ್ಟ್‍ನಲ್ಲಿ ಚಾರ್ಜ್‍ಶೀಟ್ ದಾಖಲಾಗಿತ್ತು. ವಿಚಾರಣೆ, ಕೊರ್ಟ್ ನೋಟಿಸ್. ಅರೆಸ್ಟ್ ವಾರೆಂಟ್ ಕೂಡ ಆಗಿತ್ತು. ಬಂಧನದ ಭೀತಿಯಲ್ಲಿದ್ದ ಸದಾನಂದ ಮತ್ತವನ ಗೆಳತಿ ಶಿಲ್ಪಾ ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ತನ್ನ ವಯಸ್ಸಿನ ವ್ಯಕ್ತಿಯಾದ ಕಾರ್ಕಳದ ಆನಂದ ದೇವಾಡಿಗನನ್ನು ಆರಿಸಿದ್ದ ಸದಾನಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ. ನಿದ್ರೆ ಬರಿಸುವ ಮಾತ್ರೆ ಜೊತೆ ಮದ್ಯ ಕುಡಿಸಿ ಆನಂದ ದೇವಾಡಿಗನ ಸಹಿತವಾಗಿ ಕಾರನ್ನು ಸುಟ್ಟು ಹಾಕಿದ್ರು. ಇದನ್ನೂ ಓದಿ: ಇತಿಹಾಸದ ಪುಟ ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ – ಕೊನೆಯ ಅಧಿವೇಶನಕ್ಕೆ ಸಿದ್ಧತೆ

UDP CRIME 5

ಸದಾನಂದನ ಕೊಲೆಯಾಗಿದೆ. ಸದಾನಂದ ಆತ್ಮಹತ್ಯೆ ಮಾಡಿಕೊಂಡ ಎಂದು ಬಿಂಬಿಸಿ ಎಸ್ಕೇಪ್ ಆಗಿಬಿಡುವುದು ಇಬ್ಬರ ಪ್ಲಾನ್ ಆಗಿತ್ತು. ಆದರೆ ಚಾಣಕ್ಷ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಸತ್ಯ ಪತ್ತೆ ಹಚ್ಚಿದ್ದಾರೆ. ಬೈಂದೂರಿನಿಂದ ಎಸ್ಕೇಪ್ ಆಗಲು ಇವರಿಗೆ ಸಹಾಯ ಮಾಡಿದ್ದಾರೆ ಎಂಬ ಆರೋಪದಡಿ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಬಳಿಕ ಇನ್ನಷ್ಟು ವಿಚಾರಗಳು ಬೆಳಕಿಗೆ ಬರಲಿದೆ.

Live Tv
[brid partner=56869869 player=32851 video=960834 autoplay=true]

TAGGED:carcouplepoliceudupiಉಡುಪಿಕಾರುಜೋಡಿತನಿಖೆಪೊಲೀಸ್
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
47 minutes ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
45 minutes ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
2 hours ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
2 hours ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
2 hours ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?