Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹರೀಶ್ ರಾಜ್ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ: ಅಭಿಮಾನಿಗಳಿಗೆ ಋಣಿ ಎಂದ ನಟ

Public TV
Last updated: August 3, 2022 11:08 am
Public TV
Share
2 Min Read
harish raj 3
SHARE

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ.  ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

harish raj 5

1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು ನಟಿಸಿದ್ದ”ದೋಣಿ ಸಾಗಲಿ” ಚಿತ್ರದ ಮೂಲಕ ನನ್ನ ಸಿನಿಪಯಣ ಆರಂಭವಾಯಿತು. ಅದೇ ವರ್ಷ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ನಿರ್ದೇಶಿಸಿದ್ದ “ತಾಯಿ ಸಾಹೇಬ” ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಅದರಲ್ಲಿ ನಾನು ಜಯಮಾಲ ಅವರ ಮಗನ ಪಾತ್ರ ನಿರ್ವಹಣೆ ಮಾಡಿದ್ದೆ.  ಇಂದಿನ ಸಮಾರಂಭಕ್ಕೆ ನನ್ನ ಮೊದಲ ಸಿನಿಮಾ ನಿರ್ಮಾಪಕರಾದ ಮಧುಸೂದನ್ ಗೌಡ ಅವರು, ಖ್ಯಾತ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ ಸರ್, ಸುನೀಲ್ ಪುರಾಣಿಕ್ ಹಾಗೂ ಭಾ.ಮ.ಹರೀಶ್  ಸರ್ ಬಂದಿರುವುದು ತುಂಬಾ ಖುಷಿಯಾಗಿದೆ. ಅವರಿಗೆ ಅನಂತ ಧನ್ಯವಾದ. ನಾನು, ಸುನೀಲ್ ಪುರಾಣಿಕ್ ಅವರು ಫಣಿ ರಾಮಚಂದ್ರ ನಿರ್ದೇಶನದ “ದಂಡ ಪಿಂಡಗಳು” ಧಾರಾವಾಹಿಯಲ್ಲಿ ಜೊತೆಗೆ ನಟಿಸಿದ್ದೆವು. ಇದೆಲ್ಲಾ ನೆನಪಿಸಿಕೊಂಡರೆ ಇಷ್ಟು ಬೇಗ 25 ವರ್ಷಗಳು ಕಳೆದು ಹೋಯಿತಾ? ಅನಿಸುತ್ತದೆ.  ಈ ಇಪ್ಪತ್ತೈದು ವರ್ಷಗಳಲ್ಲಿ 60 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಾಡಿದ್ದೇನೆ. ಗಿರೀಶ್ ಕಾಸರವಳ್ಳಿ, ಗಿರೀಶ್ ಕಾರ್ನಾಡ್, ರಾಜೇಂದ್ರ ಸಿಂಗ್ ಬಾಬು ಅವರಂತಹ ಶ್ರೇಷ್ಠ ನಿರ್ದೇಶಕರ ಚಿತ್ರಗಳಲ್ಲಿ ನಟಿಸಿದ್ದೇನೆ.

harish raj 2

ಬಿಗ್ ಬಾಸ್ ನನಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದೆ. ನಾನು ಏನಾದರೂ ಈ ರಂಗದಲ್ಲಿ ಸಾಧನೆ ಮಾಡಿದ್ದೀನಿ ಅಂದರೆ ಅದಕ್ಕೆ ಕಾರಣ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಹಾಗೂ ಮಾಧ್ಯಮದವರು. ಇಡೀ ಚಿತ್ರರಂಗಕ್ಕೆ ನಾನು ಚಿರ ಋಣಿ ಎಂದರು ಹರೀಶ್ ರಾಜ್. ಇದನ್ನೂ ಓದಿ:ಅಫೇರ್ ಆರೋಪ ಬೆನ್ನಲ್ಲೇ ಧಿಡೀರ್ ಸಂಭಾವನೆ ಹೆಚ್ಚಿಸಿಕೊಂಡ ಪವಿತ್ರಾ ಲೋಕೇಶ್

harish raj 1

ಸ್ನೇಹಿತರೊಬ್ಬರ ಮೂಲಕ ನನಗೆ ಹರೀಶ್ ರಾಜ್ ಪರಿಚಯವಾದರು. ರಬಕವಿಯಲ್ಲಿ “ತಾಯಿಸಾಹೇಬ” ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಜಯಮಾಲ, ಶಿವರಾಮಣ್ಣ ಭಾಗವಹಿಸಿದ್ದರು. ತುರ್ತುಕಾರ್ಯದ ನಿಮಿತ್ತ ಶಿವರಾಮಣ್ಣ ಬೆಂಗಳೂರಿಗೆ ತೆರಳಬೇಕಾಯಿತು. ಆಗ ತಕ್ಷಣ ಹರೀಶ್ ರಾಜ್ ಅವರಿಗೆ ಫೋನ್ ಮಾಡಿ, ನಾಳೆ ನಿಮ್ಮ ಪಾತ್ರದ ಚಿತ್ರೀಕರಣವಿದೆ. ರಾತ್ರಿಯೇ ಹೊರಟು ಬನ್ನಿ ಎಂದೆ. ಬೆಳಗ್ಗೆ ಬಂದರು. ಯಾವುದೇ ಆಯಾಸವಿಲ್ಲದೆ ಅಂದಿನ ಚಿತ್ರೀಕರಣದಲ್ಲಿ ಲವಲವಿಕೆಯಿಂದ ಭಾಗವಹಿಸಿ, ಎಲ್ಲರ ಮೆಚ್ಚುಗೆ ಪಡೆದರು. ನಂತರ ನನ್ನ “ದ್ವೀಪ” ಚಿತ್ರದಲ್ಲೂ ಅಭಿನಯಿಸಿದ್ದರು. ಆ ಚಿತ್ರದ ಅಭಿನಯಕ್ಕಾಗಿ ಇವರು ರಾಷ್ಟ್ರೀಯ ಪ್ರಶಸ್ತಿ ರೇಸ್ ನಲ್ಲಿ ಇದ್ದರು ಎಂದು ನನಗೆ ನಿಧಾನವಾಗಿ ತಿಳಿಯಿತು. ಒಟ್ಟನಲ್ಲಿ ಹರೀಶ್ ರಾಜ್ ಉತ್ತಮ ನಟ.‌ ಮುಂದೆ ಸಹ ಅವರಿಗೆ ಒಳ್ಳೆಯ ಅವಕಾಶಗಳು ಸಿಗಲಿ ಎಂದು ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾರೈಸಿದರು.

harish raj 4

ತಮ್ಮ ಹರೀಶ್ ರಾಜ್ ಒಡನಾಟದ ಬಗ್ಗೆ ಸುನೀಲ್ ಪುರಾಣಿಕ್ ನೆನಪಿಸಿಕೊಂಡರು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್  ಶುಭಾಶಯ ತಿಳಿಸಿದರು.

Live Tv
[brid partner=56869869 player=32851 video=960834 autoplay=true]

TAGGED:actorBelihabbaharish rajsandalwoodನಟಬೆಳ್ಳಿಹಬ್ಬಸ್ಯಾಂಡಲ್ ವುಡ್ಹರೀಶ್ ರಾಜ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
2 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
2 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
3 minutes ago
train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
22 minutes ago
Ahmedabad Plane Crash Capt Sumeet Sabharwal is a LTC with 8200 Hrs of experience
Latest

ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

Public TV
By Public TV
27 minutes ago
Ahmedabad Plane Crash Nikhil Kumaraswamy
Bengaluru City

ಅಹಮದಾಬಾದ್‌ನಲ್ಲಿ ವಿಮಾನ ದುರಂತ – ನಿಖಿಲ್ ಕುಮಾರಸ್ವಾಮಿ ಸಂತಾಪ

Public TV
By Public TV
28 minutes ago
Maharashtra Murder
Crime

ಮಹಾರಾಷ್ಟ್ರ| ಮದುವೆಯಾದ ಮೂರೇ ವಾರಕ್ಕೆ ಕೊಡಲಿಯಿಂದ ಪತಿಯ ಹತ್ಯೆಗ್ಯದ ಪತ್ನಿ!

Public TV
By Public TV
34 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?