ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಮನೆಯಲ್ಲೂ ಭವಿಷ್ಯ ಹೇಳಲು ಶುರು ಮಾಡಿದ್ದಾರೆ. ತಮ್ಮ ಸಹ ಸ್ಪರ್ಧಿ ಜಯಶ್ರೀಗೆ ಭವಿಷ್ಯ ಹೇಳುವ ಮೂಲಕ ಆತಂಕ ಮೂಡಿಸಿದ್ದಾರೆ. ಈಗಾಗಲೇ ಮದುವೆ ಆದ ವ್ಯಕ್ತಿಯ ಜೊತೆ ರಿಲೇಷನ್ ಶಿಪ್ ನಲ್ಲಿ ಇದ್ದೆ ಎಂದು ಬಿಗ್ ಬಾಸ್ ಮನೆಯಲ್ಲಿ ಜಯಶ್ರೀ ಹೇಳಿಕೊಂಡಿದ್ದರು. ಆದರೂ, ಅವರಿಗೆ ಎರಡು ಮದುವೆ ಆಗುತ್ತವೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.
ನಿನಗೆ ಎರಡು ಮದುವೆ ಆಗುತ್ತವೆ. ಚೆನ್ನಾಗಿರೋ ಮಕ್ಕಳು ಹುಟ್ತವೆ. ಮಕ್ಕಳನ್ನು ನೀನು ಚೆನ್ನಾಗಿಯೇ ನೋಡ್ಕೋತೀಯಾ. ನಿನಗೆ ಹುಟ್ಟಿರುವ ಮಕ್ಕಳು ನಿನಗಿಂತೂ ಎತ್ತರವಾಗಿ ಬೆಳೆಯುತ್ತವೆ. ನಿನ್ನ ಮಕ್ಕಳು ಪುಣ್ಯ ಮಾಡಿರುತ್ತವೆ ಎಂದು ಭವಿಷ್ಯ ನುಡಿದಿರುವ ಆರ್ಯವರ್ಧನ್ ಗುರೂಜಿ. ಮದುವೆ ಬಗ್ಗೆ ಜಯಶ್ರೀ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:‘ಜೊತೆ ಜೊತೆಯಲಿ’ ಅನಿರುದ್ಧ ಗಲಾಟೆ ಧಾರವಾಡಕ್ಕೆ ಶಿಫ್ಟ್: ಪ್ರಕರಣ ತಿಳಿಗೊಳಿಸಲು ಸ್ನೇಹಿತರ ಮನವಿ
ಇದೇ ಸಂದರ್ಭದಲ್ಲಿ ಜಯಶ್ರೀ ತನ್ನ ಬ್ಯುಸಿನೆಸ್ ಬಗ್ಗೆಯೂ ಭವಿಷ್ಯ ಕೇಳಿದರು. ಅದಕ್ಕೂ ಉತ್ತರ ನೀಡಿದ ಆರ್ಯವರ್ಧನ್ ಗುರೂಜಿ, ನಿನಗೆ ಯಾರು ಸಿಗುತ್ತಾರೋ ಅವರನ್ನು ಸರಿಯಾದ ರೀತಿಯಲ್ಲಿ ಬಳಸಿಕೊ ಎಂದು ಕರೆ ನೀಡುತ್ತಾರೆ. ಜಯಶ್ರೀ ನಟಿಸುವ ಸಿನಿಮಾಗಳು ಗೆಲ್ಲದೇ ಇದ್ದರೂ, ಸಿನಿಮಾ ಮಾಡುತ್ತೀಯಾ ಎಂದೂ ಹೇಳಿದ್ದಾರೆ. ಅಲ್ಲದೇ, ಜಯಶ್ರೀಗೆ ದುಡ್ಡು ಮುಖ್ಯ ಎಂದು, ನಿನಗೆ ಮೋಸ ಮಾಡುವವರು ಇರುತ್ತಾರೆ ಎಂದು ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
ಜಯಶ್ರೀಗೆ ಭವಿಷ್ಯ ನುಡಿದದ್ದು ಬಿಗ್ ಬಾಸ್ ಮನೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮೊದಲಿನಿಂದಲೂ ಬಿಗ್ ಬಾಸ್ ಮನೆಯ ಹಲವು ಸದಸ್ಯರು ಆರ್ಯವರ್ಧನ್ ಗುರೂಜಿ ಭವಿಷ್ಯದ ಬಗ್ಗೆ ಅಪನಂಬಿಕೆ ವ್ಯಕ್ತ ಪಡಿಸುತ್ತಲೇ ಬಂದಿದ್ದಾರೆ. ಬರೀ ಸುಳ್ಳುಗಳನ್ನು ಹೇಳುತ್ತಾರೆ ಎಂದು ಟೀಕೆ ಮಾಡಿದ್ದಾರೆ. ಯಾವ ಭವಿಷ್ಯವೂ ನಿಜವಾಗುವುದಿಲ್ಲ, ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದವರು ಇದ್ದಾರೆ. ಇದೀಗ ಜಯಶ್ರೀ ಈ ಭವಿಷ್ಯವನ್ನು ಯಾವ ರೀತಿ ತಗೆದುಕೊಳ್ಳುತ್ತಾರೋ ನೋಡಬೇಕು.