ವಿದ್ಯುತ್ ತಂತಿ ಸರಿಪಡಿಸಲು ಹೋಗಿ ಲೈನ್‍ಮ್ಯಾನ್ ಸಾವು

Public TV
1 Min Read
TUMALURU DEATH

ತುಮಕೂರು: ವಿದ್ಯುತ್ ತಂತಿ ಸರಿಪಡಿಸಲು ಹೋಗಿ ಲೈನ್ ಮ್ಯಾನ್ (LineMan) ಒಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಮಹೇಶ್ ಗೌಡ (40) ಎಂದು ಗುರುತಿಸಲಾಗಿದೆ. ಗುಬ್ಬಿ ತಾಲೂಕಿನ ತಿಪಟೂರಿನಲ್ಲಿ ಅವಘಡ ಸಂಭವಿಸಿದೆ. ಮಹೇಶ್ ಅವರು ಕೆರೆ ಮಧ್ಯೆ ನೀರಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ (Power) ತಂತಿ ಸರಿಪಡಿಸಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Police Jeep 1 1 large

ನೀರಿನಲ್ಲಿ ಈಜುತ್ತಾ ಸುಸ್ತಾಗಿ ಮುಳುಗಿ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳ (Fire Fighter) ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಂಣೆಯ ಬಳಿಕ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಮಹಿಳೆ ನೇಣಿಗೆ ಶರಣು

ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *