ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ

Public TV
1 Min Read
Kashmiri_Pandits

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ (ಕೆಪಿಎಸ್‌ಎಸ್‌) ಪ್ರತಿಕ್ರಿಯಿಸಿದ್ದು, ಪಂಡಿತರೇ ಕಾಶ್ಮೀರವನ್ನು ತೊರೆಯಿರಿ ಎಂದು ವಿನಂತಿಸಿಕೊಂಡಿದೆ.

ಕಣಿವೆಯಲ್ಲಿ ಕಾಶ್ಮೀರಿ ಪಂಡಿತರ ಮೇಲೆ ಮತ್ತೊಂದು ದಾಳಿ ನಡೆಸಿರುವ ಉಗ್ರರು ಕಾಶ್ಮೀರದಲ್ಲಿರುವ ಎಲ್ಲಾ ಕಾಶ್ಮೀರಿ ಪಂಡಿತರನ್ನು ಕೊಲ್ಲಲಿದ್ದಾರೆ ಎಂದು ಕೆಪಿಎಸ್‌ಎಸ್‌ ಅಧ್ಯಕ್ಷ ಸಂಜಯ್‌ ಟಿಕ್ಕೊ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

KASHMIR PANDIT

ಪ್ರವಾಸಿಗರು ಸುರಕ್ಷಿತವಾಗಿರುವ ಸ್ಥಳ ಕಾಶ್ಮೀರ. ಅಮರನಾಥ ಯಾತ್ರೆಯ ಸಮಯದಲ್ಲಿ ಯಾವುದೇ ದಾಳಿ ನಡೆದಿಲ್ಲ. ಆದರೆ ಮುಸ್ಲಿಮೇತರರು, ವಿಶೇಷವಾಗಿ ಕಾಶ್ಮೀರಿ ಪಂಡಿತರು ದುರ್ಬಲರಾಗಿದ್ದಾರೆ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾಶ್ಮೀರದಲ್ಲಿ ಯಾವುದೇ ಕಾಶ್ಮೀರಿ ಪಂಡಿತರು ಸುರಕ್ಷಿತವಾಗಿಲ್ಲ. ಕಾಶ್ಮೀರಿ ಪಂಡಿತರಿಗೆ ಉಳಿದಿರುವ ಏಕೈಕ ಆಯ್ಕೆಯೆಂದರೆ ಕಾಶ್ಮೀರವನ್ನು ತೊರೆಯುವುದು. ಇಲ್ಲವೇ ಸ್ಥಳೀಯರ ಬೆಂಬಲ ಹೊಂದಿರುವ ಧಾರ್ಮಿಕ ಮತಾಂಧ ಮನಸ್ಸುಗಳಿಂದ ಕೊಲ್ಲಲ್ಪಡುವುದಾಗಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಓವೈಸಿ

ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರ ಗುಂಡು ಮತ್ತೆ ಸದ್ದು ಮಾಡಿದ್ದು, ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸಾವನ್ನಪ್ಪಿದ್ದು, ಮತ್ತೋರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ. ಶೋಪಿಯಾನ್‍ನ ಚೋಟಿಪೋರಾ ಪ್ರದೇಶದಲ್ಲಿದ್ದ ಆಪಲ್ ಆರ್ಕಿಡ್‍ನಲ್ಲಿ ಭಯೋತ್ಪಾದಕರು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿ ಈ ಹತ್ಯೆ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *