Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

PSI ಅಕ್ರಮದಲ್ಲಿ ಸಚಿವರು, ಶಾಸಕರ ಕೈವಾಡ ಬಯಲಾಗಿರುವುದನ್ನು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ: ಕಾಂಗ್ರೆಸ್ ಪ್ರಶ್ನೆ

Public TV
Last updated: September 9, 2022 9:00 pm
Public TV
Share
3 Min Read
BASAVARJ BOMMAI CONGRESS TWEET
SHARE

ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಿ ಹೊರಬಂದ ಪಿಎಸ್‍ಐ (PSI) ಹಗರಣವೇ ನಿಮ್ಮ ಸಾಧನೆಯೇ ಬಿಜೆಪಿ? ಸಿಎಂ ಬೊಮ್ಮಾಯಿ (Basavarj Bommai) ಅವರೇ, ಪಿಎಸ್‍ಐ ಅಕ್ರಮದಲ್ಲಿ ನಿಮ್ಮ ಸಂಪುಟ ಸಚಿವರು, ಶಾಸಕರ ಕೈವಾಡ ಬಯಲಾದರೂ ಕಣ್ಮುಚ್ಚಿ ಕುಳಿತಿರುವುದನ್ನು, 54,000 ಯುವಕರಿಗೆ ಮೋಸ ಮಾಡಿದ್ದನ್ನು ಸಾಧನೆ ಎಂದು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಚಾಟಿ ಬೀಸಿದೆ.

Congress BJP

ಟ್ವೀಟ್‍ನಲ್ಲಿ ಏನಿದೆ?:
ಬಿಜೆಪಿ ಆಡಳಿತದಲ್ಲಿ ಹೊರಬಂದ ಪಿಎಸ್‍ಐ ಹಗರಣವೇ ನಿಮ್ಮ ಸಾಧನೆಯೇ ಬಿಜೆಪಿ? ಸಿಎಂ ಬೊಮ್ಮಾಯಿ ಅವರೇ, ಪಿಎಸ್‍ಐ ಅಕ್ರಮದಲ್ಲಿ ನಿಮ್ಮ ಸಂಪುಟ ಸಚಿವರು, ಶಾಸಕರ ಕೈವಾಡ ಬಯಲಾದರೂ ಕಣ್ಮುಚ್ಚಿ ಕುಳಿತಿರುವುದನ್ನು, 54,000 ಯುವಕರಿಗೆ ಮೋಸ ಮಾಡಿದ್ದನ್ನು ಸಾಧನೆ ಎಂದು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ? ಬಿಜೆಪಿ ಭ್ರಷ್ಟೋತ್ಸವ. ರಾಜ್ಯದ 54 ಸಾವಿರ ಪಿಎಸ್‍ಐ ಅಭ್ಯರ್ಥಿಗಳಿಗೆ ವಂಚಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರದ್ದು ಯಾವ ಸಾಧನೆ? ತಮ್ಮ ಕಛೇರಿಯೇ ಅಕ್ರಮದ ಅಡ್ಡೆಯಾಗಿದ್ದರೂ ಸದನದಲ್ಲಿ ಸುಳ್ಳು ಹೇಳಿ ನಾಡಿನ ದಿಕ್ಕು ತಪ್ಪಿಸಲು ಯತ್ನಿಸಿದ ಗೃಹಸಚಿವರದ್ದು ‘ಜನಸ್ಪಂದನೆ’ಯ ಸಾಧನೆಯೇ? ಈ ವಂಚನೆಯನ್ನು ಸಮಾವೇಶದಲ್ಲಿ ಹೇಳುವಿರಾ? ಇದನ್ನೂ ಓದಿ: ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

basavaraj bommai 2

ಒಂದೆಡೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದು ಪಾರದರ್ಶಕ ತನಿಖೆ ಎನ್ನುತ್ತಾರೆ ಸಿಎಂ. ಇನ್ನೊಂದೆಡೆ ಪಿಎಸ್‍ಐ ಅಕ್ರಮದಲ್ಲಿ ಸಚಿವ ಅಶ್ವಥ್‍ನಾರಾಯಣ ತಮ್ಮ ಸಹೋದರರೊಂದಿಗೆ ಸೇರಿ ಅಕ್ರಮ ನಡೆಸಿದ ಸಂಗತಿ ಬೆಳಕಿಗೆ ಬಂದರೂ ಸಚಿವರ ತನಿಖೆ ಇಲ್ಲ. ಪ್ರಕರಣ ಮುಚ್ಚಿಹಾಕಲು ಯತ್ನಿಸುವುದೇ ನಿಮ್ಮ ಸಾಧನೆಯೇ? ರಾಜ್ಯದ ಇತಿಹಾಸದಲ್ಲೇ ಎಡಿಜಿಪಿಯೊಬ್ಬರು ಅಕ್ರಮದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದು ಇದೇ ಮೊದಲು. ಉನ್ನತ ಮಟ್ಟದ ಅಧಿಕಾರಿಗಳು ಸರ್ಕಾರ ಹಾಗೂ ಮಂತ್ರಿಗಳು ಸಹಕಾರವಿಲ್ಲದೆ ಅಕ್ರಮವನ್ನು ನಡೆಸಲು ಸಾಧ್ಯವೇ ಇಲ್ಲ.

ಒಂದೆಡೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದು ಪಾರದರ್ಶಕ ತನಿಖೆ ಎನ್ನುತ್ತಾರೆ ಸಿಎಂ.

ಇನ್ನೊಂದೆಡೆ PSI ಅಕ್ರಮದಲ್ಲಿ ಸಚಿವ @drashwathcn ತಮ್ಮ ಸಹೋದರರೊಂದಿಗೆ ಸೇರಿ ಅಕ್ರಮ ನಡೆಸಿದ ಸಂಗತಿ ಬೆಳಕಿಗೆ ಬಂದರೂ ಸಚಿವರ ತನಿಖೆ ಇಲ್ಲ.

ಪ್ರಕರಣ ಮುಚ್ಚಿಹಾಕಲು ಯತ್ನಿಸುವುದೇ ನಿಮ್ಮ ಸಾಧನೆಯೇ @BJP4Karnataka?#BJPBrashtotsava pic.twitter.com/3P7i8oykt4

— Karnataka Congress (@INCKarnataka) September 9, 2022

ಮಂತ್ರಿಗಳ ವಿಚಾರಣೆ ನಡೆಸದೆ ಭ್ರಷ್ಟರನ್ನು ರಕ್ಷಿಸಿರುವುದೇ ಬಿಜೆಪಿ ಸರ್ಕಾರದ ಸಾಧನೆ. ಪಿಎಸ್‍ಐ ಹಗರಣದಲ್ಲೂ ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ ಮುಂದುವರಿದಿದೆ. ಸ್ವತಃ ಬಿಜೆಪಿ ಶಾಸಕ ಯತ್ನಾಳ್ ಪರೋಕ್ಷವಾಗಿ ಈ ಸಂಗತಿಯನ್ನು ಬಹಿರಂಗಪಡಿಸಿದರೂ ತನಿಖೆಯಾಗುವುದಿಲ್ಲ. ಅವರಿಗೆ ತಮ್ಮ ತಂದೆಯ ಆಡಳಿತದಲ್ಲಿ ಸಿಕ್ಕ “ಸೂಪರ್ ಸಿಎಂ” ಹುದ್ದೆ ನಿಮ್ಮ ಅವಧಿಯಲ್ಲೂ ಮುಂದುವರಿದಿದೆಯೇ ಬೊಮ್ಮಾಯಿ ಅವರೇ? ರಾಜ್ಯದ ಜನತೆಗೆ ಯಾವ ಸಾಧನೆ, ಯೋಜನೆ, ಸ್ಪಂದನೆ ಮಾದಿದ್ದರೆಂದು ಸರ್ಕಾರ ಸಮಾವೇಶ ಮಾಡುತ್ತಿದೆ? ಸರ್ಕಾರ ಕರ್ನಾಟಕದ ಜನತೆಗೆ, ಕನ್ನಡ ನಾಡುನುಡಿಗೆ ಮಾಡಿದ್ದು ಬಿಟ್ಟರೆ ಬೇರೇನು ಮಾಡಿದೆ? ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ನಾಡಿನ ಸಾಹಿತಿಗಳಿಗೆ ಅವಮಾನಿಸಿದ್ದೇ ನಿಮ್ಮ ಸಾಧನೆಯೇ ಬೊಮ್ಮಾಯಿ ಅವರೇ? ಬಿಜೆಪಿ ಅವರ ಒಂದು ವರ್ಷದ ವಾರ್ಷಿಕೋತ್ಸವಕ್ಕೆ ಸಜ್ಜಾಗಿರುವ ಸರ್ಕಾರ ತಮ್ಮ ಸಾಧನೆ ಏನು ಎಂದು ನಾಡಿನ ಜನತೆಗೆ ಉತ್ತರಿಸಬೇಕು. ಇದನ್ನೂ ಓದಿ: ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ

ರಾಜ್ಯದ 54 ಸಾವಿರ PSI ಅಭ್ಯರ್ಥಿಗಳಿಗೆ ವಂಚಿಸಿದ ಗೃಹ ಸಚಿವ @JnanendraAraga ಅವರದ್ದು ಯಾವ ಸಾಧನೆ?

ತಮ್ಮ ಕಛೇರಿಯೇ ಅಕ್ರಮದ ಅಡ್ಡೆಯಾಗಿದ್ದರೂ ಸದನದಲ್ಲಿ ಸುಳ್ಳು ಹೇಳಿ ನಾಡಿನ ದಿಕ್ಕು ತಪ್ಪಿಸಲು ಯತ್ನಿಸಿದ ಗೃಹಸಚಿವರದ್ದು 'ಜನಸ್ಪಂದನೆ'ಯ ಸಾಧನೆಯೇ @BJP4Karnataka?

ಈ ವಂಚನೆಯನ್ನು ಸಮಾವೇಶದಲ್ಲಿ ಹೇಳುವಿರಾ?#BJPBrashtotsava pic.twitter.com/L4FzWrjktW

— Karnataka Congress (@INCKarnataka) September 9, 2022

ಪಠ್ಯಪುಸ್ತಕಗಳಲ್ಲಿ ಅವಾಂತರ ಸೃಷ್ಟಿಸಿದ ಸರ್ಕಾರ ಇನ್ನೂ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗಲಿಲ್ಲ. ದೇಶದ್ರೋಹಿಗಳನ್ನು ದೇಶಭಕ್ತರನ್ನಾಗಿ ಬಿಂಬಿಸಿದ್ದೇ ಸಾಧನೆಯೇ? ಸಾಹಿತ್ಯವನ್ನೇ ಅರಿಯದ, ಸುಳ್ಳು ಹೇಳುವುದನ್ನು, ಇತಿಹಾಸ ತಿರುಚುವುದನ್ನು ಕಾಯಕ ಮಾಡಿಕೊಂಡಿರುವ ಬಿಜೆಪಿಯ ಬಾಡಿಗೆ ಭಾಷಣಕಾರನೂ ಮಕ್ಕಳ ಭವಿಷ್ಯ ರೂಪಿಸುವ ಪಠ್ಯದಲ್ಲಿ ಜಾಗ ಪಡೆದದ್ದಕ್ಕಿಂತ ದುರಂತ ಬೇರೊಂದಿಲ್ಲ. ಪಠ್ಯ ಪುಸ್ತಕ ರಚನೆಗೆ ಅಪ್ರಬುದ್ಧರನ್ನು ಕೂರಿಸಿ ಅವಾಂತರ ಎಬ್ಬಿಸಿದ್ದು ಸರ್ಕಾರದ ಮಹಾ ಸಾಧನೆಗಳಲ್ಲೊಂದು! ಮಹಿಳೆಯರಿಗೆ, ಶೋಷಿತರಿಗೆ ಅಕ್ಷರದ ದಾಸೋಹ ನಡೆಸಿದ, “ಅಕ್ಷರದವ್ವ” ಎಂದೇ ಖ್ಯಾತರಾದ ಸಾವಿತ್ರಿ ಬಾ ಪುಲೆ ಅವರ ಪಠ್ಯವನ್ನು ಕೈಬಿಟ್ಟ ಸರ್ಕಾರ ಪಠ್ಯಪುಸ್ತಕಗಳಲ್ಲಿ ಬುಲ್ ಬುಲ್ ಹಕ್ಕಿ ಹಾರಿಸುತ್ತಿದೆ! ಶಿಕ್ಷಣ ವಿರೋಧಿಯಾಗಿ ವರ್ತಿಸಿದ್ದು, ಮಹನೀಯರಿಗೆ ಅವಮಾನಿಸಿದ್ದು ನಿಮ್ಮ ಒಂದು ವರ್ಷದ ಸಾಧನೆಯೇ ಬೊಮ್ಮಾಯಿ ಅವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:basavarj bommaibjpcongressJanaspandanaPSIಅಶ್ವಥ್‍ನಾರಾಯಣಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

You Might Also Like

Jayanagar Gold Theft Arrest
Bengaluru City

ಒಡವೆ ಮಾಡಿಕೊಡೋದಾಗಿ ಹೇಳಿ 8 ಕೆಜಿ ಗಟ್ಟಿ ಚಿನ್ನ ಕದ್ದ ಅಕ್ಕಸಾಲಿಗ ಅರೆಸ್ಟ್

Public TV
By Public TV
2 minutes ago
Darshan Devil Cinema
Bengaluru City

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಥೈಲ್ಯಾಂಡ್‌ಗೆ ತೆರಳಲು ದರ್ಶನ್‌ಗೆ ಕೋರ್ಟ್‌ ಅವಕಾಶ

Public TV
By Public TV
25 minutes ago
D K Suresh
Bengaluru City

ಇಡಿಯಿಂದ ಎರಡನೇ ಬಾರಿ ವಿಚಾರಣೆ – ಆಸ್ತಿಯ ಲೆಕ್ಕ ಕೊಟ್ಟ ಡಿ.ಕೆ ಸುರೇಶ್

Public TV
By Public TV
28 minutes ago
Congress Leader Krishna Reddy Demolishes State Highway Divider For His Shop In Mudhol 1
Bagalkot

ತಿಮ್ಮಾಪುರ ಬೆಂಬಲಿಗನಿಂದ ಗೊಬ್ಬರದ ಅಂಗಡಿಗಾಗಿ ಹೈವೇ ಡಿವೈಡರ್‌ ತೆರವು – ಗ್ರಾಮಸ್ಥರಿಂದ ಪ್ರತಿಭಟನೆ

Public TV
By Public TV
40 minutes ago
Hebbagodi Theft Arrest
Bengaluru City

ಶೂ ಒಳಗೆ, ಮನೆ ಎದುರು ಕೀ ಮುಚ್ಚಿಡುವವರೇ ಹುಷಾರ್ – 65 ಲಕ್ಷ ರೂ. ಕನ್ನ ಹಾಕಿದ್ದವ ಅರೆಸ್ಟ್

Public TV
By Public TV
46 minutes ago
rishab shetty friends
Cinema

ಕಾಂತಾರ ಪ್ರೀಕ್ವೆಲ್ ಯಶಸ್ಸಿಗಾಗಿ ರಿಷಬ್ ಶೆಟ್ಟಿ ಸ್ನೇಹಿತರಿಂದ ವಿಶೇಷ ಪೂಜೆ

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?