Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದೀಪಾವಳಿ ಹಬ್ಬದಂದೇ ಸೂರ್ಯಗ್ರಹಣ- ಬೆಂಗಳೂರಿನ ದೇಗುಲಗಳು ಬಂದ್

Public TV
Last updated: October 23, 2022 8:15 am
Public TV
Share
2 Min Read
SOLAR ECLIPSE 1
SHARE

ಬೆಂಗಳೂರು: ರಾಜ್ಯಾದ್ಯಂತ ದೀಪಾವಳಿ (Deepavali) ಸಂಭ್ರಮ ಮನೆ ಮಾಡ್ತಿದೆ. ಕೊರೋನಾ (Corona Virus) ಬಳಿಕ ಅದ್ಧೂರಿಯಾಗಿ ಹಬ್ಬ ಆಚರಿಸಲು ಜನ ಸಜ್ಜಾಗಿದೆ. ಆದರೆ ದೀಪಾವಳಿ ಅಮಾವಾಸ್ಯೆಯ ಅಕ್ಟೋಬರ್ 25ರಂದೇ ಸೂರ್ಯ ಗ್ರಹಣ ಸಂಭವಿಸ್ತಿದೆ.

SOLAR ECLIPSE 4

ಮಂಗಳವಾರ ಸಂಜೆ ಭಾಗಶಃ ಸೂರ್ಯಗ್ರಹಣ (Solar Eclipse) ಗೋಚರವಾಗಲಿದೆ. 3 ವರ್ಷಗಳ ಬಳಿಕ ಗೋಚರವಾಗುವ ಈ ಪಾರ್ಶ್ವ ಸೂರ್ಯಗ್ರಹಣದ ಕೌತುಕವನ್ನ ಕಣ್ತುಂಬಿಕೊಳ್ಳಲು ಇಡೀ ದೇಶದ ಜನ ಕಾತುರದಿಂದ ಕಾಯುತ್ತಿದ್ದಾರೆ. ಕಾರ್ತಿಕ ಅಮಾವಾಸೆಯಂದೇ ಸೂರ್ಯಗ್ರಹಣ ಸಂಭವಿಸುತ್ತಿದ್ದು, ಇದರಿಂದ ದೀಪಾವಳಿ ಹಬ್ಬದ ವಿಶೇಷ ದಿನಗಳಲ್ಲಿ ದೇವಸ್ಥಾನಗಳು ಬಾಗಿಲು ಹಾಕಬೇಕಾದ ಪರಿಸ್ಥಿತಿ ಬಂದಿದೆ.

SOLAR ECLIPSE 6

ಬೆಂಗಳೂರಿನ ಪ್ರಮುಖ ದೇವಾಲಯಗಳು ಗ್ರಹಣ ಸಂದರ್ಭದಲ್ಲಿ ಬಂದ್ ಆಗಲಿದ್ದು, ದರ್ಶನದ ಅವಧಿಯಲ್ಲೂ ಬದಲಾವಣೆಯಾಗಲಿದೆ. ಶನೇಶ್ವರ ದೇಗುಲ ಮಾತ್ರ ಗ್ರಹಣದ ಸಂದರ್ಭದಲ್ಲಿ ತೆರೆದಿರಲಿದ್ದು, ನಿರಂತರ ಪೂಜೆ ಪುನಸ್ಕಾರ ನಡೆಯಲಿದೆ. ಬರೋಬ್ಬರಿ 27 ವರ್ಷದ ಬಳಿಕ ಅಂದ್ರೆ 1995ರ ಬಳಿಕ ಮತ್ತೆ ದೀಪಾವಳಿ ಹಬ್ಬದಂದೂ ಸೂರ್ಯನಿಗೆ ಗ್ರಹಣ ಹಿಡಿಯುತ್ತಿದೆ. ಹಬ್ಬದ ಸಂಭ್ರಮದಲ್ಲೇ ಗ್ರಹಣದ ಕಾರ್ಮೋಡ ಆವರಿಸಿರೋದ್ರಿಂದ ಜನರಿಗೂ ಕೊಂಚ ಭಯ. ಶುಭ-ಅಶುಭದ ಲೆಕ್ಕಾಚಾರ ಶುರುವಾಗಿದ್ದು, ಜನ ದೇಗುಲಗಳಲ್ಲಿ ಶಾಂತಿ ಹೋಮಕ್ಕಾಗಿ ಮುಗಿಬಿದ್ದಿದ್ದಾರೆ. ಗ್ರಹಣ ಮೋಕ್ಷವಾದ ಬಳಿಕ ಮಂಗಳವಾರವೇ ಹಲವಾರು ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ ಇದ್ರೆ, ಕೆಲವು ದೇಗುಲದಲ್ಲಿ ಬುಧವಾರ ಇರಲಿದೆ. ದೇಗುಲಗಳಲ್ಲಿ ಶಾಂತಿಹೋಮದ ಪೂಜೆಗಳಿಗೆ ಬುಕ್ಕಿಂಗ್ ಜೋರಾಗಿದೆ.

SOLAR ECLIPSE 1

ವೈಜ್ಞಾನಿಕವಾಗಿ ಗ್ರಹಣ ವೀಕ್ಷಣೆಗೂ ಜನ ಕಾಯ್ತಿದ್ದಾರೆ. ಬೆಂಗಳೂರಿನ ನೆಹರು ತಾರಾಲಯದಲ್ಲಿ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. 3 ವರ್ಷಗಳ ಬಳಿಕ ಅಕ್ಟೋಬರ್ 25ರ ಸಂಜೆ ಪಾಶ್ರ್ವ ಸೂರ್ಯಗ್ರಹಣ ಗೋಚರವಾಗ್ತಿದೆ. ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ಸೂರ್ಯಗ್ರಹಣ ಉತ್ತಮ ರೀತಿಯಲ್ಲಿ ಗೋಚರಿಸಲಿದ್ರೆ, ಪೂರ್ವ ಭಾಗಗಳಲ್ಲಿ ಸೂರ್ಯಾಸ್ತದ ವೇಳೆ, ಈಶಾನ್ಯ ಭಾಗಗಳಲ್ಲಿ ಸೂರ್ಯಾಸ್ತದ ಬಳಿಕ ಗ್ರಹಣ ಸಂಭವಿಸುತ್ತದೆ. ಇದನ್ನೂ ಓದಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ನಾಣ್ಯದಿಂದ ತುಲಾಭಾರ

SOLAR ECLIPSE 5

ಗ್ರಹಣದ ವೇಳೆ ಸೂರ್ಯಕಿರಣಗಳು ಕಣ್ಣುಗಳಿಗೆ ಅಪಾಯಕಾರಿ ಆಗಿರೋದ್ರಿಂದ ಗ್ರಹಣ ನೋಡಲು ಇಚ್ಛಿಸುವವರು ಮುಂಜಾಗ್ರತೆ ತೆಗೆದುಕೊಳ್ಳಬೇಕು ಎಂದು ಖಗೋಳ ಶಾಸ್ತ್ರಜ್ಞರು ಸಲಹೆ ನೀಡಿದ್ದಾರೆ. ನೆಹರು ತಾರಾಲಯ ನಗರದ ಮಧ್ಯ ಭಾಗದಲ್ಲಿರುವುದರಿಂದ ಗ್ರಹಣ ವೀಕ್ಷಣೆ ಸ್ವಲ್ಪ ಕಷ್ಟಸಾಧ್ಯ. ಹೀಗಾಗಿ ಯೂಟ್ಯೂಬ್ ಮೂಲಕ ವೀಕ್ಷಣೆ ಮಾಡಬಹುದು. ಬೆಂಗಳೂರು ಹೊರತು ಪಡಿಸಿ ಜಮ್ಮು ಕಾಶ್ಮೀರದಲ್ಲಿ 55%, ಲೇಹ್ ಲಡಾಖ್‍ನಲ್ಲಿ 54%ರಷ್ಟು ಸೂರ್ಯ ಗ್ರಹಣ ಗೋಚರವಾಗಲಿದೆ. ಭಾರತ ಮಾತ್ರ ಅಲ್ಲದೆ, ಯುರೋಪ್, ಉತ್ತರ ಆಫ್ರಿಕಾ, ಮಧ್ಯ ಪ್ರಾಚ್ಯ ಮತ್ತು ಏಷ್ಯಾದ ಇತರ ಭಾಗಗಳಲ್ಲಿ ಸಹ ಗ್ರಹಣ ಗೋಚರಿಸಲಿದೆ. ರಷ್ಯಾದ ಉಗಾರದಲ್ಲಿ ಶೇಕಡಾ 85% ರಷ್ಟು ಅಂದ್ರೆ ಅತಿ ಹೆಚ್ಚು ಪ್ರಮಾಣದಲ್ಲಿ ಸೂರ್ಯ ಗ್ರಹಣ ಗೋಚರವಾಗಲಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruDeepavalisolar eclipsetempleದೀಪಾವಳಿದೇಗುಲಬೆಂಗಳೂರುಸೂರ್ಯಗ್ರಹಣ
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
38 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
53 minutes ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
57 minutes ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
1 hour ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
1 hour ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?