ದೆಹಲಿ ಸಿಎಂ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು – ಮನೀಶ್ ಸಿಸೋಡಿಯಾ ಆರೋಪ

Public TV
2 Min Read
Arvind Kejriwal

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆ (Gujarat Assembly Election) ಹಾಗೂ ದೆಹಲಿಯ ಮಹಾನಗರಪಾಲಿಕೆ (MCD) ಚುನಾವಣಾ ಸೋಲಿನ ಭೀತಿಯಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಗಂಭೀರ ಆರೋಪ ಮಾಡಿದ್ದಾರೆ.

ಕೇಜ್ರಿವಾಲ್ ಹತ್ಯೆಗೆ ಸಂಚು ರೂಪಿಸಿದ್ದು, ದೆಹಲಿ ಸಂಸದ ಮನೋಜ್ ತಿವಾರಿ (Manoj Tiwari) ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮನೋಜ್ ತಿವಾರಿ ಕೇಜ್ರಿವಾಲ್ ಭದ್ರತೆಯ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಮರು ದಿವಸ ಸಿಸೋಡಿಯಾ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನ ಬಳಿಯೇ ಕೈ ನಾಯಕಿಯ ಕಾರು ಕಳ್ಳತನ – ವೀಡಿಯೋ ಪೋಸ್ಟ್ ಮಾಡಿ ಪಂಖೂರಿ ಪಾಠಕ್ ಕಿಡಿ

ಅರವಿಂದ್ ಕೇಜ್ರಿವಾಲ್ ಅವರನ್ನ ಹತ್ಯೆ ಮಾಡಲು ಬಿಜೆಪಿ ಸಂಚು ರೂಪಿಸಿದೆ. ಸಂಸದ ಮನೋಜ್ ತಿವಾರಿ ಬಹಿರಂಗವಾಗಿಯೇ ತಮ್ಮ ಗುಂಡಾಗಳಿಗೆ ದಾಳಿ ಮಾಡುವಂತೆ ಹೇಳುತ್ತಿದ್ದಾರೆ. ಇದಕ್ಕೆ ಸಂಪೂರ್ಣ ಯೋಜನೆ ರೂಪಿಸಿದ್ದಾರೆ. ಆದರೆ ಎಎಪಿ ಇಂತಹ ನೀಚ ರಾಜಕಾರಣಕ್ಕೆ ಹೆದರೋದಿಲ್ಲ. ಗೂಂಡಾಗಿರಿ ಮಾಡುವ ಜನರಿಗೆ ಅವರದ್ದೇ ರೀತಿಯಲ್ಲಿ ತಕ್ಕ ಉತ್ತರ ಕೊಡುತ್ತದೆ ಎಂದು ಸಿಸೋಡಿಯಾ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳಾ ನಾಯಕಿ ವಿರುದ್ಧ ಅಶ್ಲೀಲ ಟೀಕೆ ಆಡಿಯೋ ವೈರಲ್‌ – ಬಿಜೆಪಿ ನಾಯಕ ಸಸ್ಪೆಂಡ್

Manoj Tiwari

ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯ ಬಗ್ಗೆ ನಾನು ಕಳಕಳಿ ವ್ಯಕ್ತಪಡಿಸುತ್ತೇನೆ. ಏಕೆಂದರೆ ನಿರಂತರ ಭ್ರಷ್ಟಾಚಾರ, ಎಂಸಿಡಿ ಚುನಾವಣೆಯಲ್ಲಿ ಟಿಕೆಟ್ ಮಾರಾಟ, ಅತ್ಯಾಚಾರಿಗಳೊಂದಿಗೆ ಸ್ನೇಹ ಹಾಗೂ ಜೈಲಿನಲ್ಲಿ ಮಸಾಜ್ ಇಂತಹ ಹಲವು ಘಟನೆಗಳಿಂದ ಎಎಪಿ ಸ್ವಯಂ ಸೇವಕರು ಕೋಪಗೊಂಡಿದ್ದಾರೆ. ಅಲ್ಲದೇ ಕೆಲವು ಶಾಸಕರಿಗೂ ಥಳಿಸಿದ್ದಾರೆ. ದೆಹಲಿಯ ಮುಖ್ಯಮಂತ್ರಿಗಳಿಗೆ ಹೀಗೆ ಆಗಬಾರದು ಎಂದು ಹಿಂದಿಯಲ್ಲಿ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *