Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Bengaluru City

69ನೇ ಅಖಿಲ ಭಾರತ ಸಹಕಾರ ಸಪ್ತಾಹ – 54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Public TV
Last updated: November 19, 2022 6:33 pm
Public TV
Share
3 Min Read
cooperatives felicitate
SHARE

ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬೆಂಗಳೂರು ವಿಭಾಗದ 9 ಜಿಲ್ಲೆಗಳ 54 ಸಹಕಾರಿಗಳಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರು ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಗೋಪೂಜೆ ನೆರವೇರಿಸಿ ಸಹಕಾರಿ ಧ್ವಜಾರೋಹಣ ಮಾಡಿದರು. ಇದೇ ವೇಳೆ ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಿಸಲಾಯಿತು. ಬಳಿಕ ಸಹಕಾರ ಪತ್ರಿಕೆ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ವೋಟರ್‌ ಡೇಟಾ ಹಗರಣ ಆರೋಪ – ಕಾಂಗ್ರೆಸ್‌ ವಿರುದ್ಧ ರಾಜ್ಯ ಮುಖ್ಯಚುನಾವಣಾಧಿಕಾರಿ ಬಿಜೆಪಿ ದೂರು

cooperatives felicitate 1

ಕಾರ್ಯಕ್ರಮದಲ್ಲಿ ಮಾತನಾಡಿದ ಕಾಗೇರಿ, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಮೈಸೂರು ಉಸ್ತುವಾರಿ ಸಚಿವರಾಗಿ ಸೋಮಶೇಖರ್ (S.T.Somshekar) ಅವರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ವಿಶೇಷ ಮೆರುಗು ನೀಡಿದವರು ಎಂದು ಸೋಮಶೇಖರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.

ಸಹಕಾರ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರ. ಸಹಕಾರಿ ರತ್ನ ಪ್ರಶಸ್ತಿ ಪಡೆದ ಹಿರಿಯರು, ಸಹಕಾರಿ ಕ್ಷೇತ್ರದ ಏಳಿಗೆಗೆ ಅಪಾರವಾಗಿ ಶ್ರಮಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿನ ಸವಾಲುಗಳನ್ನು ಮೆಟ್ಟಿ ನಿಂತು ಜನಜೀವನಕ್ಕೆ ಬೇಕಾದ ಕೊಡುಗೆಗಳನ್ನು ಕೊಡಲು ಸಹಕಾರಿ ಸಪ್ತಾಹ ಕಾರ್ಯಕ್ರಮ ಸಹಕಾರಿಯಾಗಲಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಉತ್ತಮ ಸಲಹೆಗಳನ್ನು ನೀಡಲು ಈ ಸಹಕಾರ ಸಪ್ತಾಹ ಕಾರ್ಯಕ್ರಮ ಸಾಕ್ಷಿಯಾಗಬೇಕು. ಸಹಕಾರಿ ಸಂಘಗಳು ಜನತೆಯ ವಿಶ್ವಾಸ ಗಳಿಸುವುದರ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿವೆ ಎಂದು ಹೇಳಿದರು.

Vishweshwar Hegde Kageri 1

ಸಹಕಾರಿ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ, ರಾಜ್ಯದ 6 ಸಾವಿರಕ್ಕಿಂತ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ, ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ, ಯಶಸ್ವಿನಿ ಯೋಜನೆ ಮರುಜಾರಿ, 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆಗೆ ಸೋಮಶೇಖರ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗುಜರಾತ್ ಮೂಲದ ಗಣಿ ಉದ್ಯಮಿಗೆ ಶಾಸಕನಿಂದ 9 ಕೋಟಿ ದೋಖಾ ಆರೋಪ

ಯಶವಂತಪುರ ಕ್ಷೇತ್ರದಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. 209 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮಂಚನಬೆಲೆಯಿಂದ ಕುಡಿಯುವ ನೀರು ಕಲ್ಪಿಸುವ ಭಗೀರಥ ಪ್ರಯತ್ನ ಮಾಡಿದ್ದಾರೆ ಎಂದರು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ನ.14 ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ. 20 ವರ್ಷಕ್ಕೂ ಹೆಚ್ಚು ಕಾಲದಿಂದ ಸಹಕಾರ ಸಪ್ತಾಹ ಮಾಡಿಕೊಂಡು ಬಂದಿದ್ದೇನೆ. ಸಹಕಾರ ಮಹಾಮಂಡಳ ಮಾತೃ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಸಹಕಾರಿ ಕ್ಷೇತ್ರವನ್ನು ಮುನ್ನಡೆಸುವಲ್ಲಿ ಜಿ.ಟಿ.ದೇವೇಗೌಡ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

st somshekar

ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರದಿಂದ ಸಹಕಾರ ಸಚಿವರಾಗಿ ಕೆಲಸ ಮಾಡುತ್ತಿದ್ದೇನೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಅತಿಹೆಚ್ಚು ಸಾಲ ನೀಡಿದ್ದು ಬಸವರಾಜ ಬೊಮ್ಮಾಯಿ ಅವರ ಸರ್ಕಾರ. 5,700 ಕೋಟಿ ರೂ. ಸಾಲಮನ್ನಾ ಮಾಡಿದ್ದು ನಮ್ಮ ನೆಚ್ಚಿನ ನಾಯಕರಾದ ಬಿ.ಎಸ್.ಯಡಿಯೂರಪ್ಪ ಎಂದು ಬಣ್ಣಿಸಿದರು.

ಸಾಲ ಮನ್ನಾಕ್ಕಾಗಿ ಬಜೆಟ್‌ನಲ್ಲಿ ಹಣ ಒದಗಿಸಿ ಐತಿಹಾಸಿಕ ತೀರ್ಮಾನ ಮಾಡಿದ್ದು ಯಡಿಯೂರಪ್ಪ ಅವರು. ಕಾಂಗ್ರೆಸ್ ಸರ್ಕಾರ ಯಶಸ್ವಿನಿ ಯೋಜನೆಯನ್ನು ರದ್ದು ಮಾಡಿತು. ಆದರೆ ಬಿಜೆಪಿ ಸರ್ಕಾರ ಅದನ್ನು ಮರುಜಾರಿ ಮಾಡಿದೆ. ಈ ಮೂಲಕ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯೋಧರ ವಿರುದ್ಧ ಮೀಡಿಯಾ ಪಾಟ್ನರ್ಸ್‌ಗೆ ಜಯ – ಮಾಧ್ಯಮ ತಂಡಕ್ಕೆ ಸೌಹಾರ್ದ ಕ್ರಿಕೆಟ್ ಕಪ್

ಹಾಲು ಪೂರೈಸುವ ರೈತರಿಗೆ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಮುಖಾಂತರ ಸಾಲಸೌಲಭ್ಯ ಕಲ್ಪಿಸಲಾಗುವುದು. ಕ್ಷೇತ್ರದ ಜನತೆಯ ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೈಸೂರು ಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ದಸರಾ ಆಚರಣೆ ಮಾಡಲಾಯಿತು. ಸರ್ಕಾರ, ಪಕ್ಷಕ್ಕೆ ಮುಜುಗರವಾಗದಂತೆ ಕೆಲಸ ಮಾಡಿದ್ದೇನೆ. ಯಶವಂತಪುರ ಜನತೆಯ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇನೆ. ದ್ವೇಷದ ರಾಜಕಾರಣ ಮಾಡಿಲ್ಲ, ಮಾಡುವುದಿಲ್ಲ ಎಂದರು.

ಕ್ಷೇತ್ರದ ಡಾಂಬರೀಕರಣಕ್ಕೆ 200 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ರಾಜಕಾಲುವೆ ಸಮಸ್ಯೆ ಬಗೆಹರಿಸಲು 120 ಕೋಟಿ ಅನುದಾನ ಬಿಡುಗಡೆ ಆಗಿದೆ. ವಿಶ್ವೇಶ್ವರಯ್ಯ, ಬನಶಂಕರಿ 6ನೇ ಹಂತದ ಅಭಿವೃದ್ಧಿಗೆ 208 ಕೋಟಿ ಹಣ ಬಿಡುಗಡೆಯಾಗಿದೆ. ಕಾವೇರಿ ನೀರು ಪೂರೈಕೆ ಕಾಮಗಾರಿ ಆರಂಭವಾಗಿದೆ. ಮಂಚನಬೆಲೆಯಿಂದ 72 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಕೈಗೆತ್ತುಕೊಳ್ಳಲಾಗಿದೆ ಎಂದು ಹೇಳಿದರು. ನಂತರ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಮಾತನಾಡಿದರು.

Live Tv
[brid partner=56869869 player=32851 video=960834 autoplay=true]

TAGGED:bengalurucooperative week longG.T Devegowdas.t.somshekarsahakara Ratna AwardVishweshwar Hegde Kageriಎಸ್‌.ಟಿ.ಸೋಮಶೇಖರ್‌ಜಿ.ಟಿ.ದೇವೇಗೌಡಬೆಂಗಳೂರುವಿಶ್ವೇಶ್ವರ ಹೆಗಡೆ ಕಾಗೇರಿಸಹಕಾರ ರತ್ನಸಹಕಾರ ಸಪ್ತಾಹ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Agriculture Karnataka Budget
Bengaluru City

Budget 2026 | ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Public TV
By Public TV
38 seconds ago
Karnataka Budget
Bengaluru City

ಈ ಬಾರಿ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳೇನು?

Public TV
By Public TV
11 minutes ago
STILL.jpg
Latest

Karnataka Budget Live Updates

Public TV
By Public TV
22 minutes ago
Davanagere By Election Budget 2026
Davanagere

Budget 2026 | ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್ – 100 ಕೋಟಿ ಅನುದಾನ ಘೋಷಣೆ

Public TV
By Public TV
31 minutes ago
one rupee budget
Bengaluru City

Karnataka Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದೆಲ್ಲಿಗೆ?

Public TV
By Public TV
1 hour ago
Anna Bhagya 3
Bengaluru City

ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ: ಸಿದ್ದರಾಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?