Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಖ್ಯಾತ ವೈದ್ಯ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ

Public TV
Last updated: September 3, 2022 7:12 pm
Public TV
Share
3 Min Read
Dr GURURAJ
SHARE

ಹಾಸನ: ಖ್ಯಾತ ಹಾಗೂ ಅಪರೂಪದ ವೈದ್ಯರು, ಸಮಾಜ ಸೇವಕರೂ ಆಗಿದ್ದ ಹಿರಿಯ ವೈದ್ಯ ಡಾ. ಗುರುರಾಜ ಹೆಬ್ಬಾರ್ (72) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಅಭಿಮಾನಿ ಬಳಗ ಕಳೆದ ಆ.19 ರಂದು ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಹೆಬ್ಬಾರರು ಎಲ್ಲರನ್ನೂ ಅಗಲಿದ್ದಾರೆ.

DOCTOR 3

ಮೃತರ ನಿಧನಕ್ಕೆ ವೈದ್ಯರ ಸಂಘ ಸೇರಿ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. 1959 ರ ಜ.1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲೂಕಿನ ಸೋಮೇಶ್ವರದಲ್ಲಿ ಜನಿಸಿದ ಇವರು, ನಂತರ ಹಾಸನಕ್ಕೆ ಬಂದು ಕಟ್ಟಾಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮುಗಿಸಿದ್ದರು. ಹಾಸನದ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ, ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿ, ಆಲೂರು ತಾಲೂಕು ಪಾಳ್ಯದಲ್ಲಿ ಖಾಸಗಿ ಕ್ಲಿನಿಕ್ ತೆರೆದರು. ಬಳಿಕ ಬೈಚನಹಳ್ಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸಲ್ಲಿಸಿದ ಶ್ರೀಯುತರು, ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ, ಹಾಸನದಲ್ಲಿ ಖಾಸಗಿ ಕ್ಲಿನಿಕ್ ತೆರೆದು, ತರುವಾಯ ಎಂ.ಜಿ.ರಸ್ತೆಯಲ್ಲಿ ಶ್ರೀ ರಾಮಕೃಷ್ಣ ನರ್ಸಿಂಗ್ ಹೋಂ ಸ್ಥಾಪಿಸಿದರು. ಇದನ್ನೂ ಓದಿ: ಬ್ರಹ್ಮಪುತ್ರ ನದಿ ದಂಡೆ ಬಳಿಯ 330 ಎಕರೆಯಲ್ಲಿರುವ ಅಕ್ರಮ ಮನೆ ತೆರವು!

DR GURURAJ 1

ಹೆಬ್ಬಾರ್ ಅವರು ಕೇವಲ ವೈದ್ಯರಷ್ಟೇ ಅಲ್ಲ, ಸಮಾಜ ಸೇವಕರಾಗಿ ತಮ್ಮ ತನು, ಮನ, ಧನ ವ್ಯಯಿಸಿದರು. ಬಡವರ ಬಂಧುವಾಗಿ, ಬಡವರಿಗಾಗಿಯೇ ಹಾಸನದಲ್ಲಿ ಮೊದಲಿಗೆ ಸಹಕಾರಿ ತತ್ವದಡಿ ಜನಕಲ್ಯಾಣ ರೀಸರ್ಚ್ ಅಂಡ್ ಚಾರಿಟಬಲ್ ಟ್ರಸ್ಟ್ ನಿಂದ ಸಿ.ಟಿ. ಸ್ಕ್ಯಾನಿಂಗ್ ಸೆಂಟರ್ ತೆರೆದರು. ಸಂಜೀವಿನಿ ಸಹಕಾರಿ ಆಸ್ಪತ್ರೆ, ಕಾಮಧೇನು ಸಹಕಾರಿ ವಿದ್ಯಾಶ್ರಮ (ವೃದ್ಧಾಶ್ರಮ), ರೈತ ಬಂಧು ಸಹಕಾರಿ ಸಂಸ್ಥೆ, ಪರಿಪೂರ್ಣ ಚಾರಿಟಬಲ್ ಟ್ರಸ್ಟ್‍ನಿಂದ ಪತ್ರಿಕೋದ್ಯಮ ಕ್ಷೇತ್ರಕ್ಕೂ ಪದಾರ್ಪಣೆ ಮಾಡಿದ್ದರು.

doctors large

ಅಷ್ಟೇ ಅಲ್ಲದೆ ನಂದಗೋಕುಲ ಶಿಶುಕೇಂದ್ರ, ಗೋ ಸಂರಕ್ಷಣೆ, ಪ್ರಾಣಿಹಿಂಸಾ ನಿವಾರಣಾ ಸಂಘ, ಹಾಸನಾಂಬ ಧರ್ಮಛತ್ರ ಹೀಗೆ ನಾನಾ ಸಂಸ್ಥೆಗಳ ಹುಟ್ಟಿಗೆ ಕಾರಣರಾದರು.ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆಗಿರುವ ಶ್ರೀಯುತರು, ಬಡವರು, ದೀನ ದಲಿತರು, ಅಸಹಾಯಕರನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ಬಡವರಿಗೆ ಉಚಿತವಾಗಿ ವೈದ್ಯಕೀಯ ಸೇವೆ ನೀಡಿದ್ದರು.

2000

ಅಸಹಾಯಕರಿಗೆ ಆರ್ಥಿಕ ನೆರವನ್ನೂ ಒದಗಿಸಿದ್ದರು. ಕೊಡುಗೈ ದಾನಿಯಾಗಿ ಕೈ ನೀಡಿ ನೀಡಿದರೇ ಹೊರತು, ಎಂದಿಗೂ ಯಾರ ಮುಂದೆಯು ಕೈ ಚಾಚಿದವರಲ್ಲ. ಸದಾ ಹಸನ್ಮುಖಿಯಾಗಿ ಎಲ್ಲರನ್ನೂ ಪ್ರೀತಿಸುವ, ಎಲ್ಲರನ್ನೂ ಸಮಾನವಾಗಿ ಕಾಣುವ ಜಾತ್ಯಾತೀತ ವ್ಯಕ್ತಿತ್ವ ಇವರದಾಗಿತ್ತು. ಅಜಾತ ಶತ್ರು ಎಂದೇ ಖ್ಯಾತನಾಮರಾಗಿದ್ದ ಡಾ.ಗುರುರಾಜ್ ಹೆಬ್ಬಾರರು, ಶಿಸ್ತುಬದ್ಧ ಜೀವನ, ಭ್ರಷ್ಟಾಚಾರದ ಕಡುವೈರಿಯಾಗಿದ್ದರು. ಇಂಥ ಅಪರೂಪದ ವ್ಯಕ್ತಿತ್ವದ ವೈದ್ಯರು ಇನ್ನಿಲ್ಲವಾಗಿರುವುದು ಅಪಾರ ಮಂದಿಗೆ ಅತೀವ ನೋವು ತರಿಸಿದೆ.

HDD

ಜಿಲ್ಲೆಯ ಹಿರಿಯ ವೈದ್ಯರು, ಸಮಾಜ ಸೇವಕರಾದ ಡಾ. ಗುರುರಾಜ್ ಹೆಬ್ಬಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ನನ್ನ ಆತ್ಮೀಯ ಒಡನಾಡಿಯೂ ಆಗಿದ್ದ ಹೆಬ್ಬಾರರ ನಿಧನ ನನಗೆ ವೈಯಕ್ತಿಕವಾಗಿ ಅತೀವ ನೋವು ತಂದಿದೆ. ಶ್ರೀಯುತರು ವೈದ್ಯರಾಗಿ ಅಲ್ಲದೆ, ಸಮಾಜ ಸೇವಕರಾಗಿಯೂ ಅಪಾರ ಜನ ಮನ್ನಣೆ ಗಳಿಸಿದ್ದರು ಎಂದು ಸ್ಮರಿಸಿದ್ದಾರೆ. ಡಾ.ಮುನಿವೆಂಕಟೇಗೌಡರು, ಡಾ. ಗುರುರಾಜ್ ಹೆಬ್ಬಾರ್ ಅವರು ನನ್ನ ತವರು ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಬಡವರಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ಒದಗಿಸಲು ಸಂಜೀವಿನಿ ಆಸ್ಪತ್ರೆ ಸ್ಥಾಪಿಸಿ ಸಾಕಷ್ಟು ಶ್ರಮಿಸಿದ್ದರು. ಅವರ ಸೇವೆ ಸದಾ ಸ್ಮರಣೀಯ ಎಂದು ಗುಣಗಾನ ಮಾಡಿದ್ದಾರೆ.

HDD 3

ಬೇರೆ ಜಿಲ್ಲೆಯಲ್ಲಿ ಹುಟ್ಟಿ ನಮ್ಮೂರಿಗೆ ಬಂದು ಬಡವರಿಗೆ ಶ್ರೀಯುತರು ಸ್ಪಂದಿಸಿದ ರೀತಿಯನ್ನು ಎಂದೂ ಮರೆಯಲಾಗದು. ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿ, ಖಾಸಗಿಯಾಗಿಯೂ ಜನಸೇವೆ ಮಾಡಬಹುದು ಎಂಬುದನ್ನು ಹೆಬ್ಬಾರರು ತೋರಿಸಿಕೊಟ್ಟಿದ್ದರು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:dr. gururaj hebbarhassanno moreಡಾ. ಗುರುರಾಜ್ ಹೆಬ್ಬಾರ್ನಿಧನಹಾಸನ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ – 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
6 minutes ago
Siddaramaiah Modi
Bengaluru City

ನಮ್ಮ ಮೆಟ್ರೋಗೆ ರಾಜ್ಯದ ಪಾಲೇ ಹೆಚ್ಚು – ಮೋದಿ ಎದುರೇ ಸಿದ್ದರಾಮಯ್ಯ ‘ಕ್ರೆಡಿಟ್‌’ ಕ್ಲೈಮ್

Public TV
By Public TV
6 minutes ago
PM Modi In Bengaluru
Bengaluru City

ಆಪರೇಷನ್ ಸಿಂಧೂರ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ: ಮೋದಿ

Public TV
By Public TV
24 minutes ago
Narendra Modi
Bengaluru City

ಆಪರೇಷನ್‌ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಮೋದಿ ಅಭಿನಂದನೆ

Public TV
By Public TV
26 minutes ago
M Lakshman
Districts

ಪ್ರತಾಪ್‌ ಸಿಂಹ ಮೊಬೈಲ್‌ SITಗೆ ಕೊಟ್ರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಆಗುತ್ತೆ – ಎಂ.ಲಕ್ಷ್ಮಣ್ ಬಾಂಬ್‌

Public TV
By Public TV
39 minutes ago
Mantralaya Aradhana Mahotsava 3
Districts

ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ – ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?