Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

Public TV
Last updated: August 30, 2022 7:51 pm
Public TV
Share
3 Min Read
moon ganesha
SHARE

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ.

ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.

moon ganesha 1

ಚಂದ್ರನನ್ನು ಯಾಕೆ ನೋಡಬಾರದು?:
ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬಂದನು. ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖ, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ನೆತ್ತಿಗೇರುತ್ತೆ. ಇದನ್ನೂ ಓದಿ: ಗಣೇಶ ಚತುರ್ಥಿಗೆ ಸಂಬಂಧಿಸಿದ ಸುದ್ದಿ ಓದಲು ಕ್ಲಿಕ್ ಮಾಡಿ

ಅಲ್ಲದೇ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ.. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು.. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಅಂತ ಗಣಪತಿ ಚಂದ್ರನಿಗೆ ಶಾಪ ಹಾಕುತ್ತಾನೆ.

moon ganesha 2

ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ. ಇದನ್ನೂ ಓದಿ: ಗಣೇಶ ಮೋದಕ ಪ್ರಿಯ ಯಾಕೆ?

ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದ್ರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.

ganesha 1 1 large

ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮ‌ಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:bengalurucurseganesh chaturthimoonPublic TVಗಣೇಶಗಣೇಶ ಚತುರ್ಥಿಗಣೇಶ ಹಬ್ಬಚಂದ್ರಪಬ್ಲಿಕ್ ಟಿವಿಬೆಂಗಳೂರುಶಾಪ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

big bulletin 24 July 2025 part 1
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-1

Public TV
By Public TV
4 hours ago
big bulletin 24 July 2025 part 2
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-2

Public TV
By Public TV
4 hours ago
Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
4 hours ago
big bulletin 24 July 2025 part 3
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-3

Public TV
By Public TV
4 hours ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
4 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?