Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎರಡು ವರ್ಷಗಳಿಂದ ನನ್ನ ಫೈಲನ್ನೇ ಅಧಿಕಾರಿಗಳು ಕ್ಲಿಯರ್ ಮಾಡಿಲ್ಲ: ಮುರುಗೇಶ್ ನಿರಾಣಿ ಅಸಹಾಯಕತೆ

Public TV
Last updated: September 20, 2022 3:44 pm
Public TV
Share
4 Min Read
VIDHANAPARISHAD MURUGESH NIRANI
SHARE

ಬೆಂಗಳೂರು: ವಿಧಾನ ಪರಿಷತ್ (Vidhana Parishad) ನಲ್ಲಿಂದು ಸಚಿವರೇ, ನನ್ನ ಕೆಲಸ ಆಗುತ್ತಿಲ್ಲ. ಅಧಿಕಾರಿಗಳು ನನ್ನ ಫೈಲ್ ಕ್ಲಿಯರ್ ಮಾಡಿಲ್ಲ ಅಂತ ಅಸಹಾಯಕತೆ ತೋಡಿಕೊಂಡ ಘಟನೆ ನಡೆಯಿತು.

ಮಂಡ್ಯದ ಪಾಂಡವಪುರ ಸಕ್ಕರೆ ಕಾರ್ಖಾನೆ (Sugar Factory) ಗುತ್ತಿಗೆ ಒಡಂಬಡಿಕೆ ಕಡತ ವಿಲೇವಾರಿ ಎರಡು ವರ್ಷವಾದರೂ ಆಗಿಲ್ಲ. ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ (Pankaj Kumar Pandey) ತಡೆ ಹಿಡಿದಿದ್ದಾರೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ (Murugesh Nirani) ಸದನದಲ್ಲೇ ನೇರ ಆರೋಪ ಮಾಡಿದರು. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಯ್ತು.

VIDHANAPARISHAD

ಈ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷ ಸದಸ್ಯರು ಪಟ್ಟುಹಿಡಿದರು. ಆದರೆ ಇದಕ್ಕೆ ಅವಕಾಶ ನಿರಾಕರಿಸಿದ ಸಭಾಪತಿ (Speaker) ನೋಟಿಸ್ ನೀಡಿ ನಂತರ ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ರೂಲಿಂಗ್ ನೀಡಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ಸುನೀಲ್ ವಲ್ಯಾಪುರೆ ಪ್ರಶ್ನೆಗೆ ಉತ್ತರಿಸಿದ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಸಕ್ಕರೆ ಕಾರ್ಖಾನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಥನಾಲ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಎಥೆನಾಲ್ ಉತ್ಪಾದನೆ ನಮ್ಮ ಇಲಾಖೆ ವ್ಯಾಪ್ತಿಗೆ ಬರಲಿದೆ ಆದರೆ ಮಾರಾಟ ಅಬಕಾರಿ ಇಲಾಖೆ (Excise Department) ಗೆ ಬರಲಿದೆ. ಸಮಸ್ಯೆ ಇದ್ದರೆ ನಮ್ಮ ಅಬಕಾರಿ ಇಲಾಖೆ ನಡುವೆ ಸಭೆ ನಡೆಸಲಾಗುತ್ತದೆ. ರೈತರಿಗೆ ಹಣ ಪಾವತಿ ವಿಳಂತ ತಪ್ಪಿಸುವ ಕೆಲಸ ಮಾಡಲಾಗುತ್ತದೆ ಎಂದರು.

VIDHANAPARISHAD.1png

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ಲಕ್ಮಣ ಸವದಿ, ಮೂರು ತಿಂಗಳಾದರೂ ಕಡತ ವಿಲೇವಾರಿ ಆಗಲ್ಲ ಎಂದು ಅಧಿಕಾರಿಗಳ ಧೋರಣೆಗೆ ಆಕ್ಷೇಪಿಸಿ ಇದನ್ನು ಸರಿಪಡಿಸುವಂತೆ ಮನವಿ ಮಾಡಿದರು. ಸವದಿ ಹೇಳಿಕೆ ಸಮರ್ಥಿಸಿಕೊಂಡ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ನಾನು ಲೀಸ್ ಗೆ ತೆಗೆದುಕೊಂಡಿದ್ದೇನೆ. ಆದರೆ ನಮಗೆ ಒಪ್ಪಂದ ಮಾಡಿಕೊಡುತ್ತಿಲ್ಲ ಎಂದು ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಹೆಸರು ಉಲ್ಲೇಖಿಸಿ ಅವರು ಇಲ್ಲೇ ಇದ್ದಾರೆ ಎಂದು ನೇರ ಆರೋಪ ಮಾಡಿದರು.

ನಾನು 40 ವರ್ಷ ರಾಜಕೀಯ ಜೀವನದಲ್ಲಿದ್ದೇನೆ. ನನಗೇ ಹೀಗಾಗಿದೆ ಎಂದು ಕಡತ ವಿಲೇವಾರಿ ವಿಳಂಬ ಕುರಿತು ತಮ್ಮ ಸ್ವಂತ ಅನುಭವವನ್ನು ಪ್ರಸ್ತಾಪಿಸಿದರು. ಯಾವುದೇ ಪತ್ರಗಳಿಲ್ಲದೇ ನಾನು ಈಗಾಗಲೇ 50 ಕೋಟಿ ಹೂಡಿಕೆ ಮಾಡಿದ್ದೇನೆ ಎಂದರು. ನಿರಾಣಿ ಹೇಳಿಕೆ ನಂತರ ಸರ್ಕಾರ (Government) ದ ವಿರುದ್ಧ ಪ್ರತಿಪಕ್ಷ ಸದಸ್ಯರು ಮುಗಿಬಿದ್ದರು. ಮಂತ್ರಿಗಳಿಗೇ ಹೀಗಾದರೆ ಜನರ ಕಥೆಯೇನು? ಸಚಿವರು ಅಧಿಕಾರಿ ಹೆಸರೇಳಿದ್ದಾರೆ ಅವರು ಮಾತನಾಡಲು ಅವಕಾಶ ನೀಡಿ ಎಂದರು.

VIDHANAPARISHAD.2png

ಪ್ರತಿಪಕ್ಷದ ಸಚೇತಕ ಪ್ರಕಾಶ್ ರಾಥೋಡ್ ಮಾತನಾಡಿ, ಒಬ್ಬ ಮಂತ್ರಿ ಒಬ್ಬ ಅಧಿಕಾರಿ ಹೆಸರೇಳಿ ಎರಡು ವರ್ಷ ಕಡತ ವಿಲೇವಾರಿ ಮಾಡಿಲ್ಲ ಎಂದಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದಕ್ಕೆ ಸಮಂಜಸ ಉತ್ತರ ನೀಡಬೇಕು ಎಂದರು. ಇದಕ್ಕೆ ಸಭಾಪತಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನ (Session) ದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಇದನ್ನೂ ಓದಿ; ರಾಜ್ಯದಲ್ಲಿ ಯಾವುದೇ ಕಾರಣಕ್ಕೂ APMC ಕಾಯ್ದೆ ರದ್ದು ಮಾಡೋದಿಲ್ಲ- ಎಸ್.ಟಿ ಸೋಮಶೇಖರ್

ಈ ವೇಳೆ ಮಾತನಾಡಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ನೋಟಿಸ್ (Notice) ನೀಡಿ ಚರ್ಚೆಗೆ ಅವಕಾಶ ನೀಡುತ್ತೇನೆ ಎಂದರು. ಇದಕ್ಕೆ ಪ್ರತಿಪಕ್ಷ ಸದಸ್ಯರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಪಕ್ಷದ ಉಪ ನಾಯಕ ಗೋವಿಂದರಾಜು ಮಾತನಾಡಿ, ನಿರಾಣಿ ಸದನದಲ್ಲೇ ಹೇಳಿಕೆ ನೀಡಿದ್ದಾರೆ. ಸರ್ಕಾರದ ಭಾಗವಾಗಿಯೇ ಈ ರೀತಿ ಹೇಳಿಕೆ ನೀಡಿದ್ದರಿಂದ ಚರ್ಚೆಗೆ ಅವಕಾಶ ನೀಡಿ ರೂಲಿಂಗ್ ನೀಡಬೇಕು ಎಂದು ಆಗ್ರಹಿಸಿದರು.

VIDHANAPARISHAD KOTA SRINIVAS POOJARY

ಪ್ರತಿಪಕ್ಷದ ಬೇಡಿಕೆ ವಿರೋಧಿಸಿದ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojary), ಸದಸ್ಯರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಈ ವೇಳೆ ಕಡತ ವಿಳಂಬಕ್ಕೆ ನಿರಾಣಿ ಉದಾಹರಣೆ ನೀಡಿದ್ದಾರೆ. ಹಿಂದೆಲ್ಲಾ ಹೀಗಾಗಿತ್ತು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ ಎನ್ನುವುದು ಅವರ ಹೇಳಿಕೆಯ ತಾತ್ಪರ್ಯ ಎಂದರು. ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆಗೆ ಪ್ರತಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಜಾರಿ: ಎಸ್.ಟಿ.ಸೋಮಶೇಖರ್

ಈ ವೇಳೆ ಮಧ್ಯಪ್ರವೇಶ ಮಾಡಿದ ಬಿಜೆಪಿ ಸದಸ್ಯ ಲಕ್ಷ್ಮಣ ಸವದಿ, ಕಾರ್ಯಾಂಗ, ಶಾಸಕಾಂಗ ಅನೇಕ ವರ್ಷಗಳಿಂದ ಬಂದ ವ್ಯವಸ್ಥೆ. ಇದರಲ್ಲಿ ಆಗುವ ವ್ಯತ್ಯಾಸಗಳಿಂದ ಕೆಲವೊಮ್ಮೆ ಘಟನೆಗಳು ಹೊರ ಬರಲಿವೆ. ಮನಸ್ಸಿಗೆ ಘಾಸಿಯಾದಾಗ ಇಂತಹ ಮಾತು ಸಚಿವರಿಂದ ಹೊರಬಂದಿದೆ. ಇದನ್ನು ದೊಡ್ಡದು ಮಾಡಬೇಡಿ ಎಂದು ಮನವಿ ಮಾಡಿದರು. ಜೆಡಿಎಸ್ ಸದಸ್ಯ ಭೋಜೇಗೌಡ ಮಾತನಾಡಿ ಸಚಿವರು ಸತ್ಯ ಹೇಳಿದ್ದಾರೆ. ಸಚಿವರೊಬ್ಬರನ್ನೇ ಯಾಕೆ ಹೊಣೆ ಮಾಡಬೇಕು. ಚರ್ಚೆಗೆ ಅವಕಾಶ ನೀಡಿ ಎಂದರು.

LAXMAN SAVADI MURUGESH NIRANI

ನಂತರ ನಿರಾಣಿ ಹೇಳಿಕೆ ಕುರಿತು ಸ್ಪಷ್ಟೀಕರಣ ನೀಡಿದ ಸಕ್ಕರೆ ಸಚಿವ ಶಂಕರಪಾಟೀಲ್ ಮುನೇನಕೊಪ್ಪ (Shankar Patil Munenakoppa) ,ತಮ್ಮ ನೋವಿನ ಸಂಗತಿಯನ್ನು ನಿರಾಣಿ ಹೇಳಿದ್ದಾರೆ. ಪಾಂಡವಪುರ,ಶ್ರೀರಾಮು ಮತ್ತು ಮಲೈ ಶುಗರ್ ಕಾರ್ಖಾನೆಗಳ ಪುನಶ್ಚೇತನ ಸರ್ಕಾರಕ್ಕೆ ಸವಾಲಾಗಿದೆ. ಪಾಂಡವಪುರ ಕಾರ್ಖಾನೆಯನ್ನು ನಿರಾಣಿ ಗ್ರೂಪ್ ಟೆಂಡರ್ ಮೂಲಕ ಪಡೆದುಕೊಂಡಿದೆ. ಅವರು ಸ್ಟಾಂಪ್ ಎಕ್ಸೆಂಪಕ್ಷನ್ ಕೇಳಿದ್ದಾರೆ. ಈ ವಿಚಾರದಲ್ಲಿ ವಿಳಂಬವಾಗಿದೆ. ಇದರ ನೀತಿ ನಿಯಮದಲ್ಲಿ ವಿಳಂಬವಾಗಿದೆ.ಹಣಕಾಸು ಇಲಾಖೆ ಸಲಹೆ ಪಡೆದು ಸಂಪುಟದಲ್ಲಿ ಇಟ್ಟು ಸಿಎಂ (Chief Minister) ಈ ಸಮಸ್ಯೆ ಪರಿಹರಿಸಲಿದ್ದಾರೆ. ಯಾವುದೇ ಅಧಿಕಾರಿ ಆದರೂ ಸರ್ಕಾರದ ನಿಯಮ ಪಾಲಿಸಬೇಕು ಎಂದರು.

ಸಚಿವರ ಉತ್ತರಕ್ಕೆ ತೃಪ್ತರಾಗದ ಪ್ರತಿಪಕ್ಷ ಸದಸ್ಯರು ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದರು. ಆದರೆ ಪ್ರತಿಪಕ್ಷ ಸದಸ್ಯರ ಬೇಡಿಕೆ ತಳ್ಳಿಹಾಕಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಇದು ಪ್ರಶ್ನೋತ್ತರ ಕಲಾಪ ಇಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ. ಬೇರೆ ರೂಪದಲ್ಲಿ ಚರ್ಚೆಗೆ ನೋಟಿಸ್ ನೀಡಿ ಅದಕ್ಕೆ ಅವಕಾಶ ನೀಡಲಾಗುತ್ತದೆ ಎಂದು ರೂಲಿಂಗ್ ನೀಡಿದರು ಗಲಾಟೆಗೆ ಅಂತ್ಯ ಹಾಡಿದರು.

Live Tv
[brid partner=56869869 player=32851 video=960834 autoplay=true]

TAGGED:bengaluruMurugesh niranisessionಅಧಿವೇಶನಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

You Might Also Like

donald trump
Latest

ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

Public TV
By Public TV
12 minutes ago
Chalwadi Narayanswamy
Bengaluru City

ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ

Public TV
By Public TV
38 minutes ago
Teenager dies of heart attack Test children at school Expert panel advises to Karnataka govt
Bengaluru City

ಹೃದಯಾಘಾತಕ್ಕೆ ಹದಿ ಹರೆಯದವರು ಸಾವು -ಮಕ್ಕಳಿಗೆ ಶಾಲೆಯಲ್ಲೇ ಟೆಸ್ಟ್ ಮಾಡಿ: ತಜ್ಞರ ಸಮಿತಿ

Public TV
By Public TV
38 minutes ago
weather
Districts

ಮಳೆ ಪ್ರಮಾಣದಲ್ಲಿ ಚಿರಾಪುಂಜಿ, ಆಗುಂಬೆಯನ್ನು ಹಿಂದಿಕ್ಕಿದ ಉಡುಪಿ

Public TV
By Public TV
1 hour ago
B Y Vijayendra
Bengaluru City

ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಸಿಎಂ ವಿರುದ್ಧ ದೂರು ನೀಡಿಲ್ಲವೇಕೆ?: ವಿಜಯೇಂದ್ರ

Public TV
By Public TV
1 hour ago
Sudeep is the New owner of Bengaluru based Franchise in Indian Racing League and the franchise is named as Kichchas Kings Bengaluru 1
Cinema

ಕಾರು ರೇಸ್‌ಗೆ ಕಿಚ್ಚ ಎಂಟ್ರಿ – ಬೆಂಗಳೂರು ತಂಡ ಖರೀದಿಸಿದ ಸುದೀಪ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?