ಸಿದ್ದರಾಮಯ್ಯ ಇಂದು ತಮ್ಮ ರಾಜಕೀಯ ನಿವೃತ್ತಿ ಘೋಷಿಸಲಿ: ಅಶ್ವತ್ಥ್‌ನಾರಾಯಣ ಟಾಂಗ್

Public TV
2 Min Read
Ashwath Narayan

ಬೆಳಗಾವಿ: ದಾವಣಗೆರೆಯಲ್ಲಿ ನಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ 75ನೇ ಜನ್ಮದಿನಕ್ಕೆ ಶುಭಕೋರುತ್ತಲೇ ಅವರಿಗೆ ಸಚಿವ ಅಶ್ವತ್ಥ್‌ನಾರಾಯಣ ಟಾಂಗ್ ನೀಡಿದರು.

ನಗರದಲ್ಲಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೀಬೇಕಾ ಅಂತಾ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನೂರಕ್ಕೆ ನೂರು ರಿಟೈರ್‌ಮೆಂಟ್ ಪಡೆಯಬೇಕು. ಇವರ ಬಾರವನ್ನು ಹೊತ್ತುಕೊಂಡು ಎಲ್ಲಿಗೆ ಹೋಗಬೇಕು. ಇವರ ಮೋಜು ಮಸ್ತಿ ಏನ್ರಿ, ಎಲ್ಲವನ್ನೂ ಮರೆತಿದ್ದಾರೆ. ಇವರ ಕಥೆ ಏನ್ರಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ:  ಸಿದ್ದರಾಮೋತ್ಸವ ಹೌಸ್ ಫುಲ್- ಸಿದ್ದರಾಮಯ್ಯ ಬಗ್ಗೆ ಹಾಡಿಗೆ ಕಂಬಳಿ ಬೀಸಿ ಡ್ಯಾನ್ಸ್ ಮಾಡಿದ ಅಭಿಮಾನಿಗಳು 

Fans Siddaramaiah Congress Siddaram Utsava Sangeetha Davangere

ಇವತ್ತು ಇಂತಹ ಮಹಾಪುರುಷರ ಜನುಮ ದಿನ ಆಗ್ತಿದೆ. ಯಾವ ಕಾರಣಕ್ಕೆ ಜನ್ಮದಿನ ಆಗ್ತಿದೆ ಗೊತ್ತಿಲ್ಲ. ಏನ್ ಕೊಡುಗೆ ಕೊಟ್ಟಿದ್ದಾರೆ ಗೊತ್ತಿಲ್ಲ. ಅವರ ಭಾವನೆಗಳಿಗೆ ನಾನು ಅಗೌರವ ಕೊಡುವಂತದ್ದು ಆಗಬಾರದು. ಒಟ್ಟಾರೆ ಇದು ಅಪ್ರಸ್ತುತ, ಇಂದು ಅವರು ನಿವೃತ್ತಿ ಘೋಷಣೆ ಮಾಡಲಿ ಅಂತಾ ವಿನಂತಿಸುತ್ತೇನೆ ಎಂದರು.

ಸಿದ್ದರಾಮಯ್ಯ ಅಮೃತ ಮಹೋತ್ಸವ ವಿಚಾರಕ್ಕೆ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರ ಜನ್ಮದಿನಕ್ಕೆ ಹೃದಯಪೂರ್ವಕ ಶುಭಾಶಯಗಳು. ಸಿದ್ದರಾಮಯ್ಯ ಅವರಿಗೆ ಭಗವಂತ ಆಯುರಾರೋಗ್ಯ ಎಲ್ಲ ಕರುಣಿಸಲಿ ಅಂತಾ ಪ್ರಾರ್ಥಿಸುತ್ತೇನೆ.ಸಮಾಜದಲ್ಲಿ ರಾಜಕೀಯ ಪಕ್ಷದ ನಾಯಕನ ಯಾವುದೇ ಕಾರ್ಯಕ್ರಮ ಇದ್ದರೂ ರಾಜಕೀಯ ಕಾರ್ಯಕ್ರಮವೇ ಆಗುತ್ತದೆ ಎಂದು ತಿಳಿಸಿದರು.

BJP CONGRESS FLAG

ಸಿದ್ದರಾಮಯ್ಯರ ಶಕ್ತಿ ಪ್ರದರ್ಶನವಾ ಅಂತಾ ಮಾಧ್ಯಮಗಳ ಪ್ರಶ್ನೆಗೆ, ಎಲ್ಲರೂ ಶಕ್ತಿ ಪ್ರದರ್ಶನ ಮಾಡಬೇಕು. ಮಾಡ್ತಾರೆ ಏನ್ ತಪ್ಪೇನಿಲ್ಲ. ಜನರ ವಿಶ್ವಾಸ ಪಡೆದು ಜನರ ಆಶೀರ್ವಾದ, ಬೆಂಬಲ ಪಡೆಯಬೇಕು. ಇದೊಂದು ಶುಭ ಸಂದರ್ಭ 75ನೇ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಹಿಂದೆ ಆಗಿಬಿಟ್ಟಿದ್ದಾರೆ. ಇನ್ಮುಂದೆ ಆಗಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಂಡ ಪಕ್ಷ. ಪ್ರಸ್ತುತವಾದ ಪಕ್ಷ ಅಲ್ಲ. ವಿಚಾರ, ಧ್ಯೇಯೋದ್ದೇಶಗಳ ಸ್ಪಷ್ಟತೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕಾಗಿ ಹಾತೊರೆಯುವಂತಹ ಪಕ್ಷವಾಗಿದೆ. ಇಂದು ಇಡೀ ದೇಶದಲ್ಲಿ ಉತ್ತಮವಾದ ಬುನಾದಿ ಹಾಕದೇ ಇದ್ದ ಪಕ್ಷ ಕಾಂಗ್ರೆಸ್. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡಲು ಮೂಲಪುರುಷರು, ಕಾರಣಿಕರ್ತರು ಕಾಂಗ್ರೆಸ್ ಪಕ್ಷದವರು. ಭ್ರಷ್ಟಾಚಾರ ಸಂಸ್ಕøತಿ ತಂದಿದ್ದಾರೆ. ಅದನ್ನ ಕ್ಲೀನ್ ಮಾಡಬೇಕು ಎಂದು ಆರೋಪಿಸಿದರು. ಇದನ್ನೂ ಓದಿ: ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಕೈಬಿಡಿ – ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ 

Assembly BJP Congress Siddaramaiah High Command Chief Minister 2

ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ಒಗ್ಗಟ್ಟಿನ ಜಪ ವಿಚಾರಕ್ಕೆ, ಅವರ ಪಕ್ಷ ಉಳಿಸಿಕೊಳ್ಳಲು ಪ್ರಯತ್ನ ಮಾಡಬೇಕು. ಅವರ ಪಕ್ಷ ಸಂಪೂರ್ಣ ನೆಲೆ, ವಿಶ್ವಾಸ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷ ಕೆಲವೇ ವರ್ಷಗಳಲ್ಲಿ ಮ್ಯೂಸಿಯಂ ಸೇರಿಕೊಳ್ಳುತ್ತದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಇತ್ತಪ್ಪಾ ಅಂತಾ ಮ್ಯೂಸಿಯಂ ಸೇರೋ ಕಾಲ ಬಂದಿದೆ ಎಂದು ಟೀಕಿಸಿದರು.

ಡಿಕೆಶಿ, ಸಿದ್ದರಾಮಯ್ಯ ಒಂದಾಗ್ತಾರಾ? ಯಾವ ವಿಚಾರದಲ್ಲಿ ಒಂದು ಆಗ್ತಾರೆ? ಯಾವ ತತ್ವ, ಯಾವ ಮೌಲ್ಯದ ಮೇಲೆ ಆಗ್ತಾರೆ. ಎಲ್ಲರೂ ನಾನು ನಾನು ಅಂತಾ ಅರ್ಜಿ ಹಾಕಿದ್ದಾರೆ. ವಯಸ್ಸಾದವರು, ಯುವಕರು, ಮಧ್ಯಮ ವಯಸ್ಸಿನವರು ಅರ್ಜಿ ಹಾಕಿದ್ದಾರೆ. ಈಗಿನ ಕಾಲಕ್ಕೆ ಇವರೆಲ್ಲ ಸಂಪೂರ್ಣವಾಗಿ ಅಪ್ರಸ್ತುತರಾಗಿದ್ದಾರೆ. ಇವರು ಈಗ ಮಾರ್ಗದರ್ಶಿಗಳಾಗಿ ಆಶೀರ್ವಾದ ಮಾಡಿಕೊಂಡು ಇರಬೇಕು ಎಂದು ಟಾಂಗ್ ಕೊಟ್ಟರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *