Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ

Bengaluru City

ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ

Public TV
Last updated: August 3, 2022 6:34 pm
Public TV
Share
2 Min Read
MAHESH JOSHI
SHARE

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದೆ.

ಇಲ್ಲಿಯವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನವನ್ನು ನೀಡಿರಲಿಲ್ಲ. ಇದೇ ಮೊಟ್ಟಮೊದಲ ಬಾರಿಗೆ ಸರ್ಕಾರ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದೆ.

ಸಚಿವರ ದರ್ಜೆ ಸ್ಥಾನಮಾನ ನೀಡಿದ ಸಿಎಂ ಬೊಮ್ಮಾಯಿ ಅವರಿಗೆ ಸಮಗ್ರ ಕನ್ನಡಿಗರ ಪರವಾಗಿ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

mahesh joshi

ಹೇಳಿಕೆಯಲ್ಲಿ ಏನಿದೆ?
ಬಸವರಾಜ ಬೊಮ್ಮಾಯಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ-ಗರಿಮೆ, ಇತಿಹಾಸವನ್ನು ಮನಗಂಡು, ನಾಡು-ನುಡಿಗೆ ಪರಿಷತ್ತು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಪರಿಗಣಿಸಿ ಹಾಗೂ ಪರಿಷತ್ತಿನ ಚುನಾವಣೆ ಇತಿಹಾಸದಲ್ಲಿ ದಾಖಲೆಯನ್ನು ಸೃಷ್ಟಿಸಿದ ಮತ್ತು ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡು, ಅನೇಕ ಕ್ರಾಂತಿಕಾರಿ ಬದಲಾವಣೆಯ ಮುಖೇನ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಕಾರ್ಯವೈಖರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಕ್ಷಣದಿಂದ ಇಂದಿನಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನವನ್ನು ನೀಡಿ ಗೌರವಿಸಿರುವುದು ಅತ್ಯಂತ ಸಂತಸದಾಯಕ ವಿಷಯವಾಗಿದೆ. ಇದನ್ನೂ ಓದಿ: ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

ಕನ್ನಡ ಸಾಹಿತ್ಯ ಪರಿಷತ್ತಿಗೆ ಕನಿಷ್ಠ ಒಂದು ಕೋಟಿ ಸದಸ್ಯತ್ವದ ಗುರಿಯನ್ನು ಹೊಂದಿದ್ದು, ಜನಸಾಮಾನ್ಯರು ಪರಿಷತ್ತಿನ ಸದಸ್ಯರಾಗಬೇಕೆಂಬ ಸದುದ್ದೇಶದಿಂದ ಹಾಗೂ ಗ್ರಾಮಮಟ್ಟಕೆ ಪರಿಷತ್ತನ್ನು ಕೊಂಡೊಯ್ಯಬೇಕೆಂಬ ದೃಷ್ಟಿಯಿಂದ ಸದಸ್ಯತ್ವ ಶುಲ್ಕವನ್ನು 250 ರೂ. ಗಳಿಗೆ ಇಳಿಸಿ ಆನ್‌ಲೈನ್‌ನಲ್ಲೇ ನೋಂದಾಯಿಸಲು ಅತ್ಯಾಧುನಿಕ ತಂತ್ರಜ್ಞಾನದ ಆ್ಯಪ್ ಅನ್ನು ಪರಿಷತ್ತಿಗೆ ಅಳವಡಿಸಿಕೊಂಡಿರುವ, ವಿಶ್ವಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸಲು ಕ್ರಮಕೈಗೊಂಡಿರುವ ಹಾಗೂ ಕನ್ನಡ ಶಾಲೆಗಳ ಪುನಶ್ಚೇತನ ಮಾಡುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ಸರ್ಕಾರ ನೀಡಿರುವ ರಾಜ್ಯ ಸಚಿವರ ದರ್ಜೆ ಸ್ಥಾನಮಾನದಿಂದಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕನ್ನಡದ ಕೆಲಸಗಳನ್ನು ಮಾಡಲು ಶಕ್ತಿ ಬಂದಂತಾಗಿದೆ.

ಸರ್ಕಾರ ರಾಜ್ಯ ಸಚಿವರ ದರ್ಜೆ ಸ್ಥಾನಮಾನದ ಗೌರವ ನೀಡಿರುವುದು ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರಿಗೆ ಸಲ್ಲಿಸಿರುವ ಸನ್ಮಾನವಾಗಿದೆ. ಈ ಮೂಲಕ ಮಾನ್ಯ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲೆ ಸರ್ಕಾರ ಇಟ್ಟಿರುವ ಭರವಸೆ, ವಿಶ್ವಾಸವನ್ನು ಕಾಪಾಡಿಕೊಂಡು ಹೋಗುವ ಹಾಗೂ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತುಕೊಂಡು ಕನ್ನಡ-ಕನ್ನಡಿಗ-ಕರ್ನಾಟಕ ಇವುಗಳ ಹಿತರಕ್ಷಣೆ ಮತ್ತು ಅಭಿವೃದ್ಧಿಗೆ ಕಟಿಬದ್ಧನಾಗಿರುತ್ತೇನೆ ಎಂಬ ಭಾವನೆಯನ್ನು ಈ ಸುಸದಂರ್ಭದಲ್ಲಿ ಡಾ. ಮಹೇಶ ಜೋಶಿ ಅವರು ವ್ಯಕ್ತಪಡಿಸಿರುತ್ತಾರೆ.

ಕನ್ನಡಿಗರ ಒತ್ತಾಸೆಯಂತೆ, ಕನ್ನಡ ಸಾಹಿತ್ಯ ಪರಿಷತ್ತಿನಂತಹ ಘನ ಸಂಸ್ಥೆಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಪರಿಷತ್ತಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿರುವುದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರಾದಿಯಾಗಿ, ಜಿಲ್ಲಾ, ತಾಲ್ಲೂಕು, ಗಡಿರಾಜ್ಯ, ಹೋಬಳಿ ಘಟಕಗಳ ಕಾರ್ಯಕಾರಿ ಸಮಿತಿ ಸದಸ್ಯರ ಹಾಗೂ ಸಮಗ್ರ ಕನ್ನಡಿಗರ ಪರವಾಗಿ ಪರಿಷತ್ತು ಧನ್ಯವಾದಗಳನ್ನು ಸಲ್ಲಿಸುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:kannadakarnatakamahesh joshiಕನ್ನಡಕರ್ನಾಟಕಬಸವರಾಜ ಬೊಮ್ಮಾಯಿಮಹೇಶ ಜೋಶಿ
Share This Article
Facebook Whatsapp Whatsapp Telegram

Cinema news

Suhana Khan
ಸ್ವಂತ ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
33 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
50 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
1 hour ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?