ಹನಿಟ್ರ‍್ಯಾಪ್‌ಗೆ ಬಲಿಯಾದ್ರಾ ಬಂಡೇ ಮಠದ ಬಸವಲಿಂಗ ಶ್ರೀ?

Public TV
2 Min Read
NELAMANGALA SWAMIJI

ರಾಮನಗರ: ಮಾಗಡಿ ತಾಲೂಕಿನ ಕಂಚುಗಲ್ ಮಠದ ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಶ್ರೀಗಳ ಮೊಬೈಲ್ ಕಾಲ್ ಹಾಗೂ ಡೆತ್‌ನೋಟ್ (Death Note) ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಉಲ್ಲೇಖ ಆಗಿರುವ ಕೆಲ ಅಂಶಗಳು ಹನಿಟ್ರ‍್ಯಾಪ್ (Honeytrap) ಸುಳಿವು ನೀಡಿದ್ದು, ಇನ್ನು 2-3 ದಿನಗಳಲ್ಲಿ ಶ್ರೀಗಳ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.

ರಾಜ್ಯದಲ್ಲಿ ಕೆಲ ಸ್ವಾಮೀಜಿಗಳು ಹನಿಟ್ರ‍್ಯಾಪ್ ಜಾಲಕ್ಕೆ ಒಳಗಾಗಿದ್ದು, ಮುರುಘಾ ಶ್ರೀಗಳ ಪ್ರಕರಣದ ಬಳಿಕ ಈ ಜಾಲ ಇನ್ನಷ್ಟು ವಿಸ್ತಾರಗೊಂಡಿದೆ ಎನ್ನುವುದು ಖಾತ್ರಿಯಾಗಿದೆ. 6-7 ತಿಂಗಳ ಹಿಂದೆ ಮಾಗಡಿಯ ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ ಮೃತದೇಹ ಸಹ ಕಿಟಕಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಬಂಡೇ ಮಠದ ಸ್ವಾಮೀಜಿ ಸಹ ಅದೇ ಮಾದರಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿಯ ಆತ್ಮಹತ್ಯೆ ಸಂಬಂಧ ಇಡೀ ಪ್ರಕರಣಕ್ಕೆ ರೋಚಕ ತಿರುವು ನೀಡಿರುವುದು ಡೇತ್‌ನೋಟ್. ಡೆತ್‌ನೋಟ್‌ನಲ್ಲಿ ಉಲ್ಲೇಖ ಆಗಿರುವ ಕೆಲ ಅಂಶಗಳು ಪ್ರಕರಣದ ದಿಕ್ಕನ್ನು ಬದಲಿಸಿವೆ.

Bande Mutt Swamiji Suicide 1

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಡೇತ್‌ನೋಟ್ ಕೂಡಾ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ನಾನು ಮಠದ ಉತ್ತರಾಧಿಕಾರಿಯಾದ ಬಳಿಕ ಯಾವುದೇ ಹಗರಣವನ್ನು ಮಾಡಿಲ್ಲ. ಸಿದ್ದಗಂಗಾ ಮಠಕ್ಕೆ ನಂಬುಗೆಯಿಂದಲೇ ಕೆಲಸ ಮಾಡಿದ್ದೇನೆ. ಆದರೆ ಕೆಲವರು ಇತ್ತೀಚೆಗೆ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಮಹಿಳೆಯೊಬ್ಬಳು 6-7 ತಿಂಗಳಿನಿಂದ ನನಗೆ ಕರೆ ಮಾಡಿ ಹಿಂಸೆ ನೀಡುತ್ತಿದ್ದಳು ಎಂಬ ಮಾಹಿತಿ ವೈರಲ್ ಆಗಿರುವ ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ಆದರೆ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಡೆತ್‌ನೋಟ್ ನಿಜವಾದುದಲ್ಲ, ಕೇವಲ 1-2 ಅಂಶಗಳು ಸಾಮ್ಯತೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಕೋಮು ಘರ್ಷಣೆ, ಪೊಲೀಸರ ಮೇಲೂ ಪೆಟ್ರೋಲ್ ಬಾಂಬ್ ದಾಳಿ- 19 ಮಂದಿ ವಶ

ಒಂದೆಡೆ ಹನಿಟ್ರ‍್ಯಾಪ್ ಶಂಕೆ ವ್ಯಕ್ತವಾಗುತ್ತಿದ್ದರೆ ಮತ್ತೊಂದೆಡೆ ಡೆತ್‌ನೋಟ್‌ನಲ್ಲಿ ಕೆಲವರ ಹೆಸರುಗಳನ್ನು ಉಲ್ಲೆಖ ಮಾಡಲಾಗಿದೆ. ಆದರೆ ಅವರು ಸಾವಿಗೆ ಕಾರಣ ಎಂದು ಬರೆದಿಲ್ಲ. ಒಬ್ಬ ಅನಾಮಧೇಯ ಹೆಸರನ್ನು ಸ್ಪಷ್ಟವಾಗಿ ಉಲ್ಲೆಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ. ಪ್ರಕರಣ ಸಂಬಂಧ 306 ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸದ್ಯ ತನಿಖೆ ಪ್ರಗತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ತಿಳಿಸಿದ್ದಾರೆ.

Bande Mutt Swamiji Suicide

ಒಟ್ಟಾರೆ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣದಲ್ಲಿ ಡೆತ್‌ನೋಟ್‌ನ ಕೆಲ ಅಂಶಗಳನ್ನು ತನಿಖೆಯ ದಿಕ್ಕನ್ನೇ ಬದಲಿಸಿವೆ. ಒಂದೆಡೆ ಹನಿಟ್ರ‍್ಯಾಪ್ ಶಂಕೆ ವ್ಯಕ್ತವಾಗಿದ್ರೆ, ಮತ್ತೊಂದೆಡೆ ಮಠದ ಅಧಿಕಾರ ಹಿಡಿಯಲು ಕೆಲವರು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದೆ. ತನಿಖೆಯ ಬಳಿಕವಷ್ಟೇ ಸತ್ಯಾಸತ್ಯತೆ ಹೊರಬೀಳಬೇಕಿದೆ. ಇದನ್ನೂ ಓದಿ: ಇಶಾ ಫೌಂಡೇಶನ್ ನಲ್ಲಿ ಪ್ರದರ್ಶನ ಕಂಡ ಕನ್ನಡದ ಮೊದಲ ಸಿನಿಮಾ ಕಾಂತಾರ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *