ಕಾರು ಡಿಕ್ಕಿ ಹೊಡೆದ ರಭಸಕ್ಕೆ ಧರೆಗುರುಳಿದ ಮರ – ಬೈಕ್ ಸವಾರ ಸಾವು

Public TV
1 Min Read
Chikkaballapur accident 1

ಚಿಕ್ಕಬಳ್ಳಾಪುರ: ರಸ್ತೆ ಬದಿಯಲ್ಲಿ ಬೈಕ್ (Bike) ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಸವಾರನ ಪ್ರಾಣವನ್ನು ವೇಗವಾಗಿ ಬಂದ ಕಾರೊಂದು (Car) ಬಲಿ ಪಡೆದಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಶಿಡ್ಲಘಟ್ಟ ಮಾರ್ಗದ ಪಟ್ಟರೇನಹಳ್ಳಿ ಬಳಿ ನಡೆದಿದೆ. ಗೌರಿಬಿದನೂರು ತಾಲೂಕು ಡಿ ಪಾಳ್ಯ ಗ್ರಾಮದ ವರ್ಷದ ಸುರೇಶ್ (28) ಮೃತ ಬೈಕ್ ಸವಾರ.

ಚಿಕ್ಕಬಳ್ಳಾಪುರ (Chikkaballapur) ನಗರದ ರಾಮು ಫರ್ನಿಚರ್ ಪ್ಯಾರಡೈಸ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ತನ್ನ ಸಹೋದ್ಯೋಗಿ ಮದನ್ ಜೊತೆ ಪಟ್ಟರೇನಹಳ್ಳಿ ಗ್ರಾಮದಿಂದ ಚಿಕ್ಕಬಳ್ಳಾಪುರದ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ. ಈ ವೇಳೆ ಮೊಬೈಲ್‌ಗೆ ಕರೆ ಬಂದ ಕಾರಣ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ.

Chikkaballapur accident 2

ಈ ವೇಳೆ ಏಕಾಏಕಿ ಬಂದ ಇಂಡಿಕಾ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ತದನಂತರ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಮದನ್ ಗಾಯಗೊಂಡು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾನೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮರ ಬುಡ ಸಮೇತ ನೆಲಕ್ಕೆ ಉರುಳಿದೆ. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣದ 10ನೇ ಆರೋಪಿಗೆ ಜಾಮೀನು ಮಂಜೂರು

Chikkaballapur accident

ಕಾರು ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಕಾರು ಚಾಲಕನ ಮೇಲೆ ಆಕ್ರೋಶ ಹೊರಹಾಕಿ, ಹಲ್ಲೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಕಾರು ಸಮೇತ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಟೇರಿಂಗ್ ಕಟ್ ಆಗಿ ಬಸ್ ಗದ್ದೆಗೆ ನುಗ್ಗಿದ ರಭಸಕ್ಕೆ ಅರ್ಧಕ್ಕೆ ಮುರಿದ ಕರೆಂಟ್ ಕಂಬ!

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *