5.20 ಕೋಟಿ ರೂ. ನಷ್ಟ ಭರಿಸಲು ಪಿಎಫ್‍ಐಗೆ ಹೈಕೋರ್ಟ್ ಸೂಚನೆ

Public TV
1 Min Read
PFI Kerala bandh turns violent High Court initiates suo motu case against party leaders Vehicles attacked KSRTC briefly stops bus services 1

ತಿರುವನಂತಪುರಂ: ಎನ್‍ಐಎ (NIA) ದಾಳಿ ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆಯಾದ ನಷ್ಟಕ್ಕಾಗಿ 5.20 ಕೋಟಿ ರೂ. ಪರಿಹಾರವನ್ನು ಭರಿಸಿಕೊಡುವಂತೆ ಪಿಎಫ್‍ಐ (PFI) ಕೇರಳ ಪ್ರಧಾನ ಕಾರ್ಯದರ್ಶಿಗೆ ಕೇರಳ ಹೈಕೋರ್ಟ್ (Kerala High Court) ಸೂಚನೆ ನೀಡಿದೆ.

kerala high court

ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ನೇತೃತ್ವದ ದ್ವಿಸದಸ್ಯ ಪೀಠ ಈ ಸೂಚನೆ ನೀಡಿದೆ. ಎನ್‍ಐಎ ದಾಳಿ ಖಂಡಿಸಿ ಪಿಎಫ್‍ಐ ಕಾರ್ಯಕರ್ತರು ಸೆ.23 ರಂದು ನಡೆಸಿದ ಪ್ರತಿಭಟನೆ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡಿದ್ದ ಹೈಕೋರ್ಟ್, ಪ್ರಕರಣದ ವಿಚಾರಣೆ ನಡೆಸಿತ್ತು. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಲಾಗಿದೆ, ಕೇರಳ ಸಾರಿಗೆಯ ಬಸ್‍ಗಳಿಗೆ (KSRTC) ಕಲ್ಲು ತೂರಲಾಗಿತ್ತು. ಇದನ್ನೂ ಓದಿ: ಕೇರಳ, ತಮಿಳುನಾಡಿನಲ್ಲೂ PFI ಬ್ಯಾನ್

PFI Kerala bandh turns violent High Court initiates suo motu case against party leaders Vehicles attacked KSRTC briefly stops bus services 2

ಪ್ರತಿಭಟನೆಯಿಂದ 5.06 ಕೋಟಿ ನಷ್ಟವಾಗಿದೆ ಎಂದು ಕೋರ್ಟ್‍ಗೆ ಕೇರಳ ಸಾರಿಗೆ ಸಂಸ್ಥೆ ಹೇಳಿತ್ತು. ಇಂದು ನಡೆದ ವಿಚಾರಣೆ ವೇಳೆ ಬೆಂಬಲಿಗರು ಮಾಡಿದ ಗಲಭೆಗೆ ಪಿಎಫ್‍ಐ ಪ್ರಧಾನ ಕಾರ್ಯದರ್ಶಿ ಸಂಪೂರ್ಣ ಜವಾಬ್ದಾರಿಯಾಗಿದ್ದು ಅವರೇ 5.20 ಕೋಟಿ ರೂ. ಹಣವನ್ನು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಎರಡು ವಾರಗಳಲ್ಲಿ ನೀಡಬೇಕು ಎಂದು ಪೀಠ ಸೂಚನೆ ನೀಡಿದೆ. ಇದನ್ನೂ ಓದಿ: PFI ನಿಂದ 5.06 ಕೋಟಿ ಪರಿಹಾರ ಕೇಳಿದ KSRTC

ಗೃಹ ಇಲಾಖೆ ನಷ್ಟವಾಗಿರುವ ಆಸ್ತಿ ಪಾಸ್ತಿಯನ್ನು ಲೆಕ್ಕಹಾಕಿ ಸಂತ್ರಸ್ತರಿಗೆ ಹಣವನ್ನು ವರ್ಗಾವಣೆ ಮಾಡಬೇಕು, ಒಂದು ವೇಳೆ ಪರಿಹಾರ ಹಂಚಿಕೆ ವೇಳೆ ಹಣದ ಮೊತ್ತ ಕಡಿಮೆಯಾದರೆ ಹೆಚ್ಚುವರಿ ಹಣವನ್ನೂ ಪಿಎಫ್‍ಐ ಪ್ರಧಾನ ಕಾರ್ಯದರ್ಶಿಯೇ ನೀಡಬೇಕು ಎಂದು ಇದೇ ವೇಳೆ ಕೋರ್ಟ್ ಉಲ್ಲೇಖಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *