Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡವರ ಶಸ್ತ್ರಾಸ್ತ್ರ ಹಕ್ಕು ಉಲ್ಲೇಖ, ವಿಶ್ವಾದ್ಯಂತ ಮಾನ್ಯತೆ ಇರೋ ಹಿಜಬ್‌ಗೆ ಕರ್ನಾಟಕದಲ್ಲಿ ಅನುಮತಿ ಯಾಕಿಲ್ಲ: ಸುಪ್ರೀಂನಲ್ಲಿ ವಕೀಲರ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊಡವರ ಶಸ್ತ್ರಾಸ್ತ್ರ ಹಕ್ಕು ಉಲ್ಲೇಖ, ವಿಶ್ವಾದ್ಯಂತ ಮಾನ್ಯತೆ ಇರೋ ಹಿಜಬ್‌ಗೆ ಕರ್ನಾಟಕದಲ್ಲಿ ಅನುಮತಿ ಯಾಕಿಲ್ಲ: ಸುಪ್ರೀಂನಲ್ಲಿ ವಕೀಲರ ಪ್ರಶ್ನೆ

Latest

ಕೊಡವರ ಶಸ್ತ್ರಾಸ್ತ್ರ ಹಕ್ಕು ಉಲ್ಲೇಖ, ವಿಶ್ವಾದ್ಯಂತ ಮಾನ್ಯತೆ ಇರೋ ಹಿಜಬ್‌ಗೆ ಕರ್ನಾಟಕದಲ್ಲಿ ಅನುಮತಿ ಯಾಕಿಲ್ಲ: ಸುಪ್ರೀಂನಲ್ಲಿ ವಕೀಲರ ಪ್ರಶ್ನೆ

Public TV
Last updated: September 14, 2022 2:50 pm
Public TV
Share
3 Min Read
HIJAB SUPREME COURT
SHARE

ನವದೆಹಲಿ:ವಿಶ್ವಾದ್ಯಂತ ಹಿಜಬ್‌ಗೆ(Hijab) ಮಾನ್ಯತೆ ಇದೆ, ಕರ್ನಾಟಕದಲ್ಲಿ(Karnataka) ಯಾಕಿಲ್ಲ? ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ ಎಂದು ಹಿಜಬ್‌ ಪರ ವಕೀಲರು ಪ್ರಶ್ನಿಸಿದ್ದಾರೆ.

ಶಾಲೆ ಮತ್ತು ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್(Supreme Court) ವಿಚಾರಣೆಗೆ ನಡೆಸುತ್ತಿದೆ. ಕಳೆದ ಐದು ದಿನಗಳಿಂದ ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.

ಇಂದು ಮೂವರು ವಕೀಲರು ಹಿಜಬ್ ಪರವಾಗಿ ವಾದ ಮಂಡಿಸಿದ್ದಾರೆ. ಮೊದಲು ವಾದ ಆರಂಭಿಸಿದ ಹಿರಿಯ ವಕೀಲ ಆದಿತ್ಯ ಸೋಂಧಿ, ಪ್ರಕರಣ ಬಹಳ ಗಂಭೀರವಾಗಿದೆ. ಸಾಮಾಜಿಕ – ಆರ್ಥಿಕ ಮಾನದಂಡಗಳು ಮತ್ತು ವಿದ್ಯಾರ್ಥಿಗಳು ಹಿನ್ನೆಲೆಯನ್ನು ಇಲ್ಲಿ ಪರಿಗಣಿಸಬೇಕಾಗಿದೆ. ನಾನು ಓದುತ್ತಿದ್ದ ಕಾಲೇಜಿನಲ್ಲಿ ಹಿಜಬ್ ಧರಿಸದ ಮುಸ್ಲಿಂ ಸಹಪಾಠಿಗಳು ಇದ್ದರು. ಹಿಜಬ್ ಎನ್ನುವುದು ಒಂದು ಆಯ್ಕೆಯಾಗಿದ್ದು ಅದಕ್ಕೆ ಅನುಮತಿ ನೀಡಬೇಕಿದೆ.‌ ‌ಕೊಡವರಿಗೆ(Kodava) ಶಸ್ತ್ರಾಸ್ತ್ರಗಳನ್ನು(Arms) ಹೊಂದುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಈ ತೀರ್ಪು ನೀಡಿದೆ. ಧಾರ್ಮಿಕ ಹೋರಾಟ ಅಥವಾ ಸಾಂಸ್ಕೃತಿಕ ಹಕ್ಕಿನ ನಡುವಿನ ಇರುವುದು ತೆಳುವಾದ ಗೆರೆ ಮಾತ್ರ. ಇವುಗಳನ್ನು ಪ್ರತ್ಯೇಕಿಸುವುದು ಕಷ್ಟ. ಸಾರ್ವಜನಿಕ ಸುವ್ಯವಸ್ಥೆಗಾಗಿ ಹಿಜಬ್ ನಿಷೇಧಿಸಿ ಸರ್ಕಾರ ಆದೇಶ ಮಾಡಿದೆ. ಶಾಲೆಗಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದೆ. ಹಿಜಬ್ ನಿಂದ ಯಾವ ಸುವ್ಯವಸ್ಥೆ ಹಾಳಾಗುತ್ತದೆ? ಹುಡುಗಿಯರು ಹಿಜಬ್ ಧರಿಸುವುದು ಸಾಮಾನ್ಯ ಎಂದರು. ಇದನ್ನೂ ಓದಿ: 200 ಕೋಟಿ ಮೌಲ್ಯದ ಡ್ರಗ್ಸ್‌ ಸಾಗಿಸುತ್ತಿದ್ದ ಪಾಕಿಸ್ತಾನಿ ಹಡಗು ಗುಜರಾತ್‌ನಲ್ಲಿ ವಶ

SUPREME COURT 1

ಬಳಿಕ ವಾದ‌ ಮಂಡಿಸಿದ ಹಿರಿಯ ವಕೀಲ ರಾಜೀವ್ ಧವನ್(Rajeev Dhavan), ಉಡುಗೆ ತೊಡುಗೆಯ ಹಕ್ಕು ವಾಕ್ ಸ್ವಾತಂತ್ರ್ಯದ ಭಾಗವಾಗಿದೆ. ಇದು ಸಾರ್ವಜನಿಕ ಆದೇಶಕ್ಕೆ ಮಾತ್ರ ಒಳಪಟ್ಟಿರುತ್ತದೆ. ಈಗಾಗಲೇ ಉಲ್ಲೇಖಿಸಿರುವ ಪುಟ್ಟಸ್ವಾಮಿ ಮತ್ತು ನಲ್ಸಾ ಪ್ರಕರಣಗಳ ಆದೇಶದಂತೆ ಖಾಸಗಿತನ ಹಕ್ಕಾಗಿದೆ. ಹಿಜಬ್ ಧರಿಸಿದ ವ್ಯಕ್ತಿಯನ್ನು ಧರ್ಮ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡಲಾಗುವುದಿಲ್ಲ ಎಂದು ವಾದಿಸಿದರು.

ಈ ಪ್ರಕರಣವನ್ನು ಅದರ ಸರಿಯಾದ ದೃಷ್ಟಿಕೋನದಲ್ಲಿ ವಿಚಾರಣೆ ನಡೆಸಬೇಕು. ಇಂದು ಬಹುಸಂಖ್ಯಾತ ಸಮುದಾಯದಲ್ಲಿ ಇಸ್ಲಾಂ ಎಂದು ಬಂದಿದ್ದನ್ನು ಹೊಡೆದುರುಳಿಸುವ ಅತೃಪ್ತಿ ಬಹಳಷ್ಟಿದೆ. ನನ್ನ ಅರ್ಜಿದಾರರು ಕಾಲೇಜಿನಲ್ಲಿದ್ದು ಹಿಜಬ್ ಧರಿಸಿಯೇ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾಳೆ. ಪ್ರಪಂಚದಾದ್ಯಂತ ಹಿಜಬ್ ಅನ್ನು ಮಾನ್ಯವೆಂದು ಗುರುತಿಸಲಾಗಿದೆ. ಇದು ಲಿಂಗ ಮತ್ತು ಧಾರ್ಮಿಕ ಹಕ್ಕುಗಳನ್ನು ನಿರ್ಧರಿಸುವ ವಿಷಯವಾಗಿದೆ ಎಂದು ಕೋರ್ಟ್‌ಗೆ ತಿಳಿಸಿದರು.

HIJAB

ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್‌ಗೆ ಅನುಮತಿ ಇದೆ. ಅದು ಕೇಂದ್ರಿಯ ವಿದ್ಯಾಲಯಕ್ಕೆ ಸಂಬಂಧಿಸಿದ ನಿರ್ಧಾರ ಎಂದು ಅವರು ಹೇಳುತ್ತಾರೆ. ಧರ್ಮ ಮತ್ತು ಅದರ ಆಚರಣೆಗಳನ್ನು ಅಗತ್ಯ ಭಾಗಗಳಲ್ಲ ಎಂದು ಹೇಳುವ ಅಧಿಕಾರ ಹೊರಗಿನವರಿಗಿಲ್ಲ. ಅಂತವುಗಳನ್ನು ನಿಷೇಧಿಸಲು ಜಾತ್ಯಾತೀತ ಸರ್ಕಾರ ಮುಕ್ತವಾಗಿಲ್ಲ. ಲಕ್ಷಾಂತರ ಮಹಿಳೆಯರು ಸ್ಕಾರ್ಫ್ ಧರಿಸುತ್ತಿದ್ದಾರೆ. ಸಾರ್ವಜನಿಕ ಸುವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಲು ಏನು ಸಮರ್ಥನೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸ್ಕೂಲ್ ಬಸ್ಸಿನೊಳಗೆ ಉಸಿರುಗಟ್ಟಿ ಬಾಲಕಿ ಸಾವು ಪ್ರಕರಣ- ಶಾಲೆ ಮುಚ್ಚಲು ಆದೇಶ

ಸಮವಸ್ತ್ರ ನಿಯಮ ರೂಪಿಸುವಾಗ ಬುರ್ಖಾಗೆ ಅವಕಾಶ ನೀಡುವುದಿಲ್ಲ ಎಂದು ಹೇಳಬಹುದು. ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ? ಸಮವಸ್ತ್ರ ಬಣ್ಣದೇ ಹಿಜಬ್ ಧರಿಸಲಾಗುತ್ತಿದೆ ಎಂದು ವಾದ ಮಂಡಿಸಿದರು.

mdk kodava festival 7

ಕೊಡವರಿಗೆ ವಿಶೇಷ ವಿನಾಯಿತಿ ಯಾಕೆ?
ಕೊಡಗಿನ ಜನರ ವಿಶಿಷ್ಟ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಇಂಡಿಯನ್ ಆರ್ಮ್ಸ್ ಆಕ್ಟ್ ಸೆಕ್ಷನ್ ಮೂರರ ಪ್ರಕಾರ ಯಾರಿಗೂ ಇಲ್ಲದ ಅನುಮತಿ ಕೊಡವರಿಗೆ ಇದೆ. ಕೊಡಗಿನ ಜನರ ಹಬ್ಬ ಹರಿದಿನ. ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ ಕೊಡವರಲ್ಲಿ ಕೋವಿಗೆ ಪೂಜ್ಯಭಾವನೆಯಿದೆ, ಪವಿತ್ರ ಸ್ಥಾನವಿದೆ.

mdk kodava festival 1

ಸಮರ ಸಮುದಾಯವಾಗಿರುವ ಕೊಡವ ಸಮುದಾಯವು ಸ್ವಾತಂತ್ರ್ಯ ಪೂರ್ವದಿಂದಲೂ ಜುಮ್ಮಾ ಹಿಡುವಳಿದಾರರು, ಅಂದಿನಿಂದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಕೆಲವು ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ, ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಈ ಹಿಂದೆ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:high courtHijabKodavaSupreme Courtಕರ್ನಾಟಕಸಮವಸ್ತ್ರಸುಪ್ರೀಂ ಕೋರ್ಟ್ಹಿಜಬ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
10 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
14 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
20 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
30 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
38 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?