ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಇಂದು 1,624 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಇಂದು ರಾಜ್ಯದಲ್ಲಿ ಕೋವಿಡ್ನಿಂದ ಇಬ್ಬರು ಸಾವನ್ನಪ್ಪಿದ್ದಾರೆ.
ಇಂದು ರಾಜ್ಯದಲ್ಲಿ 1,647 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,50,794 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು ಕೋವಿಡ್ನಿಂದ ಇಬ್ಬರು ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 40,094 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ರೇಟ್ ಶೇ.4.87 ರಷ್ಟು ಇದ್ದು, 8,836 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ಪ್ರತಿ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರವೀಣ್ ಕುಟುಂಬಕ್ಕೆ ಸಹಾಯ: ತೇಜಸ್ವಿ ಸೂರ್ಯ
ಇಂದು 33,336 ಮಂದಿಯನ್ನು (8,711 ರ್ಯಾಪಿಡ್ ಆಂಟಿಜನ್, 24,625 ಆರ್ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,76,71,831 ಮಂದಿಗೆ ಟೆಸ್ಟ್ ಮಾಡಲಾಗಿದೆ. ಅಲ್ಲದೇ ಇಂದು 2,53,999 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ
ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಬೆಂಗಳೂರು ನಗರದಲ್ಲೇ 1,176 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರ 35, ಬಾಗಲಕೋಟೆ 19, ಬಳ್ಳಾರಿ 31, ಬೆಳಗಾವಿ 25, ಬೀದರ್ 9, ಚಾಮರಾಜನಗರ 11, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 6, ಚಿತ್ರದುರ್ಗ 3, ದಕ್ಷಿಣ ಕನ್ನಡ 20, ದಾವಣಗೆರೆ 5, ಧಾರವಾಡ 58, ಗದಗ 1, ಹಾಸನ 35, ಹಾವೇರಿ 2, ಕಲಬುರಗಿ 30, ಕೊಡಗು 5, ಕೋಲಾರ 28, ಕೊಪ್ಪಳ 3, ಮಂಡ್ಯ 17, ಮೈಸೂರು 42, ರಾಯಚೂರು 8, ಶಿವಮೊಗ್ಗ 6, ತುಮಕೂರು 7, ಉಡುಪಿ 4, ಉತ್ತರ ಕನ್ನಡ 12, ವಿಯಪುರ 6 ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.