Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ?: ಕಾಂಗ್ರೆಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ?: ಕಾಂಗ್ರೆಸ್

Bengaluru City

ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ?: ಕಾಂಗ್ರೆಸ್

Public TV
Last updated: September 3, 2022 5:11 pm
Public TV
Share
2 Min Read
Aravind Limbavali
SHARE

ಬೆಂಗಳೂರು: ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದೆ.

Arvind Limbavali

ಟ್ವೀಟ್‍ನಲ್ಲಿ ಏನಿದೆ?
ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ? ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ? ನಳಿನ್ ಕುಮಾರ್ ಕಟೀಲ್ ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ?. ಇದನ್ನೂ ಓದಿ: ಕೇಳುವಷ್ಟು ಶಾಂತಿ, ಸಹನೆ ಇಲ್ಲವೆಂದ್ರೆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ: ಡಿಕೆಶಿ

Arvind Limbavali 2

ಮಹಿಳೆಗೆ ನಿಂದಿಸಿದ್ದರು ಮಾಧುಸ್ವಾಮಿ. ಮಹಿಳೆಗೆ ಹಲ್ಲೆ ಮಾಡಿದ್ದರು ಸಿದ್ದು ಸವದಿ. ಉದ್ಯೋಗ ಕೇಳಿದಾಕೆಯನ್ನು ಮಂಚ ಹತ್ತಿಸಿದ್ದರು ರಮೇಶ್ ಜಾರಕಿಹೊಳಿ. ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದಿದ್ದರು ಆರಗ ಜ್ಞಾನೇಂದ್ರ. ಮಹಿಳೆಯ ಮೇಲೆ ದರ್ಪ ಮೆರೆದರು ಅರವಿಂದ್ ಲಿಂಬಾವಳಿ. ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ? ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ. ಇದನ್ನೂ ಓದಿ: ಕ್ಷಮೆ ಕೇಳೋಕೆ ಸಿದ್ಧ, ಒತ್ತುವರಿ ತೆರವು ಮಾಡಿಸಿ- ಕಾಂಗ್ರೆಸ್‍ಗೆ ಲಿಂಬಾವಳಿ ಟಾಂಗ್

Aravind Limbavali 1

ಬೊಮ್ಮಾಯಿ ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ? ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ “ನಾನೇನು ರೇಪ್ ಮಾಡಿದ್ನಾ” ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ

ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ. ಬಿಜೆಪಿ ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ. ಗುಜರಾತ್‍ನಲ್ಲಿ ರೇಪಿಸ್ಟನನ್ನು ಸನ್ಮಾನಿಸಿದೆ. ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ. ಇಂತಹ ಮಹಿಳಾವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ. ‘ಬೇಟಿ ಬಚಾವ್’ ಆಗಬೇಕಿರುವುದು ಬಿಜೆಪಿಯ ಗೂಂಡಾಗಳಿಂದ! ಮನುಶಾಸ್ತ್ರವನ್ನು ನಂಬುವ ಬಿಜೆಪಿಗೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದು ಪರಂಪರೆಯಿಂದ ಬಂದ ಗುಣ. ಮಹಿಳೆಯನ್ನು ನಿಂದಿಸಿ, ದೌರ್ಜನ್ಯವೆಸಗಿದ ಅರವಿಂದ್ ಲಿಂಬಾವಳಿ ವಿರುದ್ಧ ಯಾವ ಕ್ರಮ ಕೈಗೊಳ್ಳುವಿರಿ ಬೊಮ್ಮಾಯಿ ಅವರೇ? ಅಥವಾ ಈ ದೌರ್ಜನ್ಯಕ್ಕೆ ನಿಮ್ಮ ಬೆಂಬಲವೂ ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:Arvind limbavalibjpcongressWoman Activistಅರವಿಂದ್ ಲಿಂಬಾವಳಿಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Vande Mataram
Latest

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

Public TV
By Public TV
15 minutes ago
Abhishek Sharma
Cricket

ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Public TV
By Public TV
19 minutes ago
OM BIRLA RAHUL GANDHI
Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
By Public TV
1 hour ago
Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
2 hours ago
Bengaluru Basavanagudi Theft Arrest
Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?