Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಬೊಜ್ಜು ಕರಗಿಸಬೇಕು ಅಂತ ಸೈಕಲ್ ಏರಿದ ಪೊಲೀಸ್ ಅಧಿಕಾರಿ ಈಗ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ

Public TV
Last updated: July 25, 2022 6:53 pm
Public TV
Share
2 Min Read
police india book of record 1
SHARE

ಧಾರವಾಡ: ದೇಹದ ತೂಕವನ್ನು ಇಳಿಸಬೇಕು ಎಂದು ನಿರ್ಧರಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇದೀಗ ಸೈಕಲಿಂಗ್‌ನಲ್ಲಿ ಹೊಸ ಸಾಧನೆ ಮಾಡಿದ್ದಾರೆ. ಮೊದ ಮೊದಲು ಸಣ್ಣ ಪ್ರಮಾಣದಲ್ಲಿ ಸೈಕಲಿಂಗ್ ಜಾಥಾ ಮಾಡುತ್ತಿದ್ದ ಇವರು, ಇದೀಗ ಭಾರತದ ತುತ್ತ ತುದಿಯಿಂದ ಕೊನೆಯವರೆಗೂ ಸೈಕಲ್ ಏರಿ ಜಾಗೃತಿ ಮೂಡಿಸಿದ್ದಾರೆ.

ಹೌದು, ಹುಬ್ಬಳ್ಳಿಯ ಹೆಸ್ಕಾಂನ ಇನ್ಸ್‌ಪೆಕ್ಟರ್ ಆಗಿರುವ ಮುರುಗೇಶ್ ಚನ್ನಣ್ಣವರ ಇಂತಹದ್ದೊಂದು ಸಾಧನೆ ಮಾಡಿದ್ದಾರೆ. ಸೇ ನೋ ಡ್ರಗ್ಸ್ ಎನ್ನುತ್ತ ಯುವಕರಿಗೆ ಜಾಗೃತಿ ಮೂಡಿಸುವ ಮೂಲಕ ಭಾರತದ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಸೈಕಲ್ ಏರಿ ಕೇವಲ 22 ದಿನಗಳಲ್ಲಿ ಜಾಥಾವನ್ನು ಅಂತ್ಯಗೊಳಿಸಿದ್ದಾರೆ.

 

police india book of record

ಕೆ2ಕೆ ಎನ್ನುವ ಜಾಥಾ ಇದಾಗಿದ್ದು, ಯುವ ಜನರಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 2021 ರ ಡಿಸೆಂಬರ್ ತಿಂಗಳಲ್ಲಿ ಇದು ಆರಂಭವಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 9 ರಾಜ್ಯಗಳ ಮುಖಾಂತರ ಸುಮಾರು 3,649 ಕಿ.ಮೀ ಸೈಕಲ್ ಯಾತ್ರೆ ನಡೆಸಿದ್ದರು. 42 ರಿಂದ 49 ವಯಸ್ಸಿನೊಳಗಿನ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರಲ್ಲದೇ ಈ ಹಿಂದೆ ಲೋಹ ಪುರುಷ ಗೌರವಕ್ಕೂ ಇವರು ಪಾತ್ರರಾಗಿದ್ದಾರೆ. ಇದನ್ನೂ ಓದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ ಮಾಡುತ್ತೇವೆ: ಕಾಗೇರಿ ಹಾರಿಕೆ ಉತ್ತರ

ಇದು ಯಾರು ಬೇಕಾದರೂ ಮಾಡುವ ಜಾಥಾವಂತೂ ಅಲ್ಲವೇ ಅಲ್ಲ. ಅದು ಮೊದಲೇ ಚಳಿ ಇರುವ ಪ್ರದೇಶವಾಗಿದ್ದು, ಅಲ್ಲಿ ಇವರು ಪಟ್ಟ ಪಾಡು ಅಷ್ಟಿಷ್ಟಲ್ಲ. ಏನೇ ಆದರೂ ಜಾಗೃತಿಯ ಸಲುವಾಗಿ ಸೈಕಲ್ ಏರಿದ್ದ ಮುರುಗೇಶ್ ಚನ್ನಣ್ಣವರ ಕೇವಲ 22 ದಿನದಲ್ಲಿ ತಮ್ಮ ಜಾಥಾ ಅಂತ್ಯಗೊಳಿಸಿ ಇದೀಗ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಭಾಜನರಾಗಿದ್ದಾರೆ. ಇವರ ಈ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

 

ಮೊದಲಿನಿಂದಲೂ ಸೈಕಲ್ ಮೇಲೆ ಹೆಚ್ಚು ಒಲವು ಹೊಂದಿದ್ದ ಮುರುಗೇಶ್ ಈಗಾಗಲೇ ಹಲವು ರಾಷ್ಟ್ರೀಯ ಸೈಕಲ್ ಜಾಥಾಗಳಲ್ಲಿ ಭಾಗಿಯಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ಸಂಗೀತ ಮಾಂತ್ರಿಕ ಇಳಯರಾಜರನ್ನು ರಾಜ್ಯಸಭೆಗೆ ಸ್ವಾಗತಿಸಿದ ಪ್ರಲ್ಹಾದ್ ಜೋಶಿ

ಇವರ ಈ ಸೈಕಲ್ ಕ್ರೇಜ್‌ಗೆ ಮನಸೋತಿದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸಹ ಧಾರವಾಡಕ್ಕೆ ಬಂದಾಗಲೆಲ್ಲ ಇವರ ಮನೆಗೆ ಬಂದು ಸೈಕಲ್ ಜಾಥಾ ಬಗ್ಗೆ ಮತ್ತು ಇಬ್ಬರು ಸಹ ಬರ್ಲಿನ್‌ನಲ್ಲಿ ನಡೆಯುವ ಮ್ಯಾರಥಾನ್‌ನಲ್ಲಿ ಭಾಗವಹಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರಂತೆ. ಹೀಗಾಗಿಯೇ ಅವರ ಅಕಾಲಿಕ ಮರಣದಿಂದ ಮುರುಗೇಶ್ ಈ ಬುಕ್ ಆಫ್ ರೆಕಾರ್ಡ್ ಅನ್ನು ಪುನೀತ್‌ಗೆ ಸಮರ್ಪಿಸಿದ್ದು, ಮುಂದೊಂದು ದಿನ ಬರ್ಲಿನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿ ಅವರ ಆಸೆಯನ್ನು ನಾನು ಪೂರ್ತಿಯಾಗಿಸುತ್ತೇನೆ ಎಂಬ ಆಸೆ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Cycle JathacyclingdharwadIndia Book of Recordpoliceಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ಧಾರವಾಡಪೊಲೀಸ್ಸೈಕಲಿಂಗ್ಸೈಕಲ್ ಜಾಥಾ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
1 hour ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
11 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
34 minutes ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
39 minutes ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
1 hour ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
2 hours ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
2 hours ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?