ಲೀಟರ್‌ ಗೋಮೂತ್ರಕ್ಕೆ 4 ರೂ. – ರೈತರಿಂದ ಖರೀದಿಗೆ ಮುಂದಾದ ಸರ್ಕಾರ

Public TV
1 Min Read
cow urine
Susheela Kumari, an attendant at a cow shelter, collects urine to be processed in Bulandshahar, Uttar Pradesh, India

ರಾಯ್ಪುರ: ರೈತರು ಹೆಚ್ಚಿನ ಆದಾಯ ಗಳಿಸುವಂತೆ ಮಾಡಿ ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗೋಮೂತ್ರವನ್ನು ಖರೀದಿಸಲು ಛತ್ತೀಸಗಡದ ಕಾಂಗ್ರೆಸ್‌ ಸರ್ಕಾರ ಯೋಜನೆ ರೂಪಿಸಿದೆ.

ʼಗೋದಾನ ನ್ಯಾಯ ಯೋಜನೆʼ ಅಂಗವಾಗಿ ಪ್ರತಿ ಲೀಟರ್‌ಗೆ 4 ರೂ. ದರದಲ್ಲಿ ಗೋಮೂತ್ರ ಖರೀದಿಸಲು ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ ಸುಸ್ಥಿರ ಗೋಸಂರಕ್ಷಣೆ ಉತ್ತೇಜಿಸಲು ಈ ಯೋಜನೆ ರೂಪಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: ದೇಶದಲ್ಲಿ ಮಂಕಿಪಾಕ್ಸ್‌ ಭೀತಿ – ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆಗೆ ಕೇಂದ್ರ ಸೂಚನೆ

Bhupesh Baghel

ಜುಲೈ 28 ರಂದು ನಡೆಯಲಿರುವ ‘ಹರೇಲಿ ತಿಹಾರ್’ ಹಬ್ಬದ ಸಂದರ್ಭದಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲಾಗುವುದು. ನಮ್ಮ ಸರ್ಕಾರವು ಗೋದಾನ್‌ ನ್ಯಾಯ ಯೋಜನೆಯಡಿ ಗೋಮೂತ್ರ ಖರೀದಿ ಪ್ರಕ್ರಿಯೆಯನ್ನು ಮೊದಲ ಬಾರಿಗೆ ಆರಂಭಿಸಿದೆ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ನೇತೃತ್ವದ ಸರ್ಕಾರ ಹೇಳಿದೆ.

ಗೋದಾನ್ ನ್ಯಾಯ ಮಿಷನ್ ನಿರ್ದೇಶಕ ಅಯ್ಯಾಜ್ ತಾಂಬೋಳಿ ಅವರು, ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನೀಟ್ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಬ್ರಾಗಳನ್ನು ತೆಗೆದುಹಾಕಲು ಒತ್ತಾಯ – ತನಿಖೆಗೆ ಆದೇಶ

ಜಿಲ್ಲಾ ಕೇಂದ್ರಗಳಲ್ಲಿರುವ ಗೋಠಾಣೆಗಳು (ಗೋಶಾಲೆ) ಗೋಮೂತ್ರ ಖರೀದಿಸಲಿವೆ. ಆಯಾ ಜಿಲ್ಲೆಯ ರೈತರು ಸಂಗ್ರಹಿಸಿ ಗೋಮೂತ್ರವನ್ನು ಈ ಗೋಠಾಣೆಗಳಿಗೆ ತಂದು ನೀಡಬೇಕು. ಕೃಷಿ ಅಭಿವೃದ್ಧಿ ಮತ್ತು ರೈತರ ಕಲ್ಯಾಣ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಗಳಿಂದ ಗೋಮೂತ್ರ ಖರೀದಿಗೆ ಕನಿಷ್ಠ ಬೆಲೆ ಲೀಟರ್‌ಗೆ 4 ರೂ.ಗೆ ಪ್ರಸ್ತಾವಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಗ್ರಹಿಸಿದ ಗೋಮೂತ್ರವನ್ನು ಸ್ವ-ಸಹಾಯ ಮಹಿಳಾ ಗುಂಪುಗಳ ಸಹಾಯದಿಂದ ಕೀಟ ನಿಯಂತ್ರಣ ಉತ್ಪನ್ನಗಳು ಮತ್ತು ನೈಸರ್ಗಿಕ ದ್ರವ ಗೊಬ್ಬರವನ್ನು ತಯಾರಿಸಲು ಬಳಸಲಾಗುತ್ತದೆ. ಇದರಿಂದ ಬೇಸಾಯದಲ್ಲಿ ರಸಗೊಬ್ಬರದ ವೆಚ್ಚ ಮತ್ತು ಹೊಲಗಳಲ್ಲಿ ದ್ರವ ಗೊಬ್ಬರಗಳ ಬಳಕೆ ಕಡಿಮೆಯಾಗುತ್ತದೆ. ಇದನ್ನೂ ಓದಿ: ಮುಗೀತು ರಾಷ್ಟ್ರಪತಿ ಚುನಾವಣೆ, 21ಕ್ಕೆ ಫಲಿತಾಂಶ – ದ್ರೌಪದಿ ಮುರ್ಮು ಪ್ರಥಮ ಪ್ರಜೆ ಆಗೋದು ಖಚಿತ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *