ಬೀದಿನಾಯಿ ಕಚ್ಚಿ ಬಾಲಕ ಸಾವು

Public TV
1 Min Read
chitradurga dog bite

ಚಿತ್ರದುರ್ಗ: ಬೀದಿನಾಯಿ ಕಡಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಬಿಳಿಕಲ್ಲು ನಾಯಕರ ಹಟ್ಟಿಯಲ್ಲಿ ನಡೆದಿದೆ.

ಬಡಾವಣೆಯ ಕೇಶವ ಹಾಗೂ ರೇಖಾ ದಂಪತಿಯ ಪುತ್ರ ಯಶವಂತ್(8) ನಾಯಿಯ ಕಡಿತಕ್ಕೊಳಗಾಗಿ ಸಾವನ್ನಪ್ಪಿದ ಬಾಲಕ. ಕಳೆದ 2 ದಿನಗಳ ಹಿಂದೆ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿಯೊಂದು ಯಶವಂತ್‌ನ ಕಣ್ಣಿಗೆ 5-6 ಬಾರಿ ಕಚ್ಚಿತ್ತು. ಪರಿಣಾಮ ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದ ಯಶವಂತ್ ಕುಸಿದು ಬಿದ್ದಿದ್ದ. ಇದನ್ನೂ ಓದಿ: ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ನೂರಾರು ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ ಆರಂಭ

DOG

ಯಶವಂತ್‌ನನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪೋಷಕರು ಚಿಕಿತ್ಸೆ ಕೊಡಿಸಿದರು. ಆದರೆ ನಾಯಿ ಬಾಲಕನ ಕಣ್ಣಿಗೆ ಕಚ್ಚಿರುವುದರಿಂದ ವಿಷ(ನಂಜು) ಬಾಲಕನ ಮೆದುಳಿಗೆ ಏರಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸಲಹೆ ನೀಡಿದ್ದರು. ಇದನ್ನೂ ಓದಿ: 5ನೇ ಮಹಡಿ ಕಿಟಕಿಯಿಂದ ಬೀಳುತ್ತಿದ್ದ 2 ವರ್ಷದ ಕಂದಮ್ಮನನ್ನು ರಕ್ಷಿಸಿದ – ನಮ್ಮ ಹೀರೋ ಎಂದ ನೆಟ್ಟಿಗರು

ಈ ಹಿನ್ನೆಲೆಯಲ್ಲಿ ಯಶವಂತ್‌ನನ್ನು ಪೋಷಕರು ಶನಿವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯಶವಂತ್ ಮೃತಪಟ್ಟಿದ್ದಾನೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *