ಬಳ್ಳಾರಿ: ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಈ ಬಿಜೆಪಿ ಸರ್ಕಾರವನ್ನು (BJP Government) ನಾವು ಯಾರೂ ಪ್ರಶ್ನೆ ಮಾಡುವಹಾಗಿಲ್ಲ. ಪ್ರಶ್ನೆ ಮಾಡಿದರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅಸಮಾಧಾನ ವ್ಯಕ್ತಪಡಿಸಿದರು.
ಭಾರತ್ ಜೋಡೋ ಯಾತ್ರೆ (Bharath Jodo Yatra) ಹಿನ್ನೆಲೆ ಬಳ್ಳಾರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ 15 ರಂದು ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ (Rahul Gandhi) ನಿಮ್ಮೆಲ್ಲರನ್ನುದ್ದೇಶಿ ಮಾತನಾಡಲಿದ್ದಾರೆ ಎಂದು ಹೇಳಿದರು.
ಈ ಸರ್ಕಾರ ನಮ್ಮ ಕಾರ್ಯಕರ್ತರು ನಾಯಕರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಕೇಸ್ (Criminal Case) ದಾಖಲಿಸುತ್ತಿದೆ, ನಾಗರಿಕರಿಗೆ ದೊಡ್ಡ ಹೊಡೆತ ನೀಡಿದೆ. ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿ ನಾಗರಿಕರ ಹಕ್ಕು. ಆದರೆ ಈ ಸರ್ಕಾರವನ್ನು ನಾವು ಯಾರೂ ಪ್ರಶ್ನೆ ಮಾಡುವ ಹಾಗೆ ಇಲ್ಲ. ಮೋದಿ (Narendra Modi), ಅಮಿತ್ ಶಾ (Amit Shah), ಬೊಮ್ಮಾಯಿ (Basavaraj Bommai) ಅವರನ್ನ ನಾವು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತೆಗೆ ಬೆಂಕಿಯಿಟ್ಟ ಆರೋಪಿ ತಾಯಿ, ಸಹೋದರಿ
ಇದು ಭ್ರಷ್ಟಾಚಾರ ಸರ್ಕಾರ, ಇವರು ತಮ್ಮ ಅಪ್ಪನ ದುಡ್ಡು ಹೊಡೀತಿಲ್ಲ. ಅದು ನಮ್ಮ ದುಡ್ಡು, ನಾಗರಿಕರ ದುಡ್ಡು ಲೂಟಿ ಮಾಡುತ್ತಿದ್ದಾರೆ. ಇದು 40 ಪರ್ಸೆಂಟ್ ಸರ್ಕಾರ (40 Percent Government), ಇದನ್ನ ನಾವು ಪ್ರಶ್ನೆ ಮಾಡಿದ್ರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅತ್ತ ಭಾರತ್ ಜೋಡೋ ಪಾದಯಾತ್ರೆ- ಇತ್ತ ಕಾಂಗ್ರೆಸ್ ಚೋಡೋ ಯಾತ್ರೆ
ಜಾತಿ ಮಧ್ಯೆ ಜಗಳ ಹಚ್ಚಿದೆ: ಬಿಜೆಪಿ (BJP) ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚಿದೆ. ಸಮಾಜವನ್ನು ಒಡೆದು ಆಳುತ್ತಿದೆ. ಈ ಸರ್ಕಾರ ಬಂದ ಬಳಿಕ ಬೆಲೆ ಏರಿಕೆ ಮಿತಿಮೀರಿದೆ. ಬೆಲೆ ಏರಿಕೆ ಬಗ್ಗೆ ಒಂದು ಸಾರಿಯೂ ತುಟಿ ಬಿಚ್ಚಿಲ್ಲ. ಮೋದಿ ಒಬ್ಬ ಸುಳ್ಳುಗಾರ, ಅಚ್ಚೇ ದಿನ್ ಬರುತ್ತೆ ಅಂದ್ರು, ಈವರೆಗೂ ಬರಲೇ ಇಲ್ಲ. ರೈತರ (Farmers) ಆದಾಯ ದುಪ್ಪಟ್ಟು ಮಾಡ್ತೀನಿ ಅಂದಿದ್ದರು. ಆದರೆ ರೈತರ ಸಾವು, ಸಾಲ ಏರಿಕೆ ದುಪ್ಪಟ್ಟಾಯಿತೇ ಹೊರತು ಆದಾಯ ಮಾತ್ರ ದುಪ್ಪಟ್ಟು ಮಾಡಲೇ ಇಲ್ಲ ಎಂದು ಕಿಡಿಕಾರಿದರು.