Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ

Cinema

ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ

Public TV
Last updated: September 22, 2022 11:42 am
Public TV
Share
3 Min Read
FotoJet 96
SHARE

ಸಿನಿಮಾ ಅನ್ನೋದು ಅದ್ಭುತ ಪ್ರತಿಕ್ರಿಯೆ. ಸಿನಿಮಾ ಪ್ರೀತಿ ಮಾಡೋರಿಗೆ ಸದಾ ಅದರದ್ದೇ ಧ್ಯಾನ. ಕನ್ನಡ ಚಿತ್ರರಂಗ ಈಗ ಭಾರತೀಯ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡುಕೊಂಡಿದೆ. ಇಡೀ ಭಾರತೀಯ ಸಿನಿಮಾರಂಗವೇ ಹಾಗೊಮ್ಮೆ ಇತ್ತ ಕಣ್ಣಾಯಿಸುವಂತೆ ಮಾಡಿದ್ದು ಸುಳ್ಳಲ್ಲ. ಇಲ್ಲಿ ಸಿನಿಮಾ ಮಾಡೋದು ಎಷ್ಟು ಕಷ್ಟ-ಇಷ್ಟ ಅನ್ನೋದು ಅಲ್ಲಿ ಅನುಭವಿಸಿದವರಿಗಷ್ಟೇ ಗೊತ್ತು. ಸಿನಿಮಾ ಮಾಡೋದು ದೊಡ್ಡದ್ದಲ್ಲ. ಅದನ್ನು ರಿಲೀಸ್ ಮಾಡಿ, ವ್ಯಾಪಾರ ವಹಿವಾಟು ನಡೆಸೋದು ಮುಖ್ಯ. ಅದೆಷ್ಟೋ  ಸಿನಿಮಾಗಳು ತಯಾರಾಗಿ ರಿಲೀಸ್ ಅಗದೆ ಇಂದಿಗೂ ಆ ಪ್ರಯತ್ನದಲ್ಲಿವೆ. ಹಾಕಿದ ಹಣ ವಾಪಾಸ್ ಪಡೆಯೋದು ಕಷ್ಟ ಅನಿಸಿರುವ ಈ ಸಂದರ್ಭದಲ್ಲೊಂದು ಕನ್ನಡ ಸಿನಿಮಾ ನಿರ್ಮಾಪಕ, ನಿರ್ದೇಶಕರಿಗೆ ಖುಷಿಯ ಸುದ್ದಿಯೊಂದು ಹೊರಬಿದ್ದಿದೆ.

FotoJet 2 63

ಹೌದು, ಕನ್ನಡದ ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವುಗಳಿಗೆ ಪ್ರಚಾರವನ್ನೂ ಮಾಡಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಮೂಲಕ ಆ ನಿರ್ಮಾಪಕರಿಗೆ ಸಾಥ್ ನೀಡುವ ಸಂಸ್ಥೆಯೊಂದು ಹುಟ್ಟುಕೊಂಡಿದೆ. ಅಂದಹಾಗೆ, ಅದು ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್’ ಸಂಸ್ಥೆ. ಇದು ಕನ್ನಡ ಸಿನಿ ಜಗತ್ತಿನಲ್ಲಿ ಆರಂಭಗೊಂಡ ಹೊಸ ಸಂಸ್ಥೆ. ಇದು ಕನ್ನಡದ ಹಾಸ್ಯ ನಟ ಮಿತ್ರ (Mitra) ಅವರ ಸಾರಥ್ಯದಲ್ಲಿ ಉದ್ಯಮಿ ಮನೀಶ್ ಮೆಹ್ತಾ (Manish Mehta) ಮತ್ತು ಗೆಳೆಯರು ಸೇರಿ ಮಾಡಿರುವ ಸಂಸ್ಥೆ. ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ‘ ಎಂಬ ಬ್ಯಾನರ್ ಮೂಲಕ ಸದಭಿರುಚಿಯ ಸಿನಿಮಾಗಳ ರೈಟ್ಸ್ , ಅವುಗಳ ವಿತರಣೆ, ರಿಲೀಸ್ ಹೊಣೆ ಹಾಗು ಸಿನಿಮಾ ನಿರ್ಮಾಣ ಆಗಲಿದೆ. ಪ್ರಮುಖವಾಗಿ ಈ ಸಂಸ್ಥೆಯ ಉದ್ದೇಶ, ಕಂಟೆಂಟ್ ಮತ್ತು ಗುಣಮಟ್ಟದ ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ಕೆಲಸಕ್ಕೆ ಕೈ ಹಾಕಿದೆ. ತಯಾರಾದ ಚಿತ್ರಗಳು, ತಯಾರಾಗದೆ ಸಮಸ್ಯೆಯಲ್ಲಿರುವ ಸಿನಿಮಾಗಳಿಗೂ ಸಾಥ್ ನೀಡುವ ಕೆಲಸ ಈ ಸಂಸ್ಥೆ ಮಾಡಲು ಮುಂದಾಗಿದೆ.

FotoJet 4 11

ಈಗಾಗಲೇ ನಾಗತಿಹಳ್ಳಿ (Nagatihalli Chandrasekhar) ಸಿನಿ ಕ್ರಿಯೇಷನ್ಸ್ ನಡಿ ತಯಾರಾಗಿರುವ ‘ ಡೈಮಂಡ್ ಕ್ರಾಸ್’ (Diamond Cross) ಎಂಬ ಜಾಕಿಚಾನ್ ಮಾದರಿಯ ಕನ್ನಡದ ಆಕ್ಷನ್ ಸಿನಿಮಾವೊಂದರ ರೈಟ್ಸ್ ಪಡೆದು ರಿಲೀಸ್ ಮಾಡಲು ಮುಂದಾಗಿದೆ. ಇದರೊಂದಿಗೆ ಇನ್ನೂ ಹನ್ನೊಂದು ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ತಯಾರಿಯಲ್ಲಿದೆ. ‘ಡೈಮಂಡ್ ಕ್ರಾಸ್’ ಚಿತ್ರವನ್ನು ನಾಗತಿಹಳ್ಳಿ ಅವರ ಅಕ್ಕನ ಮಗ ರಾಮ್ ದೀಪ್ ನಿರ್ದೇಶನ ಮಾಡಿದ್ದಾರೆ. ಉತ್ತರ ಕರ್ನಾಟಕದ ಪ್ರತಿಭೆ ಧ್ರುವ , ರೋಜರ್ ನಾರಾಯಣ್ ಸೇರಿದಂತೆ ಹಲವರು ಸಿನಿಮಾದಲ್ಲಿದ್ದಾರೆ. ಕನ್ನಡಕ್ಕೆ ಈ ರೀತಿಯ ಒಂದು ಫ್ಲಾಟ್ ಫಾರಂ ಕೊರತೆ ಇತ್ತು. ಅದನ್ನು ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ಸಂಸ್ಥೆ ದೊಡ್ಡ ಪ್ರಯತ್ನಕ್ಕೆ ಮುಂದಾಗಿದೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

FotoJet 3 33

ಈಗ ಸಿನಿಮಾ ಮಾಡಿ ರಿಲೀಸ್ ಮಾಡೋದು ಕಷ್ಟ ಸಾಧ್ಯ. ಅದರಲ್ಲೂ ಹಾಕಿದ ಬಂಡವಾಳ ಹಿಂದಕ್ಕೆ ಬಂದರೆ ಅದೇ ಗೆಲುವು. ಇಂತಹದರಲ್ಲಿ ಹೊಸಬರ ಕಂಟೆಂಟ್ ಸಿನಿಮಾಗಳು ಬಿಡುಗಡೆಗೆ, ವ್ಯಾಪಾರಕ್ಕೆ ಅಲೆದಾಡುವ ಸ್ಥಿತಿ ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಈ ಸಂಸ್ಥೆ ಸಿನಿಮಾಗಳ ಖರೀದಿಸಿ, ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ. ಇನ್ನು, ಎಲ್ಲಾ ಸಿನಿಮಾಗಳ ರೈಟ್ಸ್ ಅಸಾಧ್ಯ. ಇಲ್ಲೂ ಕೆಲ ಮಾನದಂಡಗಳಿವೆ. ಸಂಸ್ಥೆಯ ಮುಖ್ಯಸ್ಥ ಮನೀಶ್ ಅವರು ಹೇಳುವಂತೆ, ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವರ ಸಿನಿಮಾಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ನಟ ಮಿತ್ರ ಅವರು ಸಿನಿಮಾ ವೀಕ್ಷಿಸಿ, ಅದರ ಕಂಟೆಂಟ್ ಹಾಗು ಕ್ವಾಲಿಟಿ ಪರಿಶೀಲಿಸಿ, ಅದು ಚೆನ್ನಾಗಿದೆ ಎಂದು ಸರ್ಟಿಫಿಕೇಟ್ ಕೊಟ್ಟ ಬಳಿಕವೇ ಆ ಸಿನಿಮಾ ರೈಟ್ಸ್ ಇತ್ಯಾದಿ ಬಗ್ಗೆ ಅಂತಿಮಗೊಳಿಸಲಾಗುತ್ತದೆ ಎನ್ನುತ್ತಾರೆ.

FotoJet 1 69

ಮಿತ್ರ ಅವರ ಪ್ರಕರ, ಈ ವೇದಿಕೆ ಹುಟ್ಟುಹಾಕಿದ್ದೇ, ಹೊಸ ಪ್ರತಿಭೆಗಳಿಗಂತೆ. ಸಿನಿಮಾ ಮಾಡಿ ರಿಲೀಸ್ ಮಾಡಲಾಗದೆ, ವ್ಯಾಪಾರ ಮಾಲಾಗದೆ ಅಸಹಾಯಕರಾಗುವ ನಿರ್ಮಾಪಕರಿಗೆ ಸಾಥ್ ನೀಡಬೇಕೆಂಬ ಉದ್ದೇಶದಿಂದ. ಅದೀಗ ಸಾಕಾರವಾಗುತ್ತಿದೆ. ಈ ವೇದಿಕೆ ಮೂಲಕ ಕನ್ನಡದ ಒಂದಷ್ಟು ಪ್ರತಿಭಾವಂತರನ್ನು ಗಟ್ಟಿಗೊಳಿಸುವ ಸಣ್ಣ ಪ್ರಯತ್ನ ನಮ್ಮದು ಎನ್ನುತ್ತಾರೆ.

Live Tv
[brid partner=56869869 player=32851 video=960834 autoplay=true]

TAGGED:Diamond CrossManish MehtamitraNagatihalli Chandrasekharಡೈಮಂಡ್ ಕ್ರಾಸ್ನಾಗತಿಹಳ್ಳಿ ಚಂದ್ರಶೇಖರ್ಮನೀಶ್ ಮೆಹ್ತಾಮಿತ್ರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Anekal Ona Karaga Mahotsava
Bengaluru City

ಆನೇಕಲ್‌ನಲ್ಲಿ ಅದ್ಧೂರಿಯಾಗಿ ನಡೆದ ಒಣ ಕರಗ ಮಹೋತ್ಸವ

Public TV
By Public TV
14 minutes ago
Donald Trump Angry
Latest

Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌

Public TV
By Public TV
32 minutes ago
Davanagere Go Back Congress Protest
Davanagere

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ

Public TV
By Public TV
39 minutes ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

Public TV
By Public TV
1 hour ago
Hassan Check Dam 2
Districts

ಕೃಷಿಯನ್ನೇ ನಂಬಿದ್ದ ರೈತರಿಗೆ ಚೆಕ್ ಡ್ಯಾಂ ಪ್ರಾಬ್ಲಂ – ವರ್ಷವಿಡೀ ಬೆಳೆಯುತ್ತಿದ್ದ ಭತ್ತದ ಬೆಳೆಗೆ ವಿದಾಯ!

Public TV
By Public TV
1 hour ago
Chinnaswamy Stadium 1
Bengaluru City

ಬೆಂಗಳೂರಿನಲ್ಲಿ RCB vs CSK ಹಣಾಹಣಿ – ಚಿನ್ನಸ್ವಾಮಿ ಪಿಚ್‌ ರಿಪೋರ್ಟ್‌ ಹೇಗಿದೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?