ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೇಳಿದ್ದ ಬೆನ್ನಲ್ಲೇ ಇದೀಗ ಕನಕದಾಸ ಜಯಂತಿಗೂ ಮನವಿ

Public TV
1 Min Read
Idgah maidan in Hubballi 1

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ (Idga Maidan) ಟಿಪ್ಪು ಜಯಂತಿಯನ್ನು (Tipu Jayanti) ಆಚರಿಸಲು ಅವಕಾಶ ಕೇಳಿದ್ದ ಬೆನ್ನಲ್ಲೇ ಇದೀಗ ಕನಕದಾಸ ಜಯಂತಿ (Kanakadasa Jayanthi) ಆಚರಣೆಗೂ ಮನವಿ ಸಲ್ಲಿಕೆಯಾಗಿದೆ.

ಭಾನುವಾರ ಹುಬ್ಬಳ್ಳಿಯ (Hubballi) ವಿವಿಧ ಸಂಘಟನೆಗಳ ಹೋರಾಟಗಾರರು, ಇದೇ 10ರಂದು ನಡೆಯಲಿರುವ ಟಿಪ್ಪು ಜಯಂತಿಯನ್ನು ಹುಬ್ಬಳ್ಳಿಯ ಈದ್ಗಾ ಮೈದಾನಲ್ಲಿ ಆಚರಿಸಲು ಅವಕಾಶವನ್ನು ನೀಡಬೇಕು ಎಂದು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದರು.

tippu

ಈ ಹೋರಾಟವನ್ನು ಎಐಎಂಐಎಂ (AIMIM) ಸಂಘಟನೆ ಹಾಗೂ ಸಮತಾ ಸೈನಿಕ ದಳ ಸಂಘಟನೆಗಳ ಕಾರ್ಯಕರ್ತರು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಒಂದು ವೇಳೆ ಅನುಮತಿ ನೀಡದಿದ್ದಲ್ಲಿ ಬಲವಂತವಾಗಿ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಪಾಲಿಕೆ ಹಾಗೂ ಸರ್ಕಾರಕ್ಕೆ ಸಂಘಟನೆಗಳ ಹೋರಾಟಗಾರರು ಎಚ್ಚರಿಕೆ ನೀಡಿದ್ದರು.

ಇದಕ್ಕೆ ಶ್ರೀರಾಮ ಸೇನೆ (Sri Rama Sene) ಕಾರ್ಯಕರ್ತರು ಠಕ್ಕರ್ ನೀಡಿದ್ದು, ಇದೇ ತಿಂಗಳ 11 ರಂದು ನಡೆಯುವ ಕನಕದಾಸರ ಜಯಂತಿಯನ್ನು ಈದ್ಗಾ ಮೈದಾನದಲ್ಲಿ ಅದ್ಧೂರಿಯಾಗಿ ಆಚರಿಸಲು ಅನುಮತಿ ನೀಡಿ ಎಂದು ಹುಬ್ಬಳ್ಳಿ, ಧಾರವಾಡ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರಿಂದ ರಾಷ್ಟ್ರಪತಿಯವರ ಪದಕ ಪ್ರದಾನ

Tipu Kanakadas

ಗಣೇಶೋತ್ಸವ ಆಚರಣೆಗೆ ಈದ್ಗಾ ಮೈದಾನ ನೀಡಿದ ಹಿನ್ನಲೆಯಲ್ಲಿ ಟಿಪ್ಪು ಜಯಂತಿಗೂ ಅವಕಾಶ ಕೇಳಿದ್ದು, ಇದೀಗ ಕನಕದಾಸ ಜಯಂತಿಗೂ ಈದ್ಗಾ ಮೈದಾನ ನೀಡಿ ಎಂದು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನ ಪ್ರತಿಷ್ಠೆಯ ಕಣವಾಗಿದ್ದು, ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ಗೊಂದಲಕ್ಕೆ ಸಿಲುಕಿದೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ : ಶ್ರೀರಾಮಸೇನೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *