Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಸ್‍ನಿಂದ ಬಿದ್ದು ಯುವತಿಯ ಮೆದುಳು ನಿಷ್ಕ್ರಿಯ – ಸಾವಿನಲ್ಲೂ 9 ಜನರ ಬಾಳಿಗೆ ಬೆಳಕಾದಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಬಸ್‍ನಿಂದ ಬಿದ್ದು ಯುವತಿಯ ಮೆದುಳು ನಿಷ್ಕ್ರಿಯ – ಸಾವಿನಲ್ಲೂ 9 ಜನರ ಬಾಳಿಗೆ ಬೆಳಕಾದಳು

Chikkamagaluru

ಬಸ್‍ನಿಂದ ಬಿದ್ದು ಯುವತಿಯ ಮೆದುಳು ನಿಷ್ಕ್ರಿಯ – ಸಾವಿನಲ್ಲೂ 9 ಜನರ ಬಾಳಿಗೆ ಬೆಳಕಾದಳು

Public TV
Last updated: September 21, 2022 8:47 pm
Public TV
Share
2 Min Read
CKM GIRL
SHARE

ಚಿಕ್ಕಮಗಳೂರು: ಮಗಳ ಸಾವಿನ ನೋವಿನಲ್ಲೂ ಹೆತ್ತವರು ಆಕೆಯ ಒಂಬತ್ತು ಅಂಗಾಂಗಳನ್ನು ದಾನ (Organs Donate) ಮಾಡಿ ಸಾರ್ಥಕತೆ ಮರೆದ ಪ್ರೇರಣದಾಯಕ ಘಟನೆಗೆ ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್ ಹಾಗೂ ಲಕ್ಷ್ಮಿ ದಂಪತಿ ಸಾಕ್ಷಿಯಾಗಿದ್ದಾರೆ.

CKM GIRL 2

ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್, ಲಕ್ಷ್ಮಿಬಾಯಿ ದಂಪತಿಯ ಪುತ್ರಿ ರಕ್ಷಿತಾ ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ (ಕಾಮರ್ಸ್) ಓದುತ್ತಿದ್ದಳು. ನಗರದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ನಲ್ಲಿ ಇದ್ದಳು. ಎರಡು ದಿನಗಳ ಹಿಂದೆ ಮನೆಗೆ ಹೋಗಲೆಂದು ಹೋಗುವಾಗ ಸರ್ಕಾರಿ ಬಸ್‍ನಿಂದ (Bus) ಆಯಾತಪ್ಪಿ ಬಿದಿದ್ದಳು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತಲೆಗೆ ಗಂಭೀರ ಗಾಯವಾದ ಕಾರಣ ವೈದ್ಯರು ಬದುಕಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದೆ. ರಕ್ಷಿತಾಳ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದ್ದು ಬೇರೆಲ್ಲಾ ಅಂಗಾಂಗಳಿಗೆ ಯಾವುದೇ ತೊಂದರೆಯಾಗದ ಹಿನ್ನೆಲೆ ಅವುಗಳ ದಾನಕ್ಕೆ ಮುಂದಾಗಬಹುದು ಎಂದು ವೈದ್ಯರು ಹೆತ್ತವರಿಗೆ ಮಾಹಿತಿ ನೀಡಿದ್ದಾರೆ. ಮಗಳನ್ನು ಕಳೆದುಕೊಂಡ ನೋವಲ್ಲೂ ಅಪ್ಪ ಶೇಖರ್ ನಾಯ್ಕ್-ಅಮ್ಮ ಲಕ್ಷ್ಮಿ ಬಾಯಿ ರಕ್ಷಿತಾಳ ಎಲ್ಲಾ ಅಂಗಾಂಗಗಳ ದಾನಕ್ಕೆ ಮುಂದಾಗಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇದನ್ನೂ ಓದಿ: ತಾಯಿಯ ಮಡಿಲಲ್ಲೇ ಭಾಷಣ ಮಾಡಿ ಪ್ರಥಮ ಸ್ಥಾನ ಗೆದ್ದ ಬಾಲಕಿ!

CKM GIRL copy

ಎದೆಬಡಿತ ನಮಗೆ ಕೇಳಿಸಲ್ಲ:
ನನ್ನ ತಂಗಿಯ ಒಂಬತ್ತು ಅಂಗಾಗಳನ್ನು ಒಂಬತ್ತು ಜನರಿಗೆ ಹಾಕುತ್ತಾರೆ. ಅವರೆಲ್ಲಾ ಬದುಕುತ್ತಾರೆ. ಆದರೆ, ಆಕೆಯ ಕಣ್ಣು ಮತ್ತೊಬ್ಬರ ಮೂಲಕ ಜಗತ್ತನ್ನು ನೋಡಲಿದೆ. ಆದರೆ, ನಮ್ಮನ್ನ ನೋಡಲ್ಲ. ಆಕೆಯ ಎದೆಬಡಿತ ಮತ್ತೊಬ್ಬರಿಗೆ ಕೇಳಿಸುತ್ತೆ. ಆದರೆ, ನಮಗೆ ಕೇಳಿಸಲ್ಲ ಎಂದು ರಕ್ಷಿತಾಳ 14 ಜನ ಸಹೋದರರು ಕಣ್ಣೀರಿಟ್ಟಿದ್ದಾರೆ. ನಮ್ಮ ತಂಗಿ ನಮ್ಮ ಜೊತೆ ಇಲ್ಲ. ಆದರೆ, ಅಂಗಾಂಗಗಳ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕಾಗಲಿದ್ದಾಳೆ. ನಾವು ಯಾವುದೇ ತೊಂದರೆ ಮಾಡಲ್ಲ. ಆಕೆಯ ಯಾವ್ಯಾವ ಅಂಗಗಳು ಮತ್ತೊಬ್ಬರಿಗೆ ಉಪಯೋಗಕ್ಕೆ ಬರುತ್ತೋ ಆ ಎಲ್ಲಾ ಅಂಗಗಳನ್ನೂ ತೆಗೆದುಕೊಳ್ಳಲಿ ಎಂದು ಕಣ್ಣೀರಿಟ್ಟಿದ್ದಾರೆ.

ಒಬ್ಬಳೆ ಮಗಳು:
ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ರಕ್ಷಿತಾಳ ಅಪ್ಪ-ಅಮ್ಮರದ್ದು ದೊಡ್ಡ ಕುಟುಂಬ. ದೊಡ್ಡಪ್ಪ-ಚಿಕ್ಕಪ್ಪನ ಮಕ್ಕಳು ಸೇರಿದಂತೆ 14 ಜನ ಅಣ್ಣತಮ್ಮಂದಿರಿಗೆ ರಕ್ಷಿತಾ ಒಬ್ಬಳೆ ಮುದ್ದಿನ ತಂಗಿ. ಹಾಗಾಗಿ, ಆಕೆಯನ್ನು ಹೇಗಾದರೂ ಉಳಿಸಿಕೊಳ್ಳಬೇಕು ಎಂದು ಹೆತ್ತವರು, ಸಹೋದರರೂ ಹೋರಾಡುತ್ತಿದ್ದಾರೆ. ಹಳ್ಳಿಯಲ್ಲಿ ನೂರಾರು ಜನ ಆಕೆಗೆ ಪ್ರಾರ್ಥಿಸಿದ್ದಾರೆ. ಕುಟುಂಬಸ್ಥರು ಮೂರ್ನಾಲ್ಕು ದಿನದಿಂದ ಊಟ-ತಿಂಡಿ-ನಿದ್ದೆ ಬಿಟ್ಟು ಹೋರಾಡುತ್ತಿದ್ದಾರೆ. ಆದರೆ, ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದ್ದು ವೈದ್ಯರು ಉಳಿಯಲು ಸಾಧ್ಯವೇ ಇಲ್ಲ ಎಂದಾಗ ಹೆತ್ತವರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಹೋಗ್ಬೇಡಿ ಸರ್- ಮಂಡ್ಯದಲ್ಲಿ ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳು ಕಣ್ಣೀರು

ಒಂಬತ್ತು ಅಂಗಗಳ ದಾನ:
ರಕ್ಷಿತಾಳ ಹೃದಯ, ಎರಡು ಕಿಡ್ನಿ, ಎರಡು ಕಣ್ಣುಗಳು, ಎರಡು ಶ್ವಾಸಕೋಶ ಸೇರಿ ಒಟ್ಟು ಒಂಭತ್ತು ಮಂದಿಗೆ ರಕ್ಷಿತಾಳ ಅಂಗಾಂಗಗಳನ್ನು ಜೋಡಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ.ಮೋಹನ್ ಸ್ಪಷ್ಟಪಡಿಸಿದ್ದಾರೆ. ಅದಕ್ಕಾಗಿ ಈಗಾಗಲೇ ಚಿಕ್ಕಮಗಳೂರಿಗೆ ಬೆಂಗಳೂರು, ಚೆನ್ನೈನಿಂದ ನುರಿತ ವೈದ್ಯರ ತಂಡವೂ ಆಗಮಿಸಿದೆ. ಗುರುವಾರ (ಸೆಪ್ಟೆಂಬರ್ 22) ಬೆಳಗ್ಗೆ 10.30 ರಿಂದ 12 ಗಂಟೆಯೊಳಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿರುವ ರಕ್ಷಿತಾಳ ಅಂಗಾಂಗಳನ್ನು ತೆಗೆಯುವ ಪ್ರಕ್ರಿಯೆ ನಡೆಯಲಿದೆ. ಕೂಡಲೇ ಎರಡು ಹೆಲಿಕಾಪ್ಟರ್ ಮೂಲಕ ರಕ್ಷಿತಾಳ ಅಂಗಾಂಗಗಳನ್ನು ರವಾನೆ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿದೆ.

Live Tv
[brid partner=56869869 player=32851 video=960834 autoplay=true]

TAGGED:Chikkamagalurugirlorgans donateಅಂಗಾಂಗಚಿಕ್ಕಮಗಳೂರುಬಸ್
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
28 minutes ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
31 minutes ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
41 minutes ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
1 hour ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
1 hour ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?