Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಕಿಡ್ನ್ಯಾಪ್‌ ಕಥೆ ಕಟ್ಟಿದ್ಳು – ಬಾಲಕಿ ಮಾಸ್ಟರ್‌ಮೈಂಡ್‌ಗೆ ಪೊಲೀಸರೇ ಶಾಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಕಿಡ್ನ್ಯಾಪ್‌ ಕಥೆ ಕಟ್ಟಿದ್ಳು – ಬಾಲಕಿ ಮಾಸ್ಟರ್‌ಮೈಂಡ್‌ಗೆ ಪೊಲೀಸರೇ ಶಾಕ್‌

Districts

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಕಿಡ್ನ್ಯಾಪ್‌ ಕಥೆ ಕಟ್ಟಿದ್ಳು – ಬಾಲಕಿ ಮಾಸ್ಟರ್‌ಮೈಂಡ್‌ಗೆ ಪೊಲೀಸರೇ ಶಾಕ್‌

Public TV
Last updated: October 18, 2022 9:37 pm
Public TV
Share
2 Min Read
crim 1
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳೆ ದಾಂಡೇಲಿಯಲ್ಲಿ ಬೆಳ್ಳಂಬೆಳಗ್ಗೆ ಶಾಲೆಗೆ ಹೋದ ವಿದ್ಯಾರ್ಥಿನಿ ಕಾಣೆಯಾಗಿದ್ದು, ನಂತರ ಸಂಬಂಧಿಕರ ಮನೆಗೆ ಬಂದ ಬಾಲಕಿ ತನ್ನನ್ನು ಅಪಹರಣ ಮಾಡಿ ವ್ಯಾನಿನಲ್ಲಿ ಹೊತ್ತೊಯ್ದಿದ್ದರು. ನಾನು ತಪ್ಪಿಸಿಕೊಂಡು ಬಂದೆ ಎಂದು ಹೇಳುತ್ತಿದ್ದಂತೆ ಈ ಸುದ್ದಿ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೇ ನಗರ ಭಾಗದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಗುಸು-ಗುಸು ಹರಿದಾಡಿತ್ತು.

ನಂತರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ದಾಂಡೇಲಿ ಪೊಲೀಸರು ಕೊನೆಗೂ ಬೇಧಿಸುವಲ್ಲಿ ಯಶಸ್ವಿಯಾಗಿದ್ದು ಬಾಲಕಿ ಹೇಳಿದ ಕಥೆ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಇದನ್ನೂ ಓದಿ: ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ

POLICE JEEP

ಬಾಲಕಿ ಹೇಳಿದ್ದೇನು? ನಡೆದಿದ್ದು ಏನು?
ಪರೀಕ್ಷೆಗೆ ಭಯಪಟ್ಟ ವಿದ್ಯಾರ್ಥಿನಿಯೋರ್ವಳು ಅಪಹರಣದ ಕಥೆ ಹೆಣೆದು ಅದನ್ನು ಎಲ್ಲರಿಗೂ ನಂಬಿಸಿ ಬಿಟ್ಟಿದ್ದಾಳೆ. ಸೋಮವಾರದಿಂದ ದಸರಾ ರಜೆ ಮುಗಿದು ಸರ್ಕಾರಿ ಶಾಲೆಗಳು ಆರಂಭವಾಗಿವೆ. ಹಳೆದಾಂಡೇಲಿ ಭಾಗದ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ 12 ವರ್ಷದ ವಿದ್ಯಾರ್ಥಿನಿ ಶಾಲೆಗೆ ಹೋಗಲು ಮನಸ್ಸಿಲ್ಲದೆ, ಮುಂದೆ ನಡೆಯಲಿದ್ದ ಪರೀಕ್ಷೆಗೆ ಹೆದರಿ ಅಪಹರಣದ ಕಥೆಯನ್ನೇ ಕಟ್ಟಿ ಒಂದಿಷ್ಟು ಕಾಲ ಅವಾಂತರ ಸೃಷ್ಟಿಸಿದ್ದಾಳೆ.

crim

ಮನೆಯಿಂದ ಶಾಲಾ ಸಮವಸ್ತ್ರ ಧರಿಸಿ ಬಂದ ಈ ವಿದ್ಯಾರ್ಥಿನಿ ನೇರವಾಗಿ ಶಾಲೆಗೆ ಹೋಗದೇ ಕಿತ್ತೂರು ಚನ್ನಮ್ಮ ರಸ್ತೆಯವರೆಗೂ ಹೋಗಿ ಅಲ್ಲೇ ಪಕ್ಕದಲ್ಲೇ ಇರುವ ಮಿರಾಶಿ ಗಲ್ಲಿಯ ತನ್ನ ಅತ್ತೆಯ ಮನೆ ಸೇರಿಕೊಂಡಿದ್ದಾಳೆ. ಈ ಸಂದರ್ಭದಲ್ಲಿ ಆ ವಿದ್ಯಾರ್ಥಿನಿಯ ಅತ್ತೆಯ ಮನೆಯವರು ವಿಚಾರಿಸಿದಾಗ ತನ್ನನ್ನು ಮಾರುತಿ ವ್ಯಾನ್‍ನಲ್ಲಿ ಬಂದ ಯಾರೋ ಇಬ್ಬರು ಕಿಡ್ನ್ಯಾಪ್ ಮಾಡಿದ್ದರು. ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ವಾಹನವನ್ನು ನಿಲ್ಲಿಸಿದಾಗ ನಾನು ಅವರಿಂದ ತಪ್ಪಿಸಿಕೊಂಡು ಬಂದಿದ್ದೇನೆ ಎಂದು ಕಥೆಯನ್ನ ಕಟ್ಟಿದ್ದಾಳೆ.

ನಂತರ ಆ ವಿದ್ಯಾರ್ಥಿನಿಯ ಸಂಬಂಧಿಕರು ಈ ವಿಷಯವನ್ನು ಆಕೆಯ ಪಾಲಕರಿಗೆ ತಿಳಿಸಿದ್ದಾರೆ. ಪಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಲಕರು ಸಹ ತಮ್ಮ ಮಗಳ ಮಾತನ್ನು ನಂಬಿ ಅಪಹರಣಕಾರರು ಬಂದು ನಮ್ಮ ಮಗಳನ್ನು ಅಪಹರಿಸಿದ್ದಾರೆ ಎಂದು ಹೇಳಿದ್ದಾರೆ. ಅಪಹರಣದ ಈ ಸುದ್ದಿ ಕಾಡ್ಗಿಚ್ಚಿನಂತೆ ನಗರದ ತುಂಬಾ ದಾಂಡೇಲಿಯಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಹರಡಿದೆ. ಇದನ್ನೂ ಓದಿ: ನನ್ನನ್ನು ಪ್ಯಾಕೇಜ್ ಸ್ಟಾರ್ ಅನ್ನೋರಿಗೆ ಚಪ್ಪಲೀಲಿ ಹೊಡೀತೀನಿ: ಪವನ್ ಕಲ್ಯಾಣ್ ಆನ್ ಫೈಯರ್

ನಂತರ ಪೊಲೀಸರು ಕೂಡ ಘಟನೆಯ ಬಗ್ಗೆ ತಲೆಕೆಡಿಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯನ್ನು ಕರೆದುಕೊಂಡು ನೀನು ಯಾವ ದಾರಿಯಲ್ಲಿ ಹೋಗುತ್ತಿದ್ದೆ. ಎಲ್ಲಿಂದ ಕಿಡ್ನಾಪ್ ಮಾಡಿದರು ಎಂಬ ಮಾಹಿತಿಯನ್ನು ಪಡೆಯುತ್ತಾ ಹೋಗಿದ್ದಾರೆ. ಅಲ್ಲಿಯೂ ಆ ವಿದ್ಯಾರ್ಥಿನಿ ಅಪಹರಣವಾಯಿತೆಂಬುದನ್ನೇ ನಂಬಿಸುತ್ತಾ ಹೋಗಿದ್ದಾಳೆ.

ಸತ್ಯ ಗೊತ್ತಾಗಿದ್ದು ಹೇಗೆ?
ಆಕೆ ಹೋದ ಹಾಗೂ ನಿಂತ ಮತ್ತು ತಪ್ಪಿಸಿಕೊಂಡ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಆದರೆ ಯಾವ ಸಿಸಿ ಕ್ಯಾಮೆರಾಗಳಲ್ಲಿಯೂ ಕೂಡ ಆಕೆಯ ಚಲನವಲನಗಳಾಗಲಿ ಅಥವಾ ಮಾರುತಿ ವ್ಯಾನ್ ಆಗಲಿ ನಿಂತ ಬಗ್ಗೆ ಸುಳಿವು ಸಿಗಲಿಲ್ಲ. ಮತ್ತೆ, ಮತ್ತೆ ವಿದ್ಯಾರ್ಥಿನಿಯನ್ನು ಪ್ರಶ್ನಿಸಿದಾಗ ಆಕೆ ಅದೇ ಕತೆ ಹೇಳುತ್ತಿದ್ದಳು. ಹೀಗಾಗಿ ಪೊಲೀಸರಿಗೆ ಈ ಬಗ್ಗೆ ಅನುಮಾನ ವ್ಯಕ್ತವಾಗಿದೆ. ನಂತರ ಆಕೆಯನ್ನು ಪುಸಲಾಯಿಸಿ ಕೇಳಿದಾಗ ಆಕೆ ನಡೆದಿರುವ ಸತ್ಯವನ್ನು ಒಪ್ಪಿಕೊಂಡು ಶಾಲೆ ಆರಂಭವಾದ ದಿನ ಹಾಗೂ ಪರೀಕ್ಷೆಗೆ ಅಂಜಿ ತಾನು ಈ ರೀತಿ ಮಾಡಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾಳೆ. ಕೊನೆಗೂ ಈ ಅಪಹರಣದ ರಹಸ್ಯ ಹೊರಬಂದಿದ್ದು, ನಗರದಲ್ಲಿ ಹಬ್ಬಿದ್ದ ಮಕ್ಕಳ ಕಳ್ಳರ ವದಂತಿಗೆ ತೆರೆ ಬಿದ್ದಿದೆ.

Live Tv
[brid partner=56869869 player=32851 video=960834 autoplay=true]

TAGGED:karwarMaruti Vanpolicestudentthievesಕಳ್ಳರುಕಾರಾವಾರಪೊಲೀಸರುಮಾರುತಿ ವ್ಯಾನ್ವಿದ್ಯಾರ್ಥಿನಿ
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Public TV 14th Anniversary Public Warriors Champion
Bengaluru City

ಪಬ್ಲಿಕ್‌ ಟಿವಿ 14ನೇ ವಾರ್ಷಿಕೋತ್ಸವ – ಪಬ್ಲಿಕ್‌ ವಾರಿಯರ್ಸ್‌ ಚಾಂಪಿಯನ್‌

Public TV
By Public TV
59 seconds ago
Nirmala Sitharaman 1
Latest

75 ವರ್ಷಗಳ ಹಳೆಯ ಬಜೆಟ್ ಸಂಪ್ರದಾಯಕ್ಕೆ ಬ್ರೇಕ್ ಹಾಕ್ತಾರಾ ನಿರ್ಮಲಾ ಸೀತಾರಾಮನ್?

Public TV
By Public TV
9 minutes ago
Siddaramaiah 15
Districts

ಇಂದು ರಾಯಚೂರಿಗೆ ಸಿಎಂ – ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ

Public TV
By Public TV
19 minutes ago
Belagavi Liquor Seize
Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
By Public TV
38 minutes ago
pakistan army soldiers
Latest

ಬಲೂಚ್‌ ಬಂಡುಕೋರರ ದಾಳಿಗೆ 80ಕ್ಕೂ ಹೆಚ್ಚು ಪಾಕ್‌ ಸೈನಿಕರು ಸಾವು – 18 ಮಂದಿ ಒತ್ತೆಯಾಳು

Public TV
By Public TV
45 minutes ago
Hassan Suicide
Crime

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?