Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ನಿಧನ

Public TV
Last updated: October 23, 2022 9:28 am
Public TV
Share
3 Min Read
SURESH UMESH ANAND
SHARE

– ಕೊನೆಗೂ ಈಡೇರಲಿಲ್ಲ ಮಾಮನಿ ಕನಸು
– ಐತಿಹಾಸಿಕ ಕಿತ್ತೂರು ಉತ್ಸವ ಮೇಲೆ ಸೂತಕದ ಛಾಯೆ

ಬೆಳಗಾವಿ: ಒಂದೂವರೆ ವರ್ಷದ ಅವಧಿಯಲ್ಲಿ ಬೆಳಗಾವಿಯ ಮೂವರು ಪ್ರಭಾವಿ ಬಿಜೆಪಿ (BJP) ನಾಯಕರ ಅಕಾಲಿಕವಾಗಿ ನಿಧನರಾಗಿದ್ದು ಚುನಾವಣೆ ವರ್ಷದಲ್ಲೇ ಬೆಳಗಾವಿ (Belagavi) ಜಿಲ್ಲಾ ಬಿಜೆಪಿಗೆ ದೊಡ್ಡ ಆಘಾತವೇ ಎದುರಾಗಿದ್ದು ಒಂದೆಡೆಯಾದರೆ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಐತಿಹಾಸಿಕ ಕಿತ್ತೂರು ಉತ್ಸವ (Kittur Utsav) ದ ಮೇಲೆ ಸೂತಕದ ಛಾಯೆ ಬಿದ್ದಿದೆ.

Contents
– ಕೊನೆಗೂ ಈಡೇರಲಿಲ್ಲ ಮಾಮನಿ ಕನಸು – ಐತಿಹಾಸಿಕ ಕಿತ್ತೂರು ಉತ್ಸವ ಮೇಲೆ ಸೂತಕದ ಛಾಯೆLive Tv

Suresh Angadi 2

ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ವಿಧಿವಶರಾಗಿದ್ದಾರೆ. ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಿದ್ದ ದಿ. ಕೇಂದ್ರ ಸಚಿವ ಸುರೇಶ್ ಅಂಗಡಿ (Suresh Angadi), ಅರಣ್ಯ ಸಚಿವ ಉಮೇಶ್ ಕತ್ತಿ (Umesh Katti) ಬಳಿಕ ಈಗ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ (Anand Mamani) ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿ (Corona Virus) ಗೆ ತುತ್ತಾಗಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಿಸದೇ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ಸಾವನ್ನಪ್ಪಿದರು. ಇದೀಗ ಲೀವರ್ (Liver Problem) ಸಮಸ್ಯೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಕೂಡ ಚಿಕಿತ್ಸೆ ಫಲಿಸದೇ ನಿನ್ನೆ ನಿಧನರಾಗಿದ್ದಾರೆ. ಚುನಾವಣೆ ವರ್ಷ ಇದ್ದಂತಹ ಸಂದರ್ಭದಲ್ಲಿ ಮೂವರು ಬಿಜೆಪಿ ಪ್ರಭಾವಿ ನಾಯಕರು ಸಾವು ಬಿಜೆಪಿಗೆ ಬರಸಿಡಿಲು ಬಡಿದಂತಾಗಿದೆ.

AANAND MAMANI

ಡೆಪ್ಯೂಟಿ ಸ್ಪೀಕರ್ (Deputy Speaker) ಆಗಿದ್ದಾಗಲೇ ಅಂದು ತಂದೆ, ಇಂದು ಪುತ್ರ ಸಾವು: ಬೆಳಗಾವಿ ಜಿಲ್ಲೆಯ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಅವರ ತಂದೆ ಚಂದ್ರಶೇಖರ ಮಾಮನಿ ಸಹ ಡೆಪ್ಯುಟಿ ಸ್ಪೀಕರ್ ಆಗಿದ್ದಾಗಲೇ ಮೃತಪಟ್ಟಿದ್ರು. 1995-1999 ಅವಧಿಯಲ್ಲಿ ಉಪಸಭಾಧ್ಯಕ್ಷ ಸ್ಥಾನ ನಿಭಾಯಿಸಿದ್ದಾಗ ಸಾವನ್ನಪ್ಪಿದ್ದರು. ಇದೀಗ ಅದೇ ಗತ್ತಿನಲ್ಲೇ ಉಪಸಭಾಧ್ಯಕ್ಷನ ಹುದ್ದೆ ನಿಭಾಯಿಸುತ್ತಿದ್ದ ಆನಂದ ಮಾಮನಿ ಕೂಡ ಉಪಸಭಾಧ್ಯಕ್ಷರಾಗಿದ್ದಾಗಲೇ ಕಾಕತಾಳೀಯ ಎಂಬಂತೆ ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ ವಿಧಿವಶ

AMBULANCE 1

ಕೊನೆಗೂ ಈಡೇರಲಿಲ್ಲ ಸಚಿವರಾಗಬೇಕೆಂಬ ಕನಸು: ಬೆಳಗಾವಿ ಜಿಲ್ಲೆಯ ಹಿರಿಯ ಲಿಂಗಾಯತ ಪಂಚಮಸಾಲಿ ನಾಯಕರಾಗಿದ್ದ ಆನಂದ ಮಾಮನಿ ಅವರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ಬಿಎಸ್‍ವೈ ಸಿಎಂ ಆಗಿದ್ದಾಗಲೇ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಅವರಿಗೆ ಡೆಪ್ಯೂಟಿ ಸ್ಪೀಕರ್ ಹುದ್ದೆ ನೀಡಿ ಹಿಂದಿನ ಮುಖ್ಯಮಂತ್ರಿ ಬಿಎಸ್‍ವೈ ಸಮಾಧಾನಪಡಿಸಿದ್ದರು. ಇದೀಗ ಬಸವರಾಜ ಬೊಮ್ಮಾಯಿ (Basavaraj Bommai) ಸಿಎಂ ಆಗಿದ್ದಾಗಲೂ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಆನಂದ ಮಾಮನಿ ಮಂತ್ರಿ ಸ್ಥಾನ ಕೊಡದಿದ್ರೆ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಾರಿಯೂ ಆನಂದ ಮಾಮನಿ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಮನವೊಲಿಸಿದ್ದರು. ಇದನ್ನೂ ಓದಿ: ಶೀಘ್ರದಲ್ಲೇ ಜನಸೇವೆಗೆ ಬರುತ್ತೇನೆ- ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಮಾಮನಿ!

BASAVARAJ BOMMAI 3

ಐತಿಹಾಸಿಕ ಕಿತ್ತೂರು ಉತ್ಸವ ಮೇಲೆ ಸೂತಕದ ಛಾಯೆ: ಸವದತ್ತಿ ಬಿಜೆಪಿ ಶಾಸಕ, ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ(56) ನಿಧನ ಹಿನ್ನೆಲೆ ಐತಿಹಾಸಿಕ ಕಿತ್ತೂರು ಉತ್ಸವ ಮೇಲೆ ಸೂತಕದ ಕರಿಛಾಯೆ ಬಿದ್ದಿದೆ. ಐತಿಹಾಸಿಕ ಕಿತ್ತೂರು ಉತ್ಸವ ರದ್ದಾಗುತ್ತಾ? ಮುಂದೂಡಲಾಗುತ್ತಾ? ಎಂಬ ರಾಜ್ಯ ಸರ್ಕಾರದ ನಿರ್ಧಾರಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ. ಇದೇ ಮೊದಲ ಬಾರಿಗೆ ಇಂದಿನಿಂದ ಮೂರು ದಿನಗಳ ಕಾಲ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಅದರಂತೆ ಇಂದು ಸಂಜೆ ನಡೆಯುವ ಕಿತ್ತೂರು ಉತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದರು. ಮೂರು ದಿನಗಳ ಕಾಲ ನಡೆಯುವ ಉತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಬೆಳಗಾವಿ ಜಿಲ್ಲೆ ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ ಹಿನ್ನೆಲೆ ಕಿತ್ತೂರು ಉತ್ಸವ ಆಚರಣೆ ಬಗ್ಗೆ ರಾಜ್ಯ ಸರ್ಕಾರದ ನಿರ್ಧಾರಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:Anand mamanibelagaviitturu utsavsuresh angadiumesh kattiಉಮೇಶ್ ಕತ್ತಿಕಿತ್ತೂರು ಉತ್ಸವ. ಆನಂದ ಮಾಮನಿಬೆಳಗಾವಿಸುರೇಶ್ ಅಂಗಡಿ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
18 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
21 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
3 minutes ago
BY Vijayendra
Bengaluru City

ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

Public TV
By Public TV
6 minutes ago
BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
47 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
1 hour ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
2 hours ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?