ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ತಲೆ ಎತ್ತಿದೆ 15 ಅಡಿ ರಾಮನ ಮೂರ್ತಿ!

Public TV
1 Min Read
MYSURU BANK RAMA

– ಭಕ್ತಿ ಪೂರ್ವಕವಾಗಿ ಕೈ ಮುಗಿದು ಫೋಟೋ ಕ್ಲಿಕ್ಕಿಸಿಕೊಂಡು ಭಕ್ತರ ಸಂಭ್ರಮ

ಬೆಂಗಳೂರು: ಇಡೀ ದೇಶವೇ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕಾಗಿ ಕಾದು ಕುಳಿತಿದೆ. ರಾಮನಾಮದ ಜಪ ಎಲ್ಲ ಕಡೆ ಜೋರಾಗಿದೆ. ರಾಮ ಎಂಬ ಎರಡಕ್ಷರ ಹೊಸದೊಂದು ಅನುಭವ ನೀಡುತ್ತಿದೆ. ಅಯೋಧ್ಯೆಯಲ್ಲಿ (Ayodhya) ರಾಮಲಲ್ಲಾನ (Ram Lalla) ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ (Bengaluru) ಬೃಹತ್ ರಾಮನ ಮೂರ್ತಿ ಜನರನ್ನ ಆಕರ್ಷಿಸುತ್ತಿದೆ.

ಸೋಮವಾರ ಐತಿಹಾಸಿಕ ಬಾಲರಾಮನ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಕನ್ನಡಿಗ ಅರುಣ್ ಯೋಗಿರಾಜ್ (Arun Yogiraj) ಕೆತ್ತಿರೋ ಬಾಲರಾಮನ ವಿಗ್ರಹ ಮಂದಿರ ಸೇರಿದ್ದು, ಪ್ರಾಣಪ್ರತಿಷ್ಠಾಪನೆಯ ಕಾರ್ಯ ಸೋಮವಾರ ನಡೆಯಲಿದೆ. ಅಂದಿನ ಈ ವಿಜೃಂಭಣೆಯ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತುರದಿಂದ ಕಾಯುತ್ತಿದೆ. ಇದನ್ನೂ ಓದಿ: Ram Mandir: ಅಯೋಧ್ಯೆ ತಲುಪಿದ 1,265 ಕೆಜಿ ತೂಕದ ಪ್ರಸಾದದ ಲಡ್ಡು

MYSURU BANK RAMA 1

ಇನ್ನು ಸಿಲಿಕಾನ್ ಸಿಟಿಯ ಹೃದಯ ಭಾಗದಲ್ಲಿ 15 ಅಡಿಯ ಬೃಹತ್ ರಾಮನ ಫೈಬರ್ ಮೂರ್ತಿ ನೆಲೆ ನಿಂತಿದ್ದಾನೆ. ಹೌದು, ನೀಲಾಕಾರನಾಗಿ ಕಲಾವಿದರ ಕೈಯಲ್ಲಿ ಮೂಡಿರುವ ರಾಮನ ಮೂರ್ತಿ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿರುವ ಆಂಜನೇಯ ದೇವಾಲಯದ ಹೊರಗೆ ಬರುವ ಜನರಿಗೆ ದರ್ಶನ ನೀಡುತ್ತಿದ್ದಾನೆ. ಇದನ್ನೂ ಓದಿ: ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಜಲಧಾರೆ ಯಾವುದು? – ಶ್ರೀರಾಮ ಲಕ್ಷ್ಮಣ ತೀರ್ಥ ಹೆಸರಿಟ್ಟಿದ್ದು ಏಕೆ ಗೊತ್ತಾ?

ಬೃಹತ್ ರಾಮನ ವಿಗ್ರಹ ನೋಡಿದ ಜನ ಭಕ್ತಿಯಿಂದ ರಾಮನಿಗೆ ವಂದಿಸಿ, ಪೋಟೋ ತೆಗೆದುಕೊಂಡು ಹೋಗುತ್ತಿದ್ದಾರೆ. ನಗರದ ಕೇಂದ್ರಭಾಗದಲ್ಲಿ ನೆಲೆಸಿರುವ ಈ ರಾಮನ ವಿಗ್ರಹ ಜನವರಿ 23 ರವರೆಗೆ ಇರಲಿದ್ದು, ಬರುವ ಭಕ್ತರು ದರ್ಶನ ಪಡೆಯಬಹುದಾಗಿದೆ. ಇನ್ನು ಬೆಂಗಳೂರಿನ ನಾನಾ ಭಾಗಗಳಲ್ಲೂ ಇಂತಹದ್ದೇ ಮೂರ್ತಿ ಪ್ರತಿಷ್ಠಾಪಿಸಲು ತಯಾರಿ ಕೂಡ ನಡೆದಿದೆ. ಇದನ್ನೂ ಓದಿ: ಮಂತ್ರಾಕ್ಷತೆ ಬಳಿಕ ಮನೆ ಮನೆಗೂ ಭಗವಾಧ್ವಜ – ಬೀದರ್‌ನ ಮಹಿಳೆಯರ ಅಳಿಲು ಸೇವೆ!

Share This Article