ಸೋನು ಮುಖ ನೋಡಿ ಪ್ರಜ್ಞೆತಪ್ಪಿ ಬಿದ್ದಿದ್ರಂತೆ ಆರ್ಯವರ್ಧನ್!

Public TV
2 Min Read
aryavrdhan sonu

ಬಿಗ್ ಬಾಸ್ ಮನೆಯಲ್ಲಿ ಸೋನು ಹಾಗೂ ಅಕ್ಷತಾ ಮಾಡಿದ ಪ್ರ್ಯಾಂಕ್ ಬಗ್ಗೆ ಸೂಪರ್ ಸಂಡೇ ವಿತ್ ಸುದೀಪ ವೇದಿಕೆಯಲ್ಲಿ ಚರ್ಚೆಯಾಗಿತ್ತು. ದೆವ್ವದಂತೆ ಮೇಕಪ್ ಮಾಡ್ಕೊಂಡು ಬಂದಿದ್ದ ಸೋನು ನೋಡಿ ಆರ್ಯವರ್ಧನ್ ಅವರು ತಲೆ ತಿರುಗಿ ಬಿದ್ದುಬಿಟ್ಟಿದ್ದರು. ಆದರೆ ಮನೆಮಂದಿಯೆಲ್ಲಾ ಅವರು ಆಕ್ಟಿಂಗ್ ಮಾಡುತ್ತಿದ್ದಾರೆ ಎಂದು ತಿಳಿದುಕೊಂಡಿದ್ದರಂತೆ. ಆದರೆ ಅಂದು ನಿಜವಾಗಲೂ ಅವರ ಜೀವಕ್ಕೆ ಅಪಾಯ ಬಂದೊದಗಿತ್ತು ಎಂಬುದು ಬಳಿಕ ಗೊತ್ತಾಗಿದೆ.

BIGGBOSS OTT 3

ಹೌದು, ಅಕ್ಷತಾ ಮತ್ತು ಸೋನು ಗುರೂಜಿಯನ್ನು ಪ್ರ‍್ಯಾಂಕ್ ಮಾಡಬೇಕು ಎಂದು ಪ್ಲ್ಯಾನ್ ಮಾಡಿದ್ದರು. ಅದರಂತೆ ಸೋನು ದೆವ್ವದಂತೆ ಮೇಕಪ್ ಕೂಡ ಮಾಡಿಕೊಂಡಳು. ಇದಕ್ಕೂ ಮುನ್ನ ರಾಕೇಶ್ ಹಾಗೂ ರೂಪೇಶ್ ಗುರೂಜಿ ಬಳಿ ಹೋಗಿ ಈ ರೀತಿ ನಿಮಗೆ ಪ್ರ್ಯಾಂಕ್ ಮಾಡುತ್ತಾರೆ, ಅವರು ಬಂದಾಕ್ಷಣ ನೀವೂ ಪ್ರಜ್ಞೆ ತಪ್ಪಿ ಬಿದ್ದು ಬಿಡಿ ಎಂದು ಆರ್ಯವರ್ಧನ್ ಅವರಿಗೆ ಹೇಳಿಕೊಟ್ಟಿದ್ದರು. ಎಲ್ಲವೂ ಹೇಳಿದಂತೆಯೇ ನಡೆಯಿತು. ಗುರೂಜಿ ಬಾತ್ ರೂಮಿನಿಂದ ಹೊರಗೆ ಬಂದಾಗ ಸೋನು ಹೆದರಿಸಿದಳು. ಗುರೂಜಿ ತಕ್ಷಣ ಬಿದ್ದು ಬಿಟ್ಟರು. ಎಷ್ಟೇ ಎಚ್ಚರ ಮಾಡಿದರೂ ಎಚ್ಚರವಾಗಲೇ ಇಲ್ಲ. ರಾಕೇಶ್ ಇದು ಸೂಪರ್ ಪರ್ಫಾಮೆನ್ಸ್ ಎಂದುಕೊಂಡರು. ಆದರೆ ರೂಪೇಶ್‌ಗೆ ಕೊಂಚ ಅನುಮಾನ ಮೂಡಿತ್ತು. ಆಮೇಲೆ ಅವರನ್ನು ಕಷ್ಟಪಟ್ಟು ಹೊರಗೆ ಎಳೆದು ತಂದರು.

ಇದೆಲ್ಲಾ ನೋಡುತ್ತಿದ್ದಂತೆ ಅಕ್ಷತಾ ಹಾಗೂ ಸೋನು ಗಾಬರಿಗೊಂಡಿದ್ದರು. ಸ್ವಲ್ಪ ಸಮಯವಾದ ಬಳಿಕ ಗುರೂಜಿಗೆ ಪ್ರಜ್ಞೆ ಬಂತು. ಆದರೆ ಜಯಶ್ರೀ ಈ ಮಧ್ಯೆ ಸೋನು ಹಾಗೂ ಅಕ್ಷತಾ ಬಳಿ ಹೋಗಿ, ಇದು ಅವರೆಲ್ಲ ಸೇರಿ ಮಾಡಿದ ಪ್ರ್ಯಾಂಕ್ ಅಂತ ಹೇಳಿದ್ದರು. ಈ ಬಗ್ಗೆ ಸೋನು ಕ್ಲಾರಿಟಿ ತೆಗೆದುಕೊಳ್ಳಲು ಹೋದಾಗ ರಾಕೇಶ್ ಹಾಗೂ ರೂಪೇಶ್ ಬುದ್ಧಿ ಹೇಳಿ ಕಳುಹಿಸಿದ್ದರು. ಇದರ ನಡುವೆ ತಾವು ಮಾಡಿದ ತಪ್ಪನ್ನು ನೆನೆದು ಅಕ್ಷತಾ ಜೋರಾಗಿ ಅತ್ತಿದ್ದು, ರಾಕೇಶ್ ಆಕೆಯನ್ನು ಸಮಾಧಾನ ಮಾಡಿದ್ದ. ಇದನ್ನೂ ಓದಿ: ಮೊದಲ ಜಗಳ, ವಾದ, ಗಾಯ ಆಗಿದ್ದೇ ಉದಯ್‍ಯಿಂದ – ಬೇರೆಯವರ ಇಮೋಷನ್ ನೋಡಿ ಉದಯ್ ಡಿಸ್ಟರ್ಬ್ ಆಗಿದ್ರಾ?

bigg boss 6

ಈ ಎಲ್ಲಾ ಡ್ರಾಮಾದ ಬಗ್ಗೆ ಸೂಪರ್ ಸಂಡೇನಲ್ಲಿ ಸುದೀಪ್ ಕೇಳಿದಾಗ ರೂಪೇಶ್ ಮತ್ತು ರಾಕೇಶ್, ನಾವೂ ಕೂಡ ಅದನ್ನು ಆಕ್ಟಿಂಗ್ ಎಂದೇ ಭಾವಿಸಿದ್ದೆವು. ಆದರೆ ಅವರು ನಿಜವಾಗಿಯೂ ಪ್ರಜ್ಞೆ ತಪ್ಪಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಸುದೀಪ್ ಗುರೂಜಿ ಅವರಿಗೆ ಧೈರ್ಯ ತುಂಬಿದ್ದಾರೆ. ಇಲ್ಲಿ ಎರಡೇ ದೆವ್ವ ಇರುವುದು. ಪಿಂಕ್ ಕಲರ್ ಹಾಕಿರುವ ದೆವ್ವ ಹಾಗೂ ಹಸಿರು ಬಣ್ಣ ತೊಟ್ಟಿರುವ ದೆವ್ವ. ನೀವು ಯಾವುದಕ್ಕೂ ಹೆದರಬೇಡಿ. ಇಲ್ಲಿ ನಮ್ಮನ್ನು ಹೊರತುಪಡಿಸಿ 300 ಜನ ನಿಮ್ಮ ಕಾವಲಿಗಿದ್ದಾರೆ ಎಂದು ಧೈರ್ಯ ತುಂಬಿದರು.

aryavardhan

ಆಗ ಗುರೂಜಿ ನನಗೆ ದೆವ್ವ ಎಂದರೆ ತುಂಬಾ ಭಯ. ಸೋನು ಬಂದಾಗ ವಿಕಾರವಾಗಿ ಕಂಡಿತು, ತಕ್ಷಣ ಬಿದ್ದು ಬಿಟ್ಟೆ. ಆಮೇಲೆ ಇವರೆಲ್ಲ ಕರೆದು ತಂದು ಮಲಗಿಸಿದ್ದರು ಎಂದರು. ಮತ್ತೆ ಸುದೀಪ್ ನಿಮಗೆ ಏನು ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಕೂಡ ಎಂದು ಸೋನು ಹಾಗೂ ಅಕ್ಷತಾಗೂ ಬುದ್ಧಿ ಹೇಳಿದ್ದಾರೆ. ಪ್ರ‍್ಯಾಂಕ್ ಮಾಡಿ ಆದರೆ ಈ ರೀತಿಯಾದ ಟಾಪಿಕ್ ಬೇಡ ಎಂದಿದ್ದಾರೆ. ಇದನ್ನೂ ಓದಿ: ಜಯಶ್ರೀ, ಚೈತ್ರಾ ಬೆಸ್ಟಿ ಅಂದ ರೂಪೇಶ್- ಸಾನ್ಯಾಗೆ ಶುರುವಾಯ್ತು ಹೊಟ್ಟೆಕಿಚ್ಚು..?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *