ಬೆಳಗಾವಿ: ಕಬಡ್ಡಿ ಆಡುತ್ತಿದ್ದ ಎರಡು ತಂಡಗಳ ಬೆಂಬಲಿಗರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಕೈಗೆ ಸಿಕ್ಕ ಕಟ್ಟಿಗೆಗಳಿಂದ ಯುವಕರು ಬಡಿದಾಡಿಕೊಂಡ ಘಟನೆ ರಾಮದುರ್ಗ ತಾಲೂಕಿನ ಚಂದರಗಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಆವರಣದಲ್ಲಿ ವಲಯಮಟ್ಟದ ಕ್ರೀಡಾ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಚಂದರಗಿ ಹಾಗೂ ಕಟಕೋಳ ಶಾಲೆಯ ವಿದ್ಯಾರ್ಥಿಗಳ ತಂಡಗಳ ನಡುವೆ ಕಬಡ್ಡಿ ಫೈನಲ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಯುವಕರ ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಬಡಿಗೆ ಹಿಡಿದು ಬಡಿದಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ
ಈ ವೇಳೆ ಕೈಗೆ ಸಿಕ್ಕ ಸಿಕ್ಕ ಕಟ್ಟಿಗೆ ಹಿಡಿದು ಎರಡು ಗ್ರಾಮಗಳ ಯುವಕರ ಬಡಿದಾಟ ನೋಡಿದ ಸ್ಥಳೀಯರು ಶಾಲಾ ವಿದ್ಯಾರ್ಥಿಗಳು ಎದ್ದು ಬಿದ್ದು ಓಡಿಹೋಗಿದ್ದಾರೆ. ಸ್ಥಳಕ್ಕೆ ಕಟಕೋಳ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಇದನ್ನೂ ಓದಿ: ಮಧುಮಗ ಎಸ್ಕೇಪ್ – ಲಗ್ನಪತ್ರಿಕೆ, ಮದುವೆ ಸೀರೆ ಹಿಡಿದು ಠಾಣೆ ಮೆಟ್ಟಿಲೇರಿದ ವಧು
Live Tv
[brid partner=56869869 player=32851 video=960834 autoplay=true]