ಜಮೀನು ವಿವಾದ – ಬೆಳ್ಳಂಬೆಳಗ್ಗೆ ಟವರ್ ಏರಿ ವೃದ್ಧನ ಹೈಡ್ರಾಮಾ

Public TV
1 Min Read
chikkaballapura 1

ಚಿಕ್ಕಬಳ್ಳಾಪುರ: ಜಮೀನು ವಿವಾದ ಹಿನ್ನೆಲೆ ವೃದ್ಧನೋರ್ವ ಬೆಳ್ಳಂಬೆಳಗ್ಗೆ ಟವರ್ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ ಮಾಡಿದ್ದಾನೆ.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದ ಮುಂಭಾಗ ಘಟನೆ ನಡೆದಿದ್ದು, ವೃದ್ಧನನ್ನು ನಲ್ಲಕದಿರೇನಹಳ್ಳಿ ಗ್ರಾಮದ ನರಸಿಂಹಪ್ಪ ಎಂದು ಗುರುತಿಸಲಾಗಿದೆ. ಜಮೀನು ವಿವಾದ ಕುರಿತಂತೆ ಸಮಸ್ಯೆ ಬಗೆಹರಿಸುವಂತೆ ವೃದ್ಧನೋರ್ವ ಟವರ್ ಏರಿ ಕುಳಿತುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದನು. ಅಲ್ಲದೇ ಈ ವೇಳೆ ಸ್ಥಳಕ್ಕೆ ಎಸಿ ಸಂತೋಷ್ ಕುಮಾರ್ ಹಾಗೂ ಹಾಗೂ ತಹಶೀಲ್ದಾರ್ ಗಣಪತಿ ಶಾಸ್ತ್ರೀ ಬರುವಂತೆ ವೃದ್ಧ ಪಟ್ಟು ಹಿಡಿದಿದ್ದನು. ಇದನ್ನೂ ಓದಿ: ಪೊಲೀಸರಿಗಿಂತ ಇಡಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ: ಮೋದಿ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿ

ನಂತರ ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರು, ಹರಸಾಹಸ ಪಟ್ಟು, ವೃದ್ಧನ ಮನವೊಲಿಕೆ ಮಾಡಿ ಕೆಳಗಿಳಿಸಿದರು. ಬಳಿಕ ವೃದ್ಧ ನರಸಿಂಹಯ್ಯನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದರು. ಇದೀಗ ವೃದ್ಧ ಟವರ್ ಏರಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ನಾಗರಪಂಚಮಿಗೆ ಅರಿಶಿಣ ಎಲೆಯ ಸಿಹಿ ಕಡುಬು ಮಾಡಿ ಸವಿಯಿರಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *