Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಸಾರ್ವಜನಿಕರ ಸಂಕಷ್ಟ ಕೇಳೋದು ನಮ್ಮ ಹೊಣೆ: ನಾರಾಯಣಸ್ವಾಮಿ

Public TV
Last updated: October 21, 2022 6:21 pm
Public TV
Share
3 Min Read
CHITRADURGA MEETING 1
SHARE

‌ಚಿತ್ರದುರ್ಗ: ರೈಲ್ವೆ ಅಂಡರ್ ಪಾಸ್‌ (Railway UnderPas), ಓವರ್ ಬ್ರಿಡ್ಜ್ ಗಳಲ್ಲಿ ಯಾವುದೇ ಕಾರಣಕ್ಕೂ ಮಳೆ ನೀರು (Rain Water) ಶೇಖರಣೆಯಾಗದ ರೀತಿ ಶಾಶ್ವತ ಪರಿಹಾರ ಕಾರ್ಯ ಕೈಗೊಳ್ಳುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

CHITRADURGA MEETING

ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲೆಯ ರೈಲ್ವೆ ಅಂಡರ್, ಓವರ್ ಬ್ರಿಡ್ಜ್ ಗಳ ಸಮಸ್ಯೆ ಕುರಿತು ಸಾರ್ವಜನಿಕರಿಂದ ಬಂದ ದೂರು, ಅಹವಾಲುಗಳಲ್ಲಿ ಪ್ರಸ್ತಾಪಿಸಿರುವ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಅಗತ್ಯತೆಗಳ ಪೂರೈಕೆಗೆ ಸಂಬಂಧಪಟ್ಟಂತೆ ರೈಲ್ವೆ ಇಲಾಖೆ ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿದ್ದರಿಂದ ರೈಲ್ವೆ ಅಂಡರ್ ಹಾಗೂ ಓವರ್ ಬ್ರಿಡ್ಜ್ ಗಳಲ್ಲಿ ಮಳೆ ನೀರು ಶೇಖರಣೆಯಾಗಿ ಸಾರ್ವಜನಿಕರ ಓಡಾಟಕ್ಕೆ, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ರೈಲ್ವೆ ಕೆಳ ಸೇತುವೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ಕೈಗೊಳ್ಳುವಂತೆ ಸೂಚನೆ ನೀಡಿದರೂ ಅಗತ್ಯ ಕ್ರಮಕೈಗೊಂಡಿಲ್ಲ.

CHITRADURGA 3 2

ಶಾಶ್ವತ ಪರಿಹಾರ ಕಾರ್ಯಕ್ಕಾಗಿ ಹೊಸದಾಗಿ ಸೆನ್ಸರ್ ಪಂಪ್ (ಸ್ವಯಂ ಚಾಲಿತ) ವ್ಯವಸ್ಥೆ ಅಳವಡಿಕೆಗೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು. ಹಿರೇಗುಂಟನೂರು, ಹಳಿಯೂರು ರಸ್ತೆ, ಮೆದೇಹಳ್ಳಿ ರಸ್ತೆ, ಗೋನೂರು-ಚಿತ್ರದುರ್ಗ ರೈಲ್ವೆ ಅಂಡರ್ ಬ್ರಿಡ್ಜ್‍ಗಳಲ್ಲಿ ಒಂದುವರೆ ಅಡಿ ಮಳೆ ನೀರು ನಿಂತಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಈ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತೀರಾ ಎಂದು ಸಚಿವರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ ಇಲಾಖೆ ಸಹಾಯಕ ವಿಭಾಗೀಯ ಅಭಿಯಂತರ ಸಮನ್ವಯಾಧಿಕಾರಿ ರವಿಚಂದ್ರನ್, ರೈಲ್ವೆ ಬ್ರಿಡ್ಜ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮವಹಿಸಲಾಗುತ್ತಿದೆ. ನೀರು ಹೊರಹಾಕಲು ಹೆಚ್ಚುವರಿ ಪಂಪ್ ಅವಳಡಿಸಿ, ನೀರು ನೀರು ಹಾಕಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

CHITRADURGA 3 1

ರೈಲ್ವೆ ಅಂಡರ್ ಬ್ರಿಡ್ಜ್ ಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ನೀರು ಶೇಖರಣೆಯಾಗಿರುವುದರಿಂದ ರಸ್ತೆಯು ಹಾಳಾಗಿದೆ. ಇದೇ ರೀತಿ ಜಿಲ್ಲೆಯ ಉಳಿದ ರೈಲ್ವೆ ಅಂಡರ್ ಬ್ರಿಡ್ಜ್ ಗಳ ಬಳಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯ ಮಾಡುವಂತೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ರೈಲ್ವೆ ಅಂಡರ್ ಬ್ರಿಡ್ಜ್ ಗಳಿಗೆ ರೈಲ್ವೆ, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಹಾಗೂ ನಗರಸಭೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ವೀಕ್ಷಣೆ ಮಾಡಿ, ಮಳೆ ನೀರು ಬಾರದಂತೆ ತಡೆಯುವುದರ ಬಗ್ಗೆ, ತಡೆಗೋಡೆ ನಿರ್ಮಾಣ ಗುರುತಿಸುವಿಕೆ ಹಾಗೂ ಶಾಶ್ವತ ಪರಿಹಾರಕ್ಕಾಗಿ ಸೆನ್ಸಾರ್ ಮೋಟಾರ್ ಪಂಪ್ ಅಳವಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: Made In India `ಅಗ್ನಿ ಪ್ರೈಮ್‌ʼ ಕ್ಷಿಪಣಿ ಪರೀಕ್ಷೆ ಯಶಸ್ವಿ- ದಾಳಿ ಸಾಮರ್ಥ್ಯ ಎಷ್ಟು?

CHITRADURGA 3 4

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗಕ್ಕೆ ಸಂಬಂಧಪಟ್ಟಂತೆ ತುಮಕೂರಿನಿಂದ ಶಿರಾವರೆಗೆ ಅವಾರ್ಡ್ ಬಾಕಿ ಇದೆ. ಇದಕ್ಕೆ ಬೇಕಾದ ಅನುದಾನವೂ ಲಭ್ಯವಿದೆ. ಶಿರಾದಿಂದ ಹಿರಿಯೂರು ತಲುಪವರೆಗೆ 8 ಕಿ.ಮೀ ಅವಾರ್ಡ್ ಆಗಿದೆ. ಇನ್ನೂ 12 ಕಿ.ಮೀ ಅವಾರ್ಡ್ ಆದರೆ ತುಮಕೂರು ಹಾಗೂ ಶಿರಾ ಟೆಂಡರ್ (Shira Tender) ಪ್ರಕ್ರಿಯೆ ನಡೆಯಲಿದೆ. ದಾವಣಗೆರೆಯಿಂದ ಭರಮಸಾಗರ ಗಡಿವರೆಗೂ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದೆ. ಭರಮಸಾಗರದಿಂದ ಸಿರಿಗೆರೆವರೆಗೂ ಅವಾರ್ಡ್ ಬಾಕಿ ಇದೆ. ಇದು ಮುಕ್ತಾಯವಾದ ನಂತರ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಚಿತ್ರದುರ್ಗದಿಂದ ಸಿರಾವರೆಗೆ ಇನ್ನೂ ರೂ.100 ಕೋಟಿ ಅನುದಾನದ ಅವಶ್ಯಕತೆ ಇರುವುದಿರಂದ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ತುಮಕೂರು ಹಾಗೂ ದಾವಣಗೆರೆ ಎರಡು ಕಡೆಗಳಿಂದಲೂ ಕಾಮಗಾರಿ ಪ್ರಾರಂಭ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

CHITRADURGA 3 3

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ರೈಲ್ವೆ ಅಂಡರ್ ಹಾಗೂ ಓವರ್ ಬ್ರಿಡ್ಜ್‍ಗಳಿಗೆ ಕೇವಲ ಮಳೆ ನೀರು ನಿಂತಾಗ ಮಾತ್ರವಲ್ಲದೇ, ನಿಯಮಿತವಾಗಿ ವೀಕ್ಷಣೆ ಮಾಡಿ ಸಾರ್ವಜನಿಕರಿಗೆ ಸಂಚಾರ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಚಿತ್ರದುರ್ಗ ನಗರದ ಎಪಿಎಂಸಿ (APMC)ಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಕೈಗೊಂಡಿರುವ ಕಾಮಗಾರಿ ಬಹಳ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಸೂಕ್ತ ಮಾರ್ಗದರ್ಶನ ನೀಡಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಹುಬ್ಬಳಿಯ ನೈರುತ್ಯ ರೈಲ್ವೆ ಇಲಾಖೆ ಮುಖ್ಯ ಯೋಜನಾ ನಿರ್ದೇಶಕ ವಿಜಯ್ ಕಿಟಕಿ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್, ವಿಭಾಗೀಯ ಅಭಿಯಂತರ ಸಮನ್ವಯಾಧಿಕಾರಿ ರವಿಚಂದ್ರನ್, ವಿಭಾಗೀಯ ಅಭಿಯಂತರ ರೋಹನ್ ಡೋಂಗ್ರೆ, ಸಹಾಯಕ ವಿಭಾಗೀಯ ಅಭಿಯಂತರ ಶುಭಂ ಶರ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Live Tv
[brid partner=56869869 player=32851 video=960834 autoplay=true]

TAGGED:Chitradurgarailway underpassrain waterಚಿತ್ರದುರ್ಗಮಳೆ ನೀರುರೈಲ್ವೇ ಅಂಡರ್ ಪಾಸ್
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
17 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
20 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 day ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

Sunil Gavaskar Virat Kohli
Cricket

ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ ವಿರುದ್ಧ ಗವಾಸ್ಕರ್ ಗರಂ

Public TV
By Public TV
2 minutes ago
CRIME
Bengaluru City

Bengaluru | ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ

Public TV
By Public TV
42 minutes ago
special RCB victory parade in Bengaluru on Wednesday
Bengaluru City

ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

Public TV
By Public TV
48 minutes ago
Josh Hazlewood
Cricket

IPL 2025 – ಫೈನಲ್ ಪಂದ್ಯದ ‘ಲಕ್ಕಿ ಕ್ರಿಕೆಟರ್’ ಹೇಜಲ್‌ವುಡ್

Public TV
By Public TV
1 hour ago
Krunal Pandya 1
Cricket

ಪಂದ್ಯಶ್ರೇಷ್ಠ ಗೆದ್ದು ಐಪಿಎಲ್‌ನಲ್ಲಿ ದಾಖಲೆ ಬರೆದ ಕೃನಾಲ್‌!

Public TV
By Public TV
1 hour ago
Rajat Patidar
Cricket

UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?