KRSಗೆ ಕಂಟಕದ ಆತಂಕ – ರೈತರ ಧರಣಿಗೆ ಮಣಿದು ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ

Public TV
1 Min Read
MANDYA BABY BETTA 6

ಮಂಡ್ಯ: ತೀವ್ರ ವಿರೋಧದ ನಡುವೆಯೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‍ಗೆ ಸಿದ್ಧತೆ ನಡೆಸಲಾಗಿದ್ದು, ರೈತರ ಧರಣಿಗೆ ಮಣಿದು ತಾತ್ಕಾಲಿಕ ತಡೆ ನೀಡಲಾಗಿದೆ. ಕೆಆರ್‍ಎಸ್ ವ್ಯಾಪ್ತಿಯ ಬೇಬಿ ಬೆಟ್ಟದಲ್ಲಿ ಬ್ಲಾಸ್ಟಿಂಗ್‍ಗೆ ತಯಾರಿ ನಡೆಸಲಾಗುತ್ತಿತ್ತು. ಇದೀಗ ತೀವ್ರ ವಿರೋಧದಿಂದಾಗಿ `ಟ್ರಯಲ್ ಬ್ಲಾಸ್ಟ್’ ಮುಂದೂಡಿಕೆ ಮಾಡಲಾಗಿದೆ.

MANDYA BABY BETTA

ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟದಿಂದ ಅಹೋರಾತ್ರಿ ಧರಣಿ ವಾಪಸ್ ಪಡೆಯಲಾಗಿದೆ. ಆದರೆ ಟ್ರಯಲ್ ಬ್ಲಾಸ್ಟ್ ಬಗ್ಗೆ ಸ್ಪಷ್ಟ ತೀರ್ಮಾನ ಬರುವವರೆಗೆ ಹೋರಾಟ ಮುಂದುವರಿಸಲಿದ್ದಾರೆ. ಕೆಆರ್‍ಎಸ್ ಹಾಗೂ ಬೇಬಿ ಬೆಟ್ಟದ ಸುತ್ತಮುತ್ತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು: ಸಿಎಂಗೆ ಸುಮಲತಾ ಪತ್ರ

MANDYA BABY BETTA 7

ಇಂದು ಕೆಆರ್‍ಎಸ್ ಬಳಿಯ ಕಟ್ಟೇರಿಯ ಬಳಿ ಸಂಪೂರ್ಣ ಟ್ರಯಲ್ ಬ್ಲಾಸ್ಟ್ ನಿಷೇಧವಾಗಬೇಕೆಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಜಿಲ್ಲಾಡಳಿತದ ನಿಲುವು ಬರುವವರೆಗೆ ಪ್ರತಿಭಟನೆ ಮುಂದುವರಿಯಲಿದ್ದು, ದಿನಕ್ಕೊಂದು ವಿಭಿನ್ನ ಪ್ರತಿಭಟನೆ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

MANDYA BABY BETTA 3

ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದಂತೆಯೇ ಇತ್ತ ಪ್ರಮೋದಾದೇವಿ ಹಾಗೂ ಸಂಸದೆ ಸುಮಲತಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗಣಿ ಸಚಿವರಿಗೆ ಪತ್ರ ಬರೆದಿದ್ದಾರೆ. ಕೆಆರ್‍ಎಸ್ ವ್ಯಾಪ್ತಿಯ 20 ಕಿ.ಮೀ ಗಣಿನಿಷೇಧ ಪ್ರದೇಶವಾಗಿ ಯಥಾಸ್ಥಿತಿ ಕಾಪಾಡುವಂತೆ ಸಿಎಂ, ಗಣಿ ಸಚಿವರಿಗೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.

MANDYA BABY BETTA 2

ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸಂಶೋಧನಾ ಸಂಸ್ಥೆಗಳು ಕೆಆರ್‍ಎಸ್ ಸುತ್ತಮುತ್ತಲ ಗಣಿಗಾರಿಕೆಯಿಂದ ಡ್ಯಾಂಗೆ ಆಗುತ್ತಿರುವ ಅಪಾಯದ ಬಗ್ಗೆ ವರದಿ ನೀಡಿವೆ. ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ. ಕೆಆರ್‍ಎಸ್ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿ ಗಣಿಗಾರಿಕೆ ನಿಷೇಧದ ಪ್ರದೇಶವಾಗಿಯೆ ಇರಲಿ. ಇದೇ ನನ್ನ ಹಾಗೂ ರೈತ, ಪ್ರಗತಿಪರ ಸಂಘಟನೆಗಳ ನಿಲುವು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *