ಚಿಕ್ಕಪೇಟೆಯಲ್ಲಿ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ..?- ಕೆಜಿಎಫ್ ಬಾಬು

Public TV
1 Min Read
KGF BABU

ನವದೆಹಲಿ: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ, ಇನ್ಯಾರು ಆ ಕ್ಷೇತ್ರದಿಂದ ಸ್ಪರ್ಧೆ ಮಾಡಬಾರದು ಎನ್ನುವ ನಿಯಮ ಏನಾದರೂ ಇದೆಯಾ ಎಂದು ಉದ್ಯಮಿ, ಕಾಂಗ್ರೆಸ್ ನಾಯಕ ಯೂಸುಫ್ ಷರಿಫ್ ಅಲಿಯಾಸ್ ಕೆಜಿಎಫ್ ಬಾಬು ಪ್ರಶ್ನಿಸಿದ್ದಾರೆ.

CongressFlags1

ಚಿಕ್ಕಪೇಟೆಯಿಂದ ಸ್ಪರ್ಧಿಸುವ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‍ನಲ್ಲಿದ್ದಿನಿ, ನಮ್ಮ ತಂದೆ, ತಾತಾ ಕೂಡಾ ಕಾಂಗ್ರೆಸ್‍ನಲ್ಲಿದ್ದರು. ನಮ್ಮಗೂ ಟಿಕೆಟ್ ಕೇಳುವ ಅಧಿಕಾರ ಇದೆ. ಚಿಕ್ಕಪೇಟೆಯಿಂದ ಯಾಕೆ ಸ್ಪರ್ಧೆ ಮಾಡಬಾರದು, ಆರ್.ವಿ ದೇವರಾಜ್ ಅಥಾವ ಅವರ ಕುಟುಂಬ ಮಾತ್ರ ಸ್ಪರ್ಧೆ ಮಾಡಬೇಕಾ ಎಂದು ಪ್ರಶ್ನಿಸಿದರು.

KGF BABU 1

ಟಿಕೆಟ್ ಯಾರಿಗೆ ನೀಡಬೇಕು ಎಂದು ಪಕ್ಷ ತಿರ್ಮಾನಿಸುತ್ತಿದೆ. ಚಿಕ್ಕಪೇಟೆಯ ಜನರು ನನಗೆ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಅದಕ್ಕಾಗಿ ನಾನು ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ 350 ಕೋಟಿಯ ಯೋಜನೆ ರೂಪಿಸಿದ್ದು, ಪಕ್ಷದ ಅಡಿಯಲ್ಲಿ ಮುಂದುವರಿಸಲು ಅನುಮತಿ ಕೇಳುತ್ತಿದ್ದೇನೆ.

Sonia Rahul12

ದೆಹಲಿಯಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿಗೆ ಸಮಯ ಕೇಳಿದ್ದೇನೆ, ಸಮಯ ನೀಡಿದರೇ ಭೇಟಿ ಮಾಡಿ ಚರ್ಚಿಸುತ್ತೇನೆ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ನಾನು ಎಲ್ಲರೊಂದಿಗೆ ಅಡ್ಜಸ್ಟ್ ಆಗಿದ್ದರೆ, ನೀವ್ಯಾರು ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಬಸನಗೌಡ ಯತ್ನಾಳ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *