Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ: ಕುಮಾರಸ್ವಾಮಿ

Bengaluru City

ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ: ಕುಮಾರಸ್ವಾಮಿ

Public TV
Last updated: November 18, 2022 3:18 pm
Public TV
Share
3 Min Read
KUMARASWAMY
SHARE

ಬೆಂಗಳೂರು: ದಕ್ಷಿಣ ಪಿನಾಕಿನಿ (Pennar) ನದಿ ನೀರಿನ ವಿಷಯದಲ್ಲಿ ಕೇಂದ್ರದ ಬಿಜೆಪಿ (BJP) ಸರ್ಕಾರ ಕನ್ನಡಿಗರ (Kannadigas) ಹಕ್ಕು ಕಸಿದು ಕಿರುಕುಳ ನೀಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ. ಇದನ್ನು ರಾಜ್ಯ ಬಿಜೆಪಿ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು ಎಂದು ಒತ್ತಾಯಿಸಿದ್ದಾರೆ.

HD KUMARASWAMY

ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ ಎನ್ನುವುದು ಪದೇಪದೇ ರುಜುವಾತಾಗುತ್ತಿದೆ. ನೆಲ, ಜಲ, ಭಾಷೆ ವಿಚಾರದಲ್ಲಿ ಅವು ಕನ್ನಡಿಗರನ್ನು ಕಾಡುತ್ತಲೇ ಇವೆ ಎಂದು ಟೀಕಿಸಿದ್ದಾರೆ.

ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

HDKUMARASWAMY

ರಾಜಕೀಯ ಕಾರಣಕ್ಕಾಗಿ ದಕ್ಷಿಣ ಪಿನಾಕಿನಿ ನದಿ ನೀರಿನ ಹಕ್ಕನ್ನು ಕರ್ನಾಟಕದಿಂದ ಕಸಿಯಲು ಕೇಂದ್ರ ಹವಣಿಸುತ್ತಿದೆ. ಕಾವೇರಿ, ಕೃಷ್ಣಾ, ಮಹದಾಯಿ ಸೇರಿ ವಿವಿಧ ಜಲ ವಿವಾದಗಳಲ್ಲಿ ಕರ್ನಾಟಕವನ್ನು ಕಾಡಿದಂತೆ, ವಿವಾದವೇ ಅಲ್ಲದ ದಕ್ಷಿಣ ಪಿನಾಕಿನಿಯನ್ನೂ ವಿವಾದದ ಕೂಪಕ್ಕೆ ತಳ್ಳಿ ಕನ್ನಡಿಗರನ್ನು ಕಾಡುವ ಹವಣಿಕೆ ಇದಷ್ಟೇ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಜನರ ಮುಂದೆ ಏಕೆ ರಾಜಕೀಯವಾಗಿ ಬೆತ್ತಲಾಗ್ತೀರಿ – ಕಾಂಗ್ರೆಸ್‌ಗೆ ಸುಧಾಕರ್ ತಿರುಗೇಟು

ರಾಜಕೀಯ ಲಾಭದ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವು ನೆಲ, ಜಲ, ಭಾಷೆಯಂತಹ ವಿಷಯಗಳನ್ನು ಇಟ್ಟುಕೊಂಡು ದಕ್ಷಿಣ ರಾಜ್ಯಗಳ ನಡುವೆ ಜಗಳ ಹಚ್ಚಲು ಷಡ್ಯಂತ್ರ ನಡೆಸಿದೆ. ರಾಜ್ಯದ ವಿರೋಧವಿದ್ದರೂ ಕೇಂದ್ರವು ನ್ಯಾಯಾಧಿಕರಣ ರಚನೆ ಮಾಡಲು ಹೊರಟಿದೆ. ಇದು ಸರಿಯಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

NARENDRA MODI 2

ಕನ್ನಡಿಗರನ್ನು ಮತ್ತೊಮ್ಮೆ ಜಲದಾಸ್ಯಕ್ಕೆ ದೂಡುವುದನ್ನು ನಾವು ಸಹಿಸುವುದಿಲ್ಲ ಎಂದು ಕಿಡಿಕಾರಿರುವ ಅವರು, ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲೂ ಕೇಂದ್ರವು ರಾಜ್ಯಕ್ಕೆ ಸೊನ್ನೆ ಸುತ್ತಿದೆ. ಕಳೆದ ಫೆಬ್ರವರಿ 18 ರಂದು ಸಭೆ ನಡೆಸಿದ ಕೇಂದ್ರ, ಗೋದಾವರಿಯಿಂದ 247 ಟಿಎಂಸಿ ನೀರನ್ನು ಕೃಷ್ಣಾ, ಪೆನ್ನಾರ್ ಮೂಲಕ ಕಾವೇರಿಗೆ ಹರಿಸುವ ಯೋಜನೆಯ ಮಾಹಿತಿ ನೀಡಿತು. ಇಷ್ಟು ನೀರನ್ನು ತೆಲಂಗಾಣ, ಆಂಧ್ರ, ತಮಿಳುನಾಡಿಗೆ ಮಾತ್ರ ಹಂಚಿತು. ಈ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕ ಪ್ರಮುಖ ಪಾಲುದಾರ ಮತ್ತು ಹಕ್ಕುದಾರ ರಾಜ್ಯ. ಆದರೆ, 247 ಟಿಎಂಸಿಯಲ್ಲಿ ರಾಜ್ಯಕ್ಕೆ ಸಿಕ್ಕಿರುವುದು ಶೂನ್ಯ. ಆ ಸಭೆಯಲ್ಲಿ ರಾಜ್ಯಕ್ಕೆ ಅಪಮಾನ ಮಾಡಲಾಯಿತು ಎಂಬ ಮಾಹಿತಿಯೂ ಬಂದಿತ್ತು ಎಂದು ಹೇಳಿದ್ದಾರೆ.

HD KUMARASWAMY

ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಹನಿ ನೀರನ್ನೂ ಹಂಚಿಕೆ ಮಾಡಿಲ್ಲ ಎಂದರೆ, ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕರ್ನಾಟಕದ ಮೇಲೆ ಅದೆಷ್ಟು ನಿರ್ಲಕ್ಷ್ಯ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು. ಕನ್ನಡಿಗರು ತಬ್ಬಲಿಗಳಾಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಂಸತ್ತಿನಲ್ಲಿ ಅಲವತ್ತುಕೊಂಡರೂ ಕೇಂದ್ರವು ಕನ್ನಡಿಗರ ಮೇಲೆ ಕಠಿಣ ನೀತಿ ಮುಂದುವರಿಸಿದೆ. ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ. ನೆಲ, ಜಲ, ಭಾಷೆ ವಿಚಾರದಲ್ಲಿ ದಕ್ಷಿಣ ರಾಜ್ಯಗಳನ್ನು ಒಡೆದಾಳುವ ಬಿಜೆಪಿಯ ಕುತ್ಸಿತ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ, ಕಮಿಷನರ್ ಅನುಮತಿ ಇಲ್ಲದೆ ಮಾಡಲು ಆಗುತ್ತಾ?- ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Live Tv
[brid partner=56869869 player=32851 video=960834 autoplay=true]

TAGGED:bjphd kumaraswamySouth Pinakini Riverಕುಮಾರಸ್ವಾಮಿದಕ್ಷಿಣ ಪಿನಾಕಿನಿ ನದಿಬಿಜೆಪಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
28 minutes ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
32 minutes ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
1 hour ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
2 hours ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
2 hours ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?