Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

Dakshina Kannada

ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

Public TV
Last updated: August 11, 2022 12:10 pm
Public TV
Share
3 Min Read
POLICE 2 3
SHARE

– ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌
– ಬೆಳ್ಳಾರೆಯ ಮೂವರು ಆರೋಪಿಗಳು ಅರೆಸ್ಟ್‌

ಮಂಗಳೂರು: ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವಾರ ಹಿಂದೆಯೇ ಹಂತಕರು ಯೋಜನೆ ರೂಪಿಸಿದ್ದರು. ಆದರೆ ಪ್ರತಿ ನಿತ್ಯ ಪತ್ನಿ ಜೊತೆ ಪ್ರವೀಣ್‌ ಬರುತ್ತಿದ್ದ ಹಿನ್ನೆಲೆಯಲ್ಲಿ ಹತ್ಯೆ ದಿನವನ್ನು ಮುಂದೂಡುತ್ತಿದ್ದರು. ಆದರೆ ಜುಲೈ 26ರ ರಾತ್ರಿ ಪತ್ನಿ ಇಲ್ಲದ ಸಮಯದಲ್ಲಿ ಹತ್ಯೆ ಮಾಡಿದ ವಿಚಾರ ಈಗ ತಿಳಿದು ಬಂದಿದೆ.

ಪ್ರವೀಣ್ ಹತ್ಯೆ ಮಾಡಿದ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಾದ ಶಿಯಾಬ್, ರಿಯಾಝ್, ಬಶೀರ್ ಬೆಳ್ಳಾರೆ ಆಸುಪಾಸಿನ ನಿವಾಸಿಗಳಾಗಿದ್ದಾರೆ. ಮಸೂದ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಕ್ಕೆ ಈ ಕೃತ್ಯ ನಡೆದಿದೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 10 ಮಂದಿಯ ಬಂಧನವಾಗಿದೆ.

PRAVEEN KUMAR NETTAR NUTHAN 2

ಹತ್ಯೆ ಮಾಡಿದ್ದು ಯಾಕೆ?
ಜುಲೈ 19ರಂದು ಬೆಳ್ಳಾರೆಯಲ್ಲಿ ಮಸೂದ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಜುಲೈ 21ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಸೂದ್ ಸಾವನ್ನಪ್ಪಿದ್ದಕ್ಕೆ ಪ್ರತೀಕಾರಕ್ಕಾಗಿ ಜುಲೈ 21ರಂದೇ ಬೆಳ್ಳಾರೆಯಲ್ಲೇ ಸಂಘ ಪರಿವಾರದ ಪ್ರಮುಖನ ಹತ್ಯೆಗೆ ಹಂತಕರು ಸ್ಕೆಚ್‌ ಹಾಕಿದ್ದರು.

ಬೆಳ್ಳಾರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದ ಪ್ರವೀಣ್ ನೆಟ್ಟಾರು ಕೋಳಿ ಉದ್ಯಮವನ್ನೂ ಆರಂಭಿಸಿ ಯಶಸ್ವಿಯಾಗಿದ್ದರು. ಹೀಗಾಗಿ ಪ್ರವೀಣ್ ಅವರನ್ನು ಹತ್ಯೆಯನ್ನು ಮಾಡಲು ಗ್ಯಾಂಗ್‌ ಸಿದ್ಧತೆ ಮಾಡಿತ್ತು. ಹತ್ಯೆಗಾಗಿ ಒಂದು ವಾರಗಳ ತಯಾರಿ ಮಾಡಿದ್ದ ಹಂತಕರು ಜುಲೈ 21ರ ಬಳಿಕ ಪ್ರತಿದಿನ ಪ್ರವೀಣ್ ಅಂಗಡಿ ಬಳಿ ಬರುತ್ತಿದ್ದರು. ಆದರೆ ಪ್ರವೀಣ್ ಜೊತೆಗೆ ಪತ್ನಿ ಇರುತ್ತಿದ್ದನ್ನು ಗಮನಿಸಿ ಮರಳುತ್ತಿದ್ದರು. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್

Praveen Kumar Nettar Case

ಜುಲೈ 26 ರಂದು ಪ್ರವೀಣ್ ಒಬ್ಬರೇ ಅಂಗಡಿಯಲ್ಲಿ ಇರುವುದನ್ನು ಗಮನಿಸಿದ್ದ ಗ್ಯಾಂಗ್‌ ಹತ್ಯೆ ಮಾಡಿ ಹಳೆಯ ಸ್ಪ್ಲೆಂಡರ್ ಬೈಕ್ ಏರಿ ಪರಾರಿಯಾಗಿತ್ತು. ನಂಬರ್ ಪ್ಲೇಟ್ ಅಸ್ಪಷ್ಟವಾಗಿ ಕಾಣುತ್ತಿದ್ದ ಬೈಕ್‌ ಏರಿದ್ದ ಇವರು ಬಳಿಕ ಕಾರಿನನಲ್ಲಿ ಕೇರಳಕ್ಕೆ ಪರಾರಿಯಾಗಿದ್ದರು.

ಮೊದಲೇ ಪ್ಲ್ಯಾನ್‌:
ಪ್ರವೀಣ್‌ ಹತ್ಯೆಗೆ ಮೊದಲೇ ಕೇರಳದಲ್ಲಿ ಎಲ್ಲಿ ತಂಗಬೇಕು ಎಂಬುದನ್ನು ಹಂತಕರು ಪ್ಲ್ಯಾನ್‌ ಮಾಡಿದ್ದರು. ಅದರಂತೆ ಮೊದಲು ತಲಶೇರಿ, ಬಳಿಕ ಕಣ್ಣೂರು, ಮಲ್ಲಪುರಂನಲ್ಲಿರುವ ಅಡಗುತಾಣದಲ್ಲಿ ತಂಗಿದ್ದರು. 15 ದಿನದ ಅಂತರದಲ್ಲಿ ಏಳು ಕಡೆಗಳಲ್ಲಿ ಹಂತಕರು ಅಶ್ರಯ ಪಡೆದಿದ್ದರು. ಹಂತಕರು ನೆಲೆಸಿದ್ದ ಜಾಗ ಪತ್ತೆಯಾಗಿ ಪೊಲೀಸರು ಸ್ಥಳಕ್ಕೆ ಹೋದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗುತ್ತಿದ್ದರು.

praveen nettaru

ಪೊಲೀಸರ ಪ್ಲ್ಯಾನ್‌ ಏನಿತ್ತು?
ಆರೋಪಿಗಳ ಬುಡಸಮೇತ ಹೆಡೆಮುರಿ ಕಟ್ಟಲು ಎಡಿಜಿಪಿ ಅಲೋಕ್ ಕುಮಾರ್ ಪ್ಲ್ಯಾನ್‌ ಮಾಡಿದ್ದರು. ಮೊದಲು ಹಂತಕರ ಕುಟುಂಬ ಬಳಿಕ ಹಂತಕರ ಆತ್ಮೀಯರ ತೀವ್ರ ವಿಚಾರಣೆ ನಡೆಸಿದ್ದರು. ಈ ವೇಳೆ ಕೃತ್ಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗವಹಿಸಿದವರ ಎಲ್ಲರ ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಹಂತಕರಿಗೆ ಆಶ್ರಯ ನೀಡಿದವರಿಗೂ ಖಡಕ್ ಎಚ್ಚರಿಕೆ ನೀಡಿದ್ದರು.

ಹದಿನೈದು ದಿನದಲ್ಲಿ ಐದು ಬಾರಿ ಬೆಳ್ಳಾರೆಗೆ ಭೇಟಿ ನೀಡಿದ್ದ ಎಡಿಜಿಪಿ ಅಲೋಕ್ ಕುಮಾರ್ ಬುಧವಾರವೂ ಆರು ಜಿಲ್ಲೆಯ ಎಸ್ಪಿಗಳ ಜೊತೆ ಸಭೆ ನಡೆಸಿದ್ದರು. ಹಂತಕರಿಗೆ ಆಶ್ರಯ ನೀಡಿದವರಿಗೆ ಅಡಗುತಾಣಗಳಿಗೆ ಸೇನಾ ಮಾದರಿಯಲ್ಲೇ ಕಾರ್ಯಾಚರಣೆ ಮಾಡಲಾಗುವುದು ಎಚ್ಚರಿಕೆಯ ಸಂದೇಶವನ್ನು ಅಲೋಕ್‌ ಕುಮಾರ್‌ ರವಾನಿಸಿದ್ದರು. ಎಚ್ಚರಿಕೆ ನೀಡಿದ ಬೆನ್ನಲ್ಲೇ ಹಂತಕರು ಸೆರೆಯಾಗಿದ್ದಾರೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ಸಿಕ್ಕಿದೆ.

ಪ್ರವೀಣ್‌ ನೆಟ್ಟಾರು ಹಂತಕರ ಬಂಧನಕ್ಕೆ ಪೊಲೀಸರು 6 ವಿಶೇಷ ತಂಡವನ್ನು ರಚಿಸಿತ್ತು. ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದರಿಂದ ಈ ಹತ್ಯೆ ಕೇಸ್‌ ತನಿಖೆಯನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವರ್ಗಾಯಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:bjpkeralapolicePraveen Nettaruಅಲೋಕ್ ಕುಮಾರ್ಪೊಲೀಸ್ಪ್ರವೀಣ್ ನೆಟ್ಟಾರುಬೆಳ್ಳಾರೆ
Share This Article
Facebook Whatsapp Whatsapp Telegram

Cinema news

dhanush 1
ಸ್ಟಾರ್ ನಟಿಯನ್ನು ಮದ್ವೆಯಾಗಲು ಸಿದ್ಧವಾದ ಧನುಷ್!
Cinema Latest South cinema
bigg boss vulture remarks
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್
Cinema Latest Main Post TV Shows
Anup Rubens
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Cinema Latest Sandalwood Top Stories
AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema

You Might Also Like

HD Kumaraswamy
Bengaluru City

ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮುಕ್ತವಾಗಿದ್ದೇವೆ: ಕುಮಾರಸ್ವಾಮಿ

Public TV
By Public TV
5 minutes ago
GPS
Districts

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Public TV
By Public TV
20 minutes ago
HC MAHADEVAPPA
Bengaluru City

ಕುಮಾರಸ್ವಾಮಿ ಕಾಲದಲ್ಲಿ ಅವ್ರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು: ಹೆಚ್‌.ಸಿ ಮಹದೇವಪ್ಪ

Public TV
By Public TV
31 minutes ago
BMC Election Result Uddhav Thackerays Shiv Senas 30 year control collapse
Latest

ಠಾಕ್ರೆ ಕೋಟೆ ಧ್ವಂಸ – 30 ವರ್ಷದ ಬಳಿಕ ಮುಂಬೈಗೆ ಬಿಜೆಪಿ ಮೇಯರ್‌?

Public TV
By Public TV
46 minutes ago
Nikhil Kumaraswamy
Bengaluru City

ಶಿಡ್ಲಘಟ್ಟ ಕೇಸ್‌ನಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕ್ರಮ ಆಗದಿದ್ದರೆ ಬೀದಿಗಿಳಿದು ಹೋರಾಟ: ನಿಖಿಲ್ ಕುಮಾರಸ್ವಾಮಿ

Public TV
By Public TV
2 hours ago
Nikhil Kumaraswamy 1
Bengaluru City

ಜಿಬಿಎ, ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ದೆಹಲಿಯಲ್ಲಿ ತೀರ್ಮಾನ: ನಿಖಿಲ್ ಕುಮಾರಸ್ವಾಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?