ಬಾಲಿವುಡ್‌ನಲ್ಲಿ ಕಾಂತಾರ: ಶುಭ ಕೋರಿದ ಕೇಂದ್ರ ಸಚಿವ ಅನುರಾಗ್ ಠಾಕೂರ್

Public TV
1 Min Read
FotoJet 64

ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರತಂಡದವರು ಕನ್ನಡವಲ್ಲದೆ ಹಿಂದಿ ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು ಮತ್ತು ಹೊಂಬಾಳೆ ತಂಡದವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ, ಹಲವು ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ.

kantara 3 1

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ‘ಹೊಂಬಾಳೆ ಫಿಲಂಸ್ ತಂಡದವರನ್ನು ಭೇಟಿ ಮಾಡಿ, ಚಿತ್ರದ ಯಶಸ್ಸಿಗೆ ಶುಭ ಹಾರೈಸಿದ್ದೇನೆ. ಭಾರತವನ್ನು ಜಗತ್ತಿನ ಸಿನಿಮಾ ಹಬ್ ಮಾಡುವ ಹೊಂಬಾಳೆ ಫಿಲಂಸ್‌ನವರ ಯೋಜನೆಗಳನ್ನು ಕೇಳಿ ಸಂತೋಷವಾಗಿದೆ’ ಎಂದು ಹೇಳಿದ್ದಾರೆ. ಇದನ್ನೂ ಓದಿ:ಸಮಂತಾ ಬದುಕಿನಲ್ಲಿ ಮತ್ತೆ ಬ್ರೇಕಪ್ ಬಿರುಗಾಳಿ

kantara 1

ಸಭೆಯ ನಂತರ ತಮ್ಮ ಅನಿಸಿಕೆ ಹಂಚಿಕೊಂಡಿರುವ ವಿಜಯ್ ಕುಮಾರ್ ಕಿರಗಂದೂರು, ‘ಕೇಂದ್ರ ಸಚಿವ ಅನುರಾಗ ಠಾಕೂರ್ ಅವರೊಂದಿಗೆ ಬಹಳ ಅದ್ಭುತವಾದ ಮೀಟಿಂಗ್ನಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತು. ನಮ್ಮ ಸಂಸ್ಖತಿಯನ್ನು ಸಿನಿಮಾಗಳ ಮೂಲಕ ಸಾರುವ ಮತ್ತು ಭಾರತವನ್ನು ವಿಶ್ವದ ಸಿನಿಮಾ ಹಬ್ ಮಾಡುವ ವಿಷಯಗಳೂ ಸೇರಿದಂತೆ ಸಾಕಷ್ಟು ವಿಷಯಗಳನ್ನು ಅವರೊಂದಿಗೆ ಚರ್ಚಿಸಲಾಯಿತು’ ಎಂದು ಹೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರೊಂದಿಗೆ ಚೆಲುವೇ ಗೌಡ ಹಾಗೂ ಕಾರ್ತಿಕ್ ಗೌಡ ಸಹ ಹಾಜರಿದ್ದರು.

kantara 2

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *