Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಧಾನಕ್ಕೂ ಸಿದ್ಧ, ಸಮರಕ್ಕೂ ಬದ್ಧ: ಆರೋಪದ ಬಗ್ಗೆ ಮುರುಘಾ ಶ್ರೀ ಮೊದಲ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಸಂಧಾನಕ್ಕೂ ಸಿದ್ಧ, ಸಮರಕ್ಕೂ ಬದ್ಧ: ಆರೋಪದ ಬಗ್ಗೆ ಮುರುಘಾ ಶ್ರೀ ಮೊದಲ ಮಾತು

Chitradurga

ಸಂಧಾನಕ್ಕೂ ಸಿದ್ಧ, ಸಮರಕ್ಕೂ ಬದ್ಧ: ಆರೋಪದ ಬಗ್ಗೆ ಮುರುಘಾ ಶ್ರೀ ಮೊದಲ ಮಾತು

Public TV
Last updated: August 27, 2022 7:24 pm
Public TV
Share
3 Min Read
MURUGHA
SHARE

ಚಿತ್ರದುರ್ಗ: ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ಬೆನ್ನಲ್ಲೇ ವಿವಿಧ ಮಠಗಳ ಮಠಾಧೀಶರು, ಜನಪ್ರತಿನಿಧಿಗಳು ಶ್ರೀಗಳ ಬೆಂಬಲಕ್ಕೆ ನಿಂತಿದ್ದಾರೆ.

ಮಠಕ್ಕೆ ಆಗಮಿಸಿ ಶ್ರೀಗಳೊಂದಿಗೆ ಸಮಾಲೋಚನೆ ನಡೆಸುವ ಜೊತೆಗೆ ಮುರುಘಾ ಶರಣರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

muruga shree4444

ಇಂದು ಬೆಳಿಗ್ಗೆಯಿಂದಲೂ ಮೌನವಹಿಸಿದ್ದ ಮುರುಘಾ ಮಠದ ಶ್ರೀಗಳು ತಮ್ಮ ಬೆಂಬಲಿಗರಾದ ಮಾದಾರ ಚನ್ನಯ್ಯ ಶ್ರೀ ಲಿಂಗಮೂರ್ತಿ ಅವರು ಬಂದ ಬಳಿಕ ಸಭೆಯಲ್ಲಿ ಮಾತನಾಡಿದ್ದಾರೆ. ಶ್ರೀಗಳು ಸಭೆಯಲ್ಲಿ ಮಾತನಾಡಿದ್ದ ಆಡಿಯೋ ಇದೀಗ ಪಬ್ಲಿಕ್ ಟಿಗೆ ಲಭ್ಯವಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ – ಮುರುಘಾ ಶರಣರ ವಿರುದ್ಧ ಕೇಸ್‌

ಘಟನೆ ಬಳಿಕ ಮೊದಲ ಬಾರಿಗೆ ಮಾತನಾಡಿರುವ ಶ್ರೀಗಳು, ನಾವು ಸಂದಾನಕ್ಕೂ ಸಿದ್ಧ ಸಮರಕ್ಕೂ ಬದ್ದರಿದ್ದೇವೆ. ಸಂದಾನ ಮತ್ತೆ ಸಮರ ಎರಡೂ ಆಯ್ಕೆಗಳು ಇವೆ. ಸಂದಾನ ನೀವು ಮಾಡಿ, ಒಂದು ವೇಳೆ ಅದು ಫೇಲ್ ಆದರೆ ಸಮರ ಇದ್ದೇ ಇದೆ. ನಮ್ಮ ಪಕ್ಕದಲ್ಲೇ ಇದ್ದು ಹೋದವರೇ ಈ ರೀತಿ ಪಿತೂರಿ, ಒಳಸಂಚು ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.

Muruga Shree

ಆಡಿಯೋನಲ್ಲಿ ಏನಿದೆ?
ನಮ್ಮ ಜೊತೆ ಜಗಳವಾಡಿದ್ರೆ ಏನಾದರೂ ಸಿಗುತ್ತದೆ. ಬೇರೆಯವರ ಜೊತೆ ಜಗಳ ಮಾಡಿದ್ರೆ ಏನು ಸಿಗುತ್ತೆ? ಮುರುಘಾ ಮಠದಲ್ಲಿ ಅಧಿಕಾರಕ್ಕಾಗಿ ಸಂಘರ್ಷ ನಡೆಯುತ್ತಿದೆ. ಕಳೆದ 15 ವರ್ಷಗಳಿಂದ ಮುರುಘಾ ಮಠವನ್ನು ಜನ ನೋಡುವ ಹಾಗೆ ಮಾಡಿದ್ದೇವೆ. ಆದರೆ ಬ್ಲ್ಯಾಕ್‌ಮೇಲ್‌ ತಂತ್ರದ ಮೂಲಕ ಅಧಿಕಾರ ಬೇಕು ಎನ್ನುವುದು ಇಲ್ಲಿನ ಧೋರಣೆಯಾಗಿದೆ. ಇದನ್ನೂ ಓದಿ: ಮುರುಘಾ ಮಠದ ಆಡಳಿತಾಧಿಕಾರಿ, ಅಧಿಕಾರಿ ಪತ್ನಿ ವಿರುದ್ಧ ಕೇಸ್

01 1 5

ನಾವು ಸಂದಾನಕ್ಕೂ ಸಿದ್ಧ ಸಮರಕ್ಕೂ ಬದ್ಧರಿದ್ದೇವೆ. ಸಂದಾನ ಮತ್ತೆ ಸಮರ ಎರಡೂ ಆಯ್ಕೆಗಳು ಇವೆ. ಸಂದಾನ ನೀವು ಮಾಡಿ, ಅದು ಫೇಲ್ ಆದರೆ ಸಮರ ಇದ್ದೇ ಇದೆ. ನಮ್ಮ ಪಕ್ಕದಲ್ಲೇ ಇದ್ದು ಹೋದವರೇ ಈ ರೀತಿ ಪಿತೂರಿ, ಒಳಸಂಚು ಮಾಡಿದ್ದಾರೆ. ಈ ಒಳಸಂಚಿನ ಪ್ರಕ್ರಿಯೆ ನಡೆಯುತ್ತಲೇ ಬಂದಿದೆ. ಈ ಸಮಸ್ಯೆ, ಆರೋಪ ಶಾಶ್ವತವಲ್ಲ. ಇದು ಮುರುಘಾ ಶರಣರ ಅಭಿಮಾನವನ್ನು ಹೆಚ್ಚಿಸುವ ಕೆಲಸವಾಗಿದೆ. ರಾಜ್ಯದ ವಿವಿಧ ಕಡೆಯಿಂದ ಜನರು ಬರ್ತಾ ಇದ್ದಾರೆ, ಫೋನ್ ಮಾಡ್ತಾ ಇದ್ದಾರೆ. ನಿಮ್ಮ ಜೊತೆ ನಾವು ಇದ್ದೇವೆ ಎಂದು ಧೈರ್ಯ ಹೇಳುತ್ತಿದ್ದಾರೆ.

02 3 3

ನಮ್ಮ ಮೇಲಿನ ಅಭಿಮಾನ ಜಾಗೃತವಾಗುತ್ತಿದೆ. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಇದ್ದೇ ಇರುತ್ತೆ. ಮಾನವ ಬಗೆಹರಿಸುವ ಪರಿಹಾರ ಇರುತ್ತೆ. ಕೆಲವೊಂದನ್ನು ಕಾಲವೇ ನಿರ್ಣಯ ಮಾಡುತ್ತೆ. ಕಾಲ ಕೂಡಿ ಬಂದರೆ ಸುಮ್ಮನಾಗುತ್ತೇನೆ, ಇಲ್ಲವಾದ್ರೆ ಹೋರಾಟಕ್ಕೆ ಮುಂದಾಗುತ್ತೇನೆ.

ಕೆಳಗಡೆ ಇದ್ದಾಗ ಗಾಳಿ ಹೊಡೆತ ಕಮ್ಮಿ ಇರುತ್ತವೆ. ಮೇಲೆಕ್ಕೆ ಹೋದಂತೆಲ್ಲ ಗಾಳಿ ಹೊಡೆತ ಬಹಳ ಇರುತ್ತೆ. ಸಣ್ಣವರಿಗೆ ಸಣ್ಣ ಪೆಟ್ಟುಗಳು ಬಂದಂತೆ ದೊಡ್ಡವರಿಗೆ ದೊಡ್ಡ ಪೆಟ್ಟುಗಳು ಬರುತ್ತವೆ. ಎಲ್ಲಾ ಸಮಾಜ ಸುಧಾರಕರ ಕಾಲದಲ್ಲೂ ಈ ರೀತಿ ಸಾತ್ವಿಕ ಶಕ್ತಿ ದುಷ್ಟ ಶಕ್ತಿಗಳು ಎರಡು ಜೊತೆ-ಜೊತೆಯಾಗಿ ಇರುತ್ತವೆ. ಸಾತ್ವಿಕ ಸಮಾಜ ಪುರುಷರು ಸಕಾರಾತ್ಮಕ ಧೋರಣೆ ಹೊಂದಿರುತ್ತಾರೆ. ಅದಕ್ಕೆ ವ್ಯತಿರಿಕ್ತವಾಗಿ ನಕಾರಾತ್ಮಕ ಧೋರಣೆಯೂ ಇರುತ್ತದೆ.

03 8

ಏಸು ಕ್ರಿಸ್ತನನ್ನು ಶಿಲುಭೆಗೆ ಏರಿಸಿದ್ದು ಬೇರೆಯವರಲ್ಲ ಅದೇ ಧರ್ಮದವರು. ಪೈಗಂಬರ್‌ಗೆ ಟಾರ್ಚರ್ ಮಾಡಿದ್ದೂ ಅದೇ ಧರ್ಮದವರು. ಗೌತಮ ಬುದ್ಧನಿಗೆ ಹಂದಿಯ ಮಾಂಸದ ರಸ ಉಣ್ಣಿಸಿದವರೂ ಅದೇ ಧರ್ಮದವರು. ಸಾಕ್ರೆಟೀಸ್‌ನ ಜೀವನದಲ್ಲಿಯೂ ಕೂಡ ಇದೇ ಆಗಿದ್ದು. ರಾಜಸತ್ತೆ, ಪ್ರಭುಸತ್ತೆ ವಿರುದ್ಧವಾಗಿ ಅವರ ಹೋರಾಟ ಇತ್ತು. ನಮಗೆ ಸಾಕ್ರೆಟೀಸ್‌ಗೆ ಸಿಕ್ಕ ಶಿಷ್ಯ ಸಿಕ್ಕಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು. ಶಿಷ್ಯರು ಮರಣದಂಡನೆ ತಪ್ಪಿಸಲು ಎಲ್ಲಾ ಪ್ರಯತ್ನ ಮಾಡುತ್ತಾರೆ. ಆದಾಗ್ಯೂ ಸಾಕ್ರೆಟೀಸ್ ರಾಜಿಯಾಗಲಿಲ್ಲ.

ಜಗತ್ತಿನಲ್ಲಿ ಮೈಗಳ್ಳರು, ಜೀವಗಳ್ಳರು ಇದ್ದಾರೆ. ಏನಾದರೂ ವ್ಯವಸ್ಥೆ ಜೊತೆ ರಾಜಿ ಮಾಡಿಕೊಂಡರೆ ಅತ್ಯಂತ ಕಳಂಕವಾಗುತ್ತೆ ಎಂದು ಸಾಕ್ರೆಟೀಸ್ ಹೇಳಿದ್ದರು. ಈ ಜಗತ್ತಿನಲ್ಲಿ ಧರ್ಮಾಂಧರು, ಅಂದರು ಈ ರೀತಿಯ ಸನ್ನಿವೇಶ ಎದುರಿಸಿಲ್ಲ. ಯಾರು ತಾತ್ವಿಕತೆ, ಸೈದ್ಧಾಂತಿಕ ತಳಹದಿಯ ಮೇಲೆ ನಡೆಯುತ್ತಾರೆ ಅವರಿಗೆ ಹೆಜ್ಜೆ ಹೆಜ್ಜೆಗೂ ಮುಳ್ಳು ಇರುತ್ತವೆ.

ಗಾಂಧೀಜಿ, ಬಸವಣ್ಣನವರಿಗೂ ಕೂಡ ದುರಂತಗಳು ಆಗಿದೆ. ನಾವು ಕೂಡ ಹೊರತಾಗಿಲ್ಲ. ಕಿತ್ತೂರು, ಪಾಳೆಗಾರ ಸಂಸ್ಥಾನ ಹಾಳಾಗಿದ್ದು ಸ್ವಜಾತಿಯ ಜನರಿಂದಲೇ. ಇದು ಸತ್ಯಯುತವಾಗಿ ಬಂದಿರುವ ಘಟನೆಗಳು. ಮುಸ್ಲಿಂ, ಕ್ರಿಶ್ಚಿಯನ್ನರು ದಲಿತರು, ಎಲ್ಲರೂ ಸೇರಿ ನನಗೆ ಧೈರ್ಯ ತುಂಬಿದ್ದಾರೆ. ನಾವು ಹೇಳಿ ಕರೆಸಿಲ್ಲ, ಮುಂಜಾನೆಯ ಸುದ್ದಿ ನೋಡಿ ನೀವೆಲ್ಲ ಬಂದಿದ್ದೀರಿ. ಈ ಘಟನೆಯಿಂದ ನನಗಿಂತಲೂ ನಿಮಗೇ ಬಹಳಷ್ಟು ನೋವಾಗಿದೆ. ನೋವಿನಿಂದ ನೀವೆಲ್ಲಾ ಬಂದಿದ್ದೀರಿ. ನಮ್ಮ ಮೇಲಿನ ಅಭಿಮಾನ ಜಾಗೃತವಾಗುತ್ತಿದೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:ChitradurgaFIRMuruga Math AdministratorPOCSOpolicesexual harrasementstudentswomenಎಫ್‍ಐಆರ್ಚಿತ್ರದುರ್ಗಪೊಲೀಸ್ಮುರುಘಾ ಮಠವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
10 minutes ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
58 minutes ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
2 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
3 hours ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?