ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಪರವಾನಗಿ ಕೊಡಲು ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.
ಅಪರಿಚಿತ ಮೊಬೈಲ್ ನಂಬರ್ನಿಂದ ವಾಟ್ಸಪ್ ವಾಯ್ಸ್ ಮೆಸೇಜ್ವೊಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ (Dharwad) ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು
ವಾಯ್ಸ್ ಮೆಸೆಜ್ನಲ್ಲಿ ಏನಿದೆ?: ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನೂ ಮೇಲಾದ್ರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು ಎಂದು ಅಶ್ಲೀಲ ಪದಗಳನ್ನು ಬಳಕೆ ಮಾಡಿ ಮುತಾಲಿಕ್ಗೆ ಆ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ರಾಜಕಾರಣದಿಂದ ಹಣ ಗಳಿಸಲು ಐಎಎಸ್ ಅಧಿಕಾರಿಗಳು, ರೌಡಿಗಳು ಬರ್ತಾ ಇದ್ದಾರೆ: ಸಂತೋಷ ಹೆಗ್ಡೆ