ನಾಟಿ ಕೋಳಿ ಊಟ ಮಾಡಿ ಅಂಬಾರಿಗೆ ಪುಷ್ಪಾರ್ಚನೆ: ಸಿದ್ದು ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Public TV
2 Min Read
mysuru dasara siddaramaiah pratapsimha

ಮೈಸೂರು: ನಾಟಿ ಕೋಳಿ ಊಟ ಮಾಡಿಯೇ ಸಿದ್ದರಾಮಯ್ಯ ದಸರಾ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು. ಈ ಕಾರಣಕ್ಕೆ ಅವರಿಗೆ ಮತ್ತೇ ಅಂಬಾರಿಗೆ ಪುಷ್ಟಾರ್ಚನೆ ಮಾಡುವ ಅವಕಾಶ ಸಿಗಲಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಫೋಟಕ ಆರೋಪ ಮಾಡಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು ಎಂಬ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಹೇಳಿಕೆ ಹಿನ್ನೆಲೆಯಲ್ಲಿ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, 2017 ರ ದಸರಾ ಜಂಬೂ ಸವಾರಿ ದಿನ ಲಲಿತ್ ಮಹಲ್ ಪ್ಯಾಲೇಸ್‌ನಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ತಿಂದು ನಂತರ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು. ಇದಕ್ಕೆ ನಾನೇ ಸಾಕ್ಷಿ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರೇ ನಿಮ್ಮ ಶ್ರೀಮತಿಯವರ ಬಳಿ ಮಾಂಸ ತಿಂದು ಚಾಮುಂಡಿ ತಾಯಿ ದರ್ಶನಕ್ಕೆ ಅವರು ಹೋಗುತ್ತಾರಾ ಅಂತಾ ಕೇಳಿ.  ನಿಮ್ಮ ಮಾತಿಗೆ ನಿಮ್ಮ ಶ್ರೀಮತಿ ಅವರ ಸಹಮತ ಇದ್ಯಾ ಅಂತಾ ಕೇಳಿ ಎಂದರು.

ಸಿದ್ದರಾಮಯ್ಯ ಅವರು ಸಿದ್ದರಾಮನ ಹುಂಡಿಯಲ್ಲಿ ಸಿದ್ದರಾಮೇಶ್ವರ ಜಾತ್ರೆಯಲ್ಲಿ ಸಿಹಿ ಊಟ ಮಾಡಿಸಿದ್ದು ಯಾಕೆ? ಮಾಂಸದ ಊಟ ಯಾಕೆ ಮಾಡಿಸಲಿಲ್ಲ ಎಂದು ಪ್ರಶ್ನಿಸಿದ ಸಂಸದರು, ಜಮೀರ್ ಖಾನ್ ಗೆ ನೀವು ಹಂದಿ ಮಾಂಸ ತಿನ್ನಬಾರದು ಅಂತಾ ದೇವರು ಹೇಳಿಲ್ಲ ಅಂತಾ ಹೇಳಿ ನೋಡೋಣಾ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರು ಅವತ್ತು ವೀರಶೈವ – ಲಿಂಗಾಯತ ಧರ್ಮ ಒಡೆದರು. ಇವತ್ತು ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಯಾವ ಪಕ್ಷದವನೂ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ದೇವೇಗೌಡರ ಜೊತೆ ಸಿದ್ದರಾಮಯ್ಯ ಇದ್ದ ಸಾವಿರಾರು ಫೋಟೋ ಇವೆ. ಹಳೆ ಫೋಟೋ ತೋರಿಸಿ ನೀವು ದೇವೇಗೌಡರ ಜೊತೆಗಾರರು ಎಂದು ಈಗ ಹೇಳೋಕೆ ಆಗುತ್ತಾ? ಸಂಪತ್ ವಿಚಾರದಲ್ಲೂ ಅದೇ ಆಗಿದೆ. ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂದು ತಿರುಗೇಟು ನೀಡಿದರು.

40 ವರ್ಷದ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ 27 ವರ್ಷದ ಕಾಂಗ್ರೆಸ್ ಅನ್ನು ಬೈದಿದ್ದರು. ಈಗ 15 ವರ್ಷದಿಂದ ಕಾಂಗ್ರೆಸ್ ಹೊಗಳುತ್ತಿದ್ದಾರೆ. ನಾರಿನಂತೆ ಸೀರೆ ಎಂಬಂತೆ ಸಿದ್ದರಾಮಯ್ಯ ಥರ ಅವರ ಮಗ ಯತೀಂದ್ರ ಅಷ್ಟೇ. ಮೊಟ್ಟೆ ಎಸೆದಿದ್ದಕ್ಕೆ ನಿಮಗೆ ಇಷ್ಟು ಕೋಪ ಬಂದಿದೆಯಲ್ವಾ? 27 ವರ್ಷ ಜೈಲಲ್ಲಿ ಇದ್ದ ದೇಶಪ್ರೇಮಿ ಸಾವರ್ಕರ್ ಬಗ್ಗೆ ಮಾತನಾಡಿದರೆ ನಮಗೆ ಕೋಪ ಬರಲ್ವಾ ಎಂದು ಕಿಡಿಕಾರಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *