Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತ್ರಿವೇಣಿ ಸಂಗಮದಲ್ಲಿ ಮೇಳೈಸಿದ ಮಹಾ ಕುಂಭಮೇಳ – ದೇಗುಲ ಲೋಕಾರ್ಪಣೆಗೊಳಿಸಿದ ಡಾ.ವೀರೇಂದ್ರ ಹೆಗ್ಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತ್ರಿವೇಣಿ ಸಂಗಮದಲ್ಲಿ ಮೇಳೈಸಿದ ಮಹಾ ಕುಂಭಮೇಳ – ದೇಗುಲ ಲೋಕಾರ್ಪಣೆಗೊಳಿಸಿದ ಡಾ.ವೀರೇಂದ್ರ ಹೆಗ್ಗಡೆ

Districts

ತ್ರಿವೇಣಿ ಸಂಗಮದಲ್ಲಿ ಮೇಳೈಸಿದ ಮಹಾ ಕುಂಭಮೇಳ – ದೇಗುಲ ಲೋಕಾರ್ಪಣೆಗೊಳಿಸಿದ ಡಾ.ವೀರೇಂದ್ರ ಹೆಗ್ಗಡೆ

Public TV
Last updated: October 14, 2022 4:06 pm
Public TV
Share
2 Min Read
Mandya Kumbh Mela 3
SHARE

ಮಂಡ್ಯ: ಸಕ್ಕರೆ ನಾಡಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ (Kumbh Mela) ಭಕ್ತ ಸಾಗರವೇ ಹರಿದು ಬರುತ್ತಿದೆ. ಎರಡನೇ ದಿನವಾದ ಇಂದು ಧರ್ಮಸ್ಥಳದ (Dharmasthala) ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ (Dr.Veerendra Heggade) ಪಾಲ್ಗೊಂಡು, ಮಹದೇಶ್ವರ ಸ್ವಾಮಿಯ ನೂತನ ದೇಗುಲ ಲೋಕಾರ್ಪಣೆ ಮಾಡಿ, ನದಿಗೆ ಬಾಗಿನ ಸಮರ್ಪಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು. ಮತ್ತೊಂದೆಡೆ ವೇದಿಕೆಯಲ್ಲಿ ಭಾಗಿಯಾಗಿದ್ದ ಸಾಧು ಸಂತರು ಕುಂಭ ಮೇಳದ ಮಹತ್ವ ಸಾರಿದರು.

Veerendra Heggade

ಮಲೆ ಮಹದೇಶ್ವರ ಸ್ವಾಮಿ ಪಾದ ಸ್ಪರ್ಶ ಮಾಡುವ ಜೊತೆಗೆ ವಪಾಡ ಮೆರೆದ ಪುಣ್ಯ ಕ್ಷೇತ್ರ ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭ ಮೇಳ ಸಂಭ್ರಮ ಹಾಗೂ ಭಕ್ತಿ ಭಾವದಿಂದ ನಡೆಯುತ್ತಿದೆ. ಕುಂಭ ಮೇಳದ ಎರಡನೇ ದಿನವಾದ ಇಂದು ರಾಜ್ಯದ ಹಲವೆಡೆಯಿಂದ ಲಕ್ಷಾಂತರ ಭಕ್ತರು ಪಾಲ್ಗೊಂಡು ಕಾವೇರಿ, ಹೇಮಾವತಿ, ನದಿಗಳ ಸಂಗಮದಲ್ಲಿ ಮಿಂದೆದ್ದು ಪಾಪ ನಿವಾರಣೆಗಾಗಿ ಪ್ರಾರ್ಥಿಸಿದರು. ಬೆಳಗ್ಗೆಯಿಂದಲೇ ತಂಡೋಪ ತಂಡವಾಗಿ ಭಕ್ತರು ಆಗಮಿಸುತ್ತಿದ್ದಾರೆ. ನದಿಯಲ್ಲಿ ಸ್ನಾನ ಮಾಡಿ ಮಹದೇಶ್ವರ ಸ್ವಾಮಿ ದರ್ಶನ ಪಡೆದ್ರೆ ಸ್ನಾನ ಮಾಡದವರು ನದಿ ನೀರನ್ನು ತೀರ್ಥದ ರೂಪದಲ್ಲಿ ಪ್ರೋಕ್ಷಣೆ ಮಾಡಿಕೊಂಡು ಭಕ್ತಿ ಸಮರ್ಪಿಸಿದರು. ಬರುವ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ನ.12ಕ್ಕೆ ಚುನಾವಣೆ, ಡಿ. 8ಕ್ಕೆ ಮತ ಎಣಿಕೆ

Mandya Kumbh Mela 1

ನದಿ ದಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿರುವ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿದವು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ, ಡಾ.ವೀರೇಂದ್ರ ಹೆಗ್ಗಡೆ ಅವರು ಕುಂಭಾಭಿಷೇಕ ಮಾಡುವ ಮೂಲಕ ದೇಗುಲ ಲೋಕಾರ್ಪಣೆ ಮಾಡಿದರು. ಇದೇ ವೇಳೆ ನದಿಗೆ ಶಾಸ್ತ್ರೋಕ್ತವಾಗಿ ಬಾಗಿನ ಸಮರ್ಪಣೆ ಮಾಡಲಾಯಿತು. ಇದನ್ನೂ ಓದಿ: ನವೆಂಬರ್‌ನಲ್ಲಿ ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು

Mandya Kumbh Mela 2

ಬಳಿಕ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಮಂಡ್ಯ ಜಿಲ್ಲೆಯಲ್ಲಿ ಸಾವಿರಾರು ದೇವಸ್ಥಾನಗಳಿವೆ. ನಾವು ಕೆಲವು ಸಲ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಪೂಜೆ ಸಲ್ಲಿಸುತ್ತೇವೆ. ಪಂಚ ಭೂತಗಳಲ್ಲಿ ಜಲ ಬಹಳ ಮುಖ್ಯವಾದದ್ದು, ಜಲಕ್ಕೆ ನಾವು ಕೃತಜ್ಞತೆ ಹೇಳುವುದು ಹೇಗೆ. ಇಷ್ಟು ವರ್ಷ ನಮಗೆ ನೀರಿನ ಅಭಾವ ಉಂಟಾಗಿತ್ತು. ಈಗ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಅದನ್ನು ಹೇಗೆ ಬಳಕೆ ಮಾಡಬೇಕೆಂಬದನ್ನು ಕಲಿಯ ಬೇಕು. ಜಲವನ್ನು ಎಚ್ಚರಿಕಯಿಂದ ಅಮೂಲ್ಯ ಎಂದು ಬಳಸಬೇಕು ಎಂದರು.

Mandya Kumbh Mela

ಇಂದು ಕುಂಭ ಮೇಳದಲ್ಲಿ ಸುತ್ತೂರು ಶ್ರೀ, ಆದಿಚುಂಚನಗಿರಿ ಶ್ರೀ, ಕಾಗಿನೆಲೆ ಶ್ರೀ ಸೇರಿದಂತೆ ಹಲವು ಮಠಾಧಿಪತಿ ಪಾಲ್ಗೊಂಡು ಕುಂಭ ಮೇಳದ ಮಹತ್ವ ಸಾರಿದರು. ಸಚಿವರಾದ ಅಶ್ವಥ್‌ನಾರಾಯಣ, ನಾರಾಯಣಗೌಡ, ಗೋಪಾಲಯ್ಯ, ಶಶಿಕಲಾ ಜೊಲ್ಲೆ ಪಾಲ್ಗೊಂಡಿದ್ದರು. ವಾರಣಾಸಿಯ ಕಾಶಿ ಮಾದರಿಯಲ್ಲಿ ನಡೆಯುವ ಗಂಗಾರತಿ ಪೂಜೆ ಕಣ್ತುಂಬಿಕೊಳ್ಳಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:dharmasthalaDr Veerendra HegadeKumbh Melamandyaಕುಂಭ ಮೇಳಡಾ.ವೀರೇಂದ್ರ ಹೆಗ್ಗಡೆಮಂಡ್ಯಮಲೆ ಮಹದೇಶ್ವರ ಸ್ವಾಮಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
6 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
15 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
39 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
42 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?