ಬೆಳಗಾವಿ: ಅನೈತಿಕ ಸಂಬಂಧ ಶಂಕಿಸಿ ಪತಿಯೊಬ್ಬ ಪತ್ನಿ ಮತ್ತು 4 ವರ್ಷದ ಮಗನ ಕತ್ತು ಸೀಳಿದ ಭೀಕರ ಘಟನೆ ಗೋಕಾಕ್ನಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ ಪತ್ನಿ ಸಾವುಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಲ್ತಿಭಾವಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಶಿಲ್ತಿಭಾವಿ ಗ್ರಾಮದ ಬಾಳೇಶ ಅಕ್ಕಣಿ (4) ಸಾವನ್ನಪ್ಪಿದ್ದು, ತಾಯಿ ಲಕ್ಷ್ಮೀ ಮುತ್ತೆಪ್ಪ ಅಕ್ಕಣಿ (27) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: 16 ಕೋಟಿ ಇಂಜೆಕ್ಷನ್ ಕೊಟ್ರೆ ಉಳಿಯುತ್ತಂತೆ ಮಗು – ಕಂದನನ್ನು ಉಳಿಸಿಕೊಡುವಂತೆ ಅಂಗಲಾಚಿದ ದಂಪತಿ
ಕೊಲೆ ಮಾಡಿರುವ ಆರೋಪಿ ಮುತ್ತೆಪ್ಪ ಅಕ್ಕಣಿ (28) ಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಹೆಂಡತಿಯ ಅನೈತಿಕ ಸಂಬಂಧ ಕಾರಣ ಎನ್ನಲಾಗಿದ್ದು ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಗೋಕಾಕ್ ಡಿವೈಎಸ್ಪಿ ಮನೋಜ್ಕುಮಾರ್, ಗೋಕಾಕ್ ಗ್ರಾಮೀಣ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಅನುಭವ ಮಂಟಪ ಕಲಾಕೃತಿ ಸ್ಥಾಪನೆ ಕರ್ನಾಟಕದ ಹೆಮ್ಮೆ: ಪ್ರಹ್ಲಾದ್ ಜೋಶಿ