ವಿಜಯನಗರ: ಶ್ರೀಮಂತ ಕುಟುಂಬಕ್ಕೆ ಸೇರಿದ 20 ವರ್ಷದ ಯುವತಿಯೊಬ್ಬಳು ಹೊಸಪೇಟೆಯಲ್ಲಿ (Hospet) ಜೈನ (Jain) ಸನ್ಯಾಸತ್ವ ಸ್ವೀಕರಿಸಿದ್ದಾಳೆ.
ಹೊಸಪೇಟೆ ಮೂಲದ ಶ್ರೀಮಂತ ಕುಟುಂಬಕ್ಕೆ ಸೇರಿದ ಜೈನ ಸಮುದಾಯದ ಯುವತಿ ಮುಮುಕ್ಷಾ ವಿಧಿ ಕುಮಾರಿ ಮಹಾವೀರ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಶ್ರೀ ಆದಿನಾಥ ಜೈನ ಶ್ವೇತಾಂಬರ ಸಂಘದ ವತಿಯಿಂದ ದೀಕ್ಷಾ ಕಾರ್ಯಕ್ರಮ ಮಲ್ಲಿಗೆ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮೋದಿ ಮತ ಭೇಟೆ – ಏನಿದು ಬಿಜೆಪಿ ರಣತಂತ್ರ?
- Advertisement 2
- Advertisement 3
ಹೊಸಪೇಟೆಯ ಉದ್ಯಮಿಯಾದ ದಿವಂಗತ ಕಾಂತಿಲಾಲಾ ಜಿ. ಜಿರಾವಲಾ ಮತ್ತು ರೇಖಾದೇವಿ ಜಿರಾವಲಾ ದಂಪತಿಯ ನಾಲ್ವರು ಪುತ್ರಿಯರಲ್ಲಿ ಮುಮುಕ್ಷಾ ಮೂರನೇಯವರು. 10ನೇ ತರಗತಿಯಲ್ಲಿ ಶೇ.94ರಷ್ಟು ಮತ್ತು ಪಿಯುಸಿಯಲ್ಲಿ ಶೇ.99ರಷ್ಟು ಫಲಿತಾಂಶ ಪಡೆದಿರುವ, ಪ್ರತಿಭಾನ್ವಿತ ವಿದ್ಯಾರ್ಥಿಯಾನಿಯಾಗಿದ್ದರು.
- Advertisement 4
ತಮ್ಮ ಬಾಲ್ಯದಿಂದಲೇ ಜೈನ ಸನ್ಯಾಸ ತತ್ವದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಮುಮುಕ್ಷು ಅಂತಿಮವಾಗಿ ಸನ್ಯಾಸತ್ವ ಸ್ವೀಕಾರ ಮಾಡಿದ್ದಾರೆ. ಇನ್ನೂ ಮುಮುಕ್ಷು ಅವರು ತಮ್ಮ 10 ಮತ್ತು 12ನೇ ವಯಸ್ಸಿನಲ್ಲಿ ಎರಡು ಬಾರಿ 48 ದಿನಗಳ ಉಪಧ್ಯಾನ ತಪ ಸಂಪನ್ನಗೊಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ತಟ್ಟಲಿದೆ ಇನ್ನೂ 10 ದಿನ ಕೊರೆಯುವ ಚಳಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k